ನಾಗೇಶ ಹೆಗಡೆ ಅವರ ಆಯ್ದ ಬರಹಗಳು
ನಾಗೇಶ ಹೆಗಡೆ
ನಾಗೇಶ ಹೆಗಡೆ ಅವರು ೧೪ ಫೆಬ್ರವರಿ ೧೯೪೮ರಂದು ಉ.ಕ. ಜಿಲ್ಲೆ ಶಿರಸಿ ಬಳಿಯ ಬಕ್ಕೆಮನೆಯಲ್ಲಿ ಜನಿಸಿದರು. ಖರಗಪುರ ಐಐಟಿ ಮತ್ತು ದೆಹಲಿಯ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯಗಳಲ್ಲಿ ಭೂಗರ್ಭಶಾಸ್ತ್ರ ಮತ್ತು ಪರಿಸರವಿಜ್ಞಾನ ಕುರಿತು ಅಧ್ಯಯನ ನಡೆಸಿದ ಅವರು ಕೆಲಕಾಲ ನೈನಿತಾಲ್‌ನ ಕುಮಾವೋ ವಿ.ವಿ.ಯಲ್ಲಿ ಪ್ರಾಧ್ಯಾಪಕರಾಗಿದ್ದರು; ಬಳಿಕ ದೀರ್ಘಕಾಲ ಪ್ರಜಾವಾಣಿ ಪತ್ರಿಕೆಯಲ್ಲಿ ಕೆಲಸ ಮಾಡಿ ನಿವೃತ್ತರಾದರು. ಪರಿಸರವಿಜ್ಞಾನ ಕುರಿತ ಇವರ ಹಲವಾರು ಪುಸ್ತಕಗಳಲ್ಲಿ ‘ಇರುವುದೊಂದೇ ಭೂಮಿ’, ‘ನಮ್ಮೊಳಗಿನ ಬ್ರಹ್ಮಾಂಡ’, ‘ಮುಷ್ಠಿಯಲ್ಲಿ ಮಿಲೆನಿಯಂ’ ಪ್ರಮುಖವಾದವು. ಕುಸುಮಾ ಸೊರಬ ಅವರನ್ನು ಕುರಿತ ‘ಶತಮಾನದ ಕುಸುಮ’ ಮತ್ತು ನಾಲ್ಕು ಸಂಪುಟಗಳ ‘ಕರ್ನಾಟಕ ಪರಿಸರ ಪರಿಸ್ಥಿತಿ’ ಕೃತಿಗಳನ್ನೂ ಇವರು ಸಂಪಾದಿಸಿದ್ದಾರೆ. ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಶಿವರಾಮಕಾರಂತ ಪ್ರಶಸ್ತಿ ಮೊದಲಾದ ಮನ್ನಣೆಗಳು ಇವರಿಗೆ ದೊರಕಿವೆ. ಪ್ರಸ್ತುತ ಪುಸ್ತಕ ʼನಾಗೇಶ ಹೆಗಡೆ ಅವರ ಆಯ್ದ ಬರಹಗಳುʼ ಇದರಲ್ಲಿ ಅವರ ಮುಖ್ಯ 20 ಬರಹಗಳಿಂದ ಕೂಡಿದೆ. ಉತ್ತಮ ಕನ್ನಡ ಭಾಷೆಯಲ್ಲಿರುವ ಬರಹಗಳು ಓದುಗರರಿಗೆ ಮುದ ನೀಡುತ್ತವೆ.

Additional information

Category

Author

Publisher

Book Format

Ebook

Pages

108

Language

Kannada

Year Published

2009

Reviews

There are no reviews yet.

Only logged in customers who have purchased this product may leave a review.