Ebook

ಯಾವ ಜನ್ಮದ ಮೈತ್ರಿ

$1.89

ಜಗತ್ತು ಕಂಡು, ಅದರ ಮೂಲೆ-ಮೂಲೆಗಳಲ್ಲಿ ಬದುಕಿ, ತಮ್ಮ ಲೋಕದೃಷ್ಟಿ ವಿಸ್ತರಿಸಿಕೊಂಡು, ಆಧುನಿಕತೆಯ ಒಳ-ಹೊರಗನ್ನು ಅರಿಯುತ್ತಲೇ ಸಂಪ್ರದಾಯಕ್ಕೆ ವಿಶಾಲತೆಯ ಚಾದರವನ್ನು ಹೊದಿಸಿದ ಸಿಂಫ್ ಸಾಹೇಬರು ನಮ್ಮಲ್ಲಿ ನಮ್ಮವರಾಗಿ ಬದುಕಿದ್ದು ಅವರ ದೊಡ್ಡತನ, ಅವರ ಸಂಸ್ಕಾರಕ್ಕೆ ಹಿಡಿದ ಕನ್ನಡಿ. ಆದರೆ, ನಾವು ಅವರಿಂದ ಕಲಿತದ್ದೇನು? ಅವರ ಶ್ರೀಮಂತಿಕೆಯನ್ನು ನಮ್ಮದಾಗಿಸಿಕೊಂಡದ್ದು ಹೇಗೆ? ಅವರ ಘನತೆ, ಸೂಕ್ಷ್ಮತೆ ಮತ್ತು ಪ್ರಬುದ್ಧತೆಗೆ ನಾವು ಸ್ಪಂದಿಸಿದ್ದು ಹೇಗೆ? ಅವರ ಭಾಷೆ, ಅವರ ಧರ್ಮ, ಅವರ ಸಂಸ್ಕೃತಿಯ ವಿಶೇಷಗಳಿಗೆ ನಾವು ತೆರೆದುಕೊಂಡದ್ದು ಹೇಗೆ? ಇವೆಲ್ಲವನ್ನು ನಾವು ಯೋಚಿಸಬೇಕಿದೆ. ಹೀಗೆ ಯೋಚಿಸುವುದರ ಮೂಲಕ ನಾವು ನಮ್ಮ ಸಂಕುಚಿತತೆ, ಸಣ್ಣತನ, ಅಹಂಕಾರ, ಅಸಹನೆ, ಅಂಧಾಭಿಮಾನವನ್ನು ಮೀರಬೇಕಿದೆ. ನಮಗೆ ಇರಬಹುದಾದ ನಮ್ಮ ಶ್ರೇಷ್ಠತೆಯ ವ್ಯಸನದ ಸೂಚನೆಗಳನ್ನು ಧಿಕ್ಕರಿಸಬೇಕಿದೆ. ಇಲ್ಲಿರುವ ಲೇಖನಗಳು ನಮಗೆ ಈ ದಿಕ್ಕಿನಲ್ಲಿ ಸಾಗುವುದಕ್ಕೆ ಅನುವು ಮಾಡಿಕೊಡಲಿವೆ.

‘ಒಳಗಿನವರು’ ಮತ್ತು ‘ಹೊರಗಿನವರು’ ಎಂಬ ಅಸಹನೆಯ ಚರ್ಚೆ ಎಲ್ಲ ಸಂಸ್ಕೃತಿಗಳಲ್ಲೂ, ಎಲ್ಲ ಕಾಲಕ್ಕೂ ನಡೆಯುತ್ತಲೇ ಬಂದಿದೆ. ಬಹಳಷ್ಟು ಸಂದರ್ಭಗಳಲ್ಲಿ ಈ ಚರ್ಚೆ ನಮ್ಮೆಲ್ಲ ನಡಾವಳಿಯ ಸುಪ್ತವಾಹಿನಿಯಾಗಿರುತ್ತದೆ. ಸಾಧಾರಣವಾಗಿ, ಸರ್ದಾರ್ ಚಿರಂಜೀವಿ ಸಿಂಫ್ ಅವರ ಬಗ್ಗೆ ನಾವು ಬೆರಗು, ಸಂತಸ, ಸಂಭ್ರಮ ವ್ಯಕ್ತಪಡಿಸುವುದು ಅವರು ದೂರದ ಪಂಜಾಬಿನಿಂದ ಬಂದು ನಮ್ಮ ಸೀಮೆಯ ಗುಣಕ್ಕೆ ಅದ್ಭುತವಾಗಿ ಹೊಂದಿಕೊಂಡರು ಎಂಬ ಕಾರಣಕ್ಕೆ. ಅವರು ನಮ್ಮ ಸಂಸ್ಕೃತಿಯ ಸೂಕ್ಷ್ಮ ಅರಿತರು; ನಮ್ಮ ಕಲೆ, ಸಂಗೀತ, ಸಾಹಿತ್ಯ ಪೋಷಿಸಿದರು; ನಮ್ಮ ಭಾಷೆ ಮತ್ತು ಅದರ ನುಡಿಗಟ್ಟನ್ನು ನಮಗಿಂತಲೂ ಚೆನ್ನಾಗಿ ಬಳಸಿದರು; ನಮ್ಮ ಹಬ್ಬಗಳ ಬಗ್ಗೆ ಹಿಗ್ಗಿದರು; ನಮ್ಮ ಊಟ, ಉಪ್ಪಿನಕಾಯಿ ಸವಿದರು; ಕೊನೆಗೆ, ನಮ್ಮ ನದಿಯಲ್ಲಿ ತಮ್ಮ ತಂದೆ-ತಾಯಿಯ ಮೋಕ್ಷ ಹುಡುಕಿದರು ಎಂಬ ಕಾರಣಕ್ಕೆ. ಅಂದರೆ, ‘ಮಾದರಿಯ ಹೊರಗಿನವರಾದರು’ ಎಂಬುದಕ್ಕೆ. ಇದೆಲ್ಲವೂ ಸರಿಯೆ. ಇದೆಲ್ಲವೂ ಅವರ ಹೆಗ್ಗಳಿಕೆ. ಆದರೆ, ಅವರನ್ನು ಮೆಚ್ಚಿಕೊಳ್ಳಲು ಇದಷ್ಟೆ ಸುಲಭದ ತರ್ಕ ಸಾಲದು.
ಜಗತ್ತು ಕಂಡು, ಅದರ ಮೂಲೆ-ಮೂಲೆಗಳಲ್ಲಿ ಬದುಕಿ, ತಮ್ಮ ಲೋಕದೃಷ್ಟಿ ವಿಸ್ತರಿಸಿಕೊಂಡು, ಆಧುನಿಕತೆಯ ಒಳ-ಹೊರಗನ್ನು ಅರಿಯುತ್ತಲೇ ಸಂಪ್ರದಾಯಕ್ಕೆ ವಿಶಾಲತೆಯ ಚಾದರವನ್ನು ಹೊದಿಸಿದ ಸಿಂಫ್ ಸಾಹೇಬರು ನಮ್ಮಲ್ಲಿ ನಮ್ಮವರಾಗಿ ಬದುಕಿದ್ದು ಅವರ ದೊಡ್ಡತನ, ಅವರ ಸಂಸ್ಕಾರಕ್ಕೆ ಹಿಡಿದ ಕನ್ನಡಿ. ಆದರೆ, ನಾವು ಅವರಿಂದ ಕಲಿತದ್ದೇನು? ಅವರ ಶ್ರೀಮಂತಿಕೆಯನ್ನು ನಮ್ಮದಾಗಿಸಿಕೊಂಡದ್ದು ಹೇಗೆ? ಅವರ ಘನತೆ, ಸೂಕ್ಷ್ಮತೆ ಮತ್ತು ಪ್ರಬುದ್ಧತೆಗೆ ನಾವು ಸ್ಪಂದಿಸಿದ್ದು ಹೇಗೆ? ಅವರ ಭಾಷೆ, ಅವರ ಧರ್ಮ, ಅವರ ಸಂಸ್ಕೃತಿಯ ವಿಶೇಷಗಳಿಗೆ ನಾವು ತೆರೆದುಕೊಂಡದ್ದು ಹೇಗೆ? ಇವೆಲ್ಲವನ್ನು ನಾವು ಯೋಚಿಸಬೇಕಿದೆ. ಹೀಗೆ ಯೋಚಿಸುವುದರ ಮೂಲಕ ನಾವು ನಮ್ಮ ಸಂಕುಚಿತತೆ, ಸಣ್ಣತನ, ಅಹಂಕಾರ, ಅಸಹನೆ, ಅಂಧಾಭಿಮಾನವನ್ನು ಮೀರಬೇಕಿದೆ. ನಮಗೆ ಇರಬಹುದಾದ ನಮ್ಮ ಶ್ರೇಷ್ಠತೆಯ ವ್ಯಸನದ ಸೂಚನೆಗಳನ್ನು ಧಿಕ್ಕರಿಸಬೇಕಿದೆ. ಇಲ್ಲಿರುವ ಲೇಖನಗಳು ನಮಗೆ ಈ ದಿಕ್ಕಿನಲ್ಲಿ ಸಾಗುವುದಕ್ಕೆ ಅನುವು ಮಾಡಿಕೊಡಲಿವೆ.

Additional information

Author

Publisher

Book Format

Ebook

Language

Kannada

Pages

264

Year Published

2021

Category

Reviews

There are no reviews yet.

Only logged in customers who have purchased this product may leave a review.