ಸು.ರಂ. ಎಕ್ಕುಂಡಿ
ಸುಬ್ಬಣ್ಣ ರಂಗನಾಥ ಎಕ್ಕುಂಡಿಯವರು ೨೦, ಜನವರಿ ೧೯೨೩ರಂದು ರಾಣಿಬೆನ್ನೂರಿನಲ್ಲಿ ಜನಿಸಿದರು; ತಂದೆ – ರಂಗಾಚಾರಿ ಎಕ್ಕುಂಡಿ, ತಾಯಿ – ರಾಜಕ್ಕ. ಹದಿನೈದನೆಯ ವಯಸ್ಸಿನಲ್ಲಿ ಇವರು ತಮ್ಮ ಶಾಲಾ ದಿನಗಳಲ್ಲಿಯೇ ಬರಹ ಆರಂಭಿಸಿದರು. ಸಾಂಗ್ಲಿಯ ವಿಲ್ಲಿಂಗ್ಟನ್ ಕಾಲೇಜಿನಲ್ಲಿ ಅಭ್ಯಾಸ ಮಾಡಿದರು. ಉತ್ತರಕನ್ನಡದ ಬಂಕಿಕೊಡ್ಲದ ಆನಂದಾಶ್ರಮ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ವೃತ್ತಿ ಮಾಡಿದರು; ಅಲ್ಲಿಯ ಸ್ಥಳೀಯ ಜಾನಪದ ಕಥನಸಂಪ್ರದಾಯಗಳಿಂದ ವಿಶೇಷವಾಗಿ ಆಕರ್ಷಿತರಾದರು. ‘ಕಥನ ಕವನಗಳು’, ‘ಬಕುಲದ ಹೂವುಗಳು’, ‘ಹಾವಾಡಿಗರ ಹುಡುಗ’ ಮುಂತಾದವು ಇವರ ಪ್ರಮುಖ ಕೃತಿಗಳು. ಮಾಧ್ವದರ್ಶನ ಮತ್ತು ಕಾರ್ಲ್‌ಮಾರ್ಕ್ಸ್ ಚಿಂತನೆಗಳಿಂದ ಏಕಕಾಲಕ್ಕೆ ಪ್ರಭಾವಿತರಾಗಿರುವ ವಿಶಿಷ್ಟ ಕವಿ – ಎಂದು ಇವರನ್ನು ಗುರುತಿಸಲಾಗಿದೆ. ಕಥನಕಾವ್ಯ ಪ್ರಕಾರಕ್ಕೆ ಇವರ ಕೊಡುಗೆ ಗಣನೀಯ. ಇವರಿಗೆ ಸೋವಿಯೆತ್ ಲ್ಯಾಂಡ್ ನೆಹರೂ ಪ್ರಶಸ್ತಿ, ಕರ್ನಾಟಕ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳು ದೊರಕಿವೆ. ಎಕ್ಕುಂಡಿಯವರು ೨೦, ಆಗಸ್ಟ್ ೧೯೯೫ರಂದು ನಿಧನಹೊಂದಿದರು.

ಕನ್ನಡ ಸಾಹಿತ್ಯವನ್ನು ಪ್ರವೇಶಿಸಬಯಸುವ ಹೊಸ ಓದುಗರಿಗೆ ಕನ್ನಡದ ಪ್ರಮುಖ ಲೇಖಕರ ಆಯ್ದ ಬರಹಗಳ ಕಿರುವಾಚಿಕೆಗಳು ಲಭ್ಯವಾಗಬೇಕು – ಎಂಬ ಉದ್ದೇಶವಿಟ್ಟುಕೊಂಡು ಅಕ್ಷರ ಪ್ರಕಾಶನವು ಈ ಪುಸ್ತಕಮಾಲಿಕೆಯನ್ನು ಆರಂಭಿಸಿದೆ. ತಲಾ ೧೦೮ ಪುಟಗಳ ಈ ಪುಸ್ತಕಗಳಲ್ಲಿ – ಆಧುನಿಕಪೂರ್ವ ಕನ್ನಡದ ಮಹತ್ಕೃತಿಗಳೂ (ಟಿಪ್ಪಣಿಗಳೊಂದಿಗೆ) ಹಾಗೂ ಹೊಸಗನ್ನಡದ ಪ್ರಮುಖ ಲೇಖಕರ ಆಯ್ದ ಕಥೆ-ಕವನ-ಪ್ರಬಂಧಗಳೂ ಮತ್ತು ಕೆಲವು ಕನ್ನಡೇತರ ಲೇಖಕರ ಆಯ್ದ ಬರಹಗಳ ಸಂಗ್ರಹಗಳೂ ಸೇರಿವೆ. ಆಯಾ ಲೇಖಕರನ್ನು ಮೊದಲ ಬಾರಿಗೆ ಪರಿಚಯಿಸಿಕೊಳ್ಳುವವರಿಗೆ ಉಪಯುಕ್ತವಾಗುವಂತೆ ಈ ಪುಸ್ತಕಗಳ ವಸ್ತು-ವಿನ್ಯಾಸಗಳನ್ನು ರೂಪಿಸಲಾಗಿದೆ. ಮಾರುಕಟ್ಟೆಗೆ ಬಿಡುಗಡೆಯಾಗುವ ಜತೆಗೆ, ಈ ಮಾಲಿಕೆಯ ಪುಸ್ತಕಗಳನ್ನು ನೀನಾಸಮ್ ಪ್ರತಿಷ್ಠಾನವು ನಡೆಸುತ್ತಿರುವ ಸಾಹಿತ್ಯ ಅಧ್ಯಯನ ಶಿಬಿರಗಳಲ್ಲಿ ಪಠ್ಯಗಳಾಗಿಯೂ ಬಳಸಲಾಗುತ್ತದೆ.

Additional information

Author

Publisher

Book Format

Ebook

Language

Kannada

Category

Reviews

There are no reviews yet.

Only logged in customers who have purchased this product may leave a review.