ಬನ್ನಂಜೆ ಗೋವಿಂದಾಚಾರ್ಯರು ೧೯೩೬ august ೩ ಉಡುಪಿ ಜಿಲ್ಲೆಯ ಅಂಬಲಪಾಡಿಯಲ್ಲಿ ೧೯೩೬ರಲ್ಲಿ ಜನಿಸಿದರು. ದೇಶದ ಪ್ರಮುಖ ವಿದ್ವಾಂಸರಲ್ಲಿ ಒಬ್ಬರು. ತಮ್ಮ ಪ್ರವಚನಗಳ ಮೂಲಕ ತತ್ವ ಪ್ರಚಾರ ಕೈಗೊಂಡಿದ್ದಾರೆ. ಮಾಧ್ವ ತತ್ವದಲ್ಲಿ ಅಮೋಘ ಪಾ೦ಡಿತ್ಯ ಸಾಧಿಸಿರುವ ಇವರು ಅನೇಕ ಕೃತಿಗಳನ್ನು ರಚಿಸಿದ್ದಾರೆ. ಕನ್ನಡ ಹಾಗೂ ಸಂಸ್ಕೃತ ಭಾಷೆಯಲ್ಲಿ ಅನೇಕ ಕೃತಿಗಳನ್ನು ರಚಿಸಿದ್ದಾರೆ. ಇವರು ಪ್ರಸಿದ್ಧ ವಾಗ್ಮಿಗಳು, ಆಧ್ಯಾತ್ಮಿಕ ಪ್ರವಚನಕಾರರು ಹಾಗೂ ಚಿಂತಕರೂ ಆಗಿದ್ದರು. ಶ್ರೀಯುತರು ಶಿವಳ್ಳಿಯ ಮಾಧ್ವಬ್ರಾಹ್ಮಣ ಸಂಪ್ರದಾಯಿಗಳು, ಅನೇಕ ಸಂಸ್ಕೃತ ಕೃತಿಗಳನ್ನು ಕನ್ನಡಕ್ಕೆ ಅನುವಾದ ಮಾಡಿದ್ದಾರೆ.
ಬಾಣಭಟ್ಟನ ಕಾದಂಬರಿ,
ಕಾಳೀದಾಸನ ಶಾಕುಂತಲಾ,
ಶೂದ್ರಕನ ’ಮೃಚ್ಛಕಟಿಕ’ ಇತ್ಯಾದಿ ಚಾರಿತ್ರಿಕ ಕೃತಿಗಳು ಇವರ ಅನುವಾದಿತ ಕೃತಿಗಳಲ್ಲಿ ಪ್ರಮುಖವಾದುವು.