Jayashree Deshpande

Jayashree Deshpande

ಜಯಶ್ರೀ ದೇಶಪಾಂಡೆ ಅವರು ಮೂಲತಃ ವಿಜಯಪುರದವರು. ಮನಃಶಾಸ್ತ್ರ ಹಾಗೂ ಇಂಗ್ಲಿಷ್ ನಲ್ಲಿ ಸ್ನಾತಕೋತ್ತರ ಪದವೀಧರರು.ಕೃತಿಗಳು : ಪದ್ಮಿನಿ, ಮೂರನೆಯ ಹೆಜ್ಜೆ, ರೇಖೆಗಳ ನಡುವೆ, ಸ್ಥವಿರ ಜಂಗಮಗಳಾಚೆ ಹಾಗೂ ಉತ್ತರಾರ್ಧ (ಕಥಾ ಸಂಕಲನಗಳು), ಯತ್ಕಿಂಚಿತ್ (ಕವನ ಸಂಕಲನ),ಮಾಯಿ ಕೆಂದಾಯಿ ಸ್ಮೃತಿ ಲಹರಿ (ಲಲಿತ ಪ್ರಬಂಧ ಸಂಕಲನ) ಹೌದದ್ದು ಅಲ್ಲ‌ ಅಲ್ಲದ್ದು ಹೌದು (ಹಾಸ್ಯಲೇಖನ ಸಂಕಲನ), ಕಾಲಿಂದಿ (ಮಯೂರ), ಕೆಂಪು ಹಳದಿ ಹಸಿರು (ತರಂಗ), ದೂರ ದಾರಿಯ ತೀರ (ತರಂಗ) , ಬೇವು‌ (ವಿಜಯ ಕರ್ನಾಟಕ), ಚಕ್ರವಾತ (ನೂತನ), ಸರಸ್ವತಿ ಕಾಯದ ದಿನವಿಲ್ಲ. (ಉದಯವಾಣಿ) ಇವು ಧಾರಾವಾಹಿಯಾಗಿ ವಿವಿಧ ಪತ್ರಿಕೆಗಳಲ್ಲಿ ಪ್ರಕಟಿತ ಕಾದಂಬರಿಗಳು.:ಪ್ರಥಮ್ ಬುಕ್ಸ್ ಸಂಸ್ಥೆಗಾಗಿ ಸ್ವಂತ ಕಥೆಗಳಲ್ಲದೆ ಮರಾಠೀ ಮತ್ತು ಇಂಗ್ಲಿಷ್ಶ್ ಭಾಷೆಗಳಿಂದ ಕನ್ನಡಕ್ಕೆ ಭಾವಾನುವಾದ ಮಾಡಿದ ನಲವತ್ತರಷ್ಟು ಪುಸ್ತಕಗಳು ಪ್ರಕಟವಾಗಿವೆ. ಕನ್ನಡ ಸಾಹಿತ್ಯ ಪರಿಷತ್ತಿನ ನೀಲಗಂಗಾ ಪ್ರಶಸ್ತಿ.(ಯತ್ಕಿಂಚಿತ್- ಕವನ ಸಂಕಲನಕ್ಕೆ ),ಕರ್ನಾಟಕ ಲೇಖಕಿಯರ ಸಂಘ ಕೊಡಮಾಡುವ ‘ಸುಧಾ ಮೂರ್ತಿ ತ್ರಿವೇಣಿ ಸಾಹಿತ್ಯ ಪ್ರಶಸ್ತಿ’ (ಸ್ಥವಿರ ಜಂಗಮಗಳಾಚೆ’ ಕಥಾ ಸಂಕಲನಕ್ಕೆ),ಅತ್ತಿಮಬ್ಬೆ ಪ್ರಶಸ್ತಿ. (ಹೌದದ್ದು ಅಲ್ಲ ಅಲ್ಲದ್ದು ಹೌದು- ಲಲಿತ ಪ್ರಬಂಧ ಸಂಕಲನಕ್ಕೆ), ಗೋರೂರು ಪ್ರತಿಷ್ಠಾನದ ‘ಶ್ರೇಷ್ಠ ಪುಸ್ತಕ’ ಪ್ರಶಸ್ತಿ.( ಮೂರನೆಯ ಹೆಜ್ಜೆ- -ಕಥಾಸಂಕಲನಕ್ಕೆ), ರಾಜ್ಯಮಟ್ಟದ ಕಾದಂಬರಿ ವಿಮರ್ಶಾ ಪ್ರಶಸ್ತಿ. ಅತ್ತಿಮಬ್ಬೆ ಪ್ರತಿಷ್ಠಾನದಿಂದ.

Books By Jayashree Deshpande