Laxman Badami

Laxman Badami

ಲಕ್ಷ್ಮಣ ಬಾದಾಮಿ ಅವರು ಮೂಲತಃ ಬಾಗಲಕೋಟ ಜಿಲ್ಲೆ ಸಿರೂರು ಗ್ರಾಮದವರು, ಲಕ್ಷ್ಮಣ ಬಾದಾಮಿ ಅವರ ಮೂಲ ಹೆಸರು ಲಕ್ಷ್ಮಣ ತುಕಾರಾಮ ಬಾದಾಮಿ. 2008ರಿಂದ ಸರಕಾರಿ ಪ್ರೌಢಶಾಲೆ ಕುರುಕುಂದದಲ್ಲಿ ಚಿತ್ರಕಲಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ‘ಭವ’, ‘ಬೇರು ಮತ್ತು ಬೆವರು’, ‘ಒಂದು ಚಿಟಿಕೆ ಮಣ್ಣು’ ಎಂಬ ಕಥಾಸಂಕಲನಗಳನ್ನು ಪ್ರಕಟಿಸಿದ್ದಾರೆ. ‘ಮನುಷ್ಯರು ಬೇಕಾಗಿದ್ದಾರೆ’ ಅವರ ಪ್ರಕಟಿತ ಕವನ ಸಂಕಲನ. ‘ರೂಪ ನಿರೂಪ’ ಪೇಂಟಿಂಗ್ಸ್ ಗಳ ಕುರಿತ ಕೃತಿಯಾಗಿದೆ.

Books By Laxman Badami