• -40%

    ಮಲ್ಲಿಕಾರ್ಜುನ ಹಿರೇಮಠರ ಕೃತಿಗಳ ಅವಲೋಕನ

    0

    ಮಲ್ಲಿಕಾರ್ಜುನ ಹಿರೇಮಠರ ಕೃತಿಗಳ ಅವಲೋಕನ:
    ಈ ಕೃತಿಯು ಮಲ್ಲಿಕಾರ್ಜುನ ಹಿರೇಮಠ ಅವರ ಕೃತಿಗಳ ವಿಮರ್ಶೆಗಳನ್ನು ಒಳಗೊಂಡಿದೆ.

    Original price was: $1.20.Current price is: $0.72.
    Add to basket
  • -40%

    ಕೃತಿ ಜಗತ್ತು

    0

    ಕೃತಿ ಜಗತ್ತು:
    ‘ಕೃತಿ ಜಗತ್ತು’ ಎಂಬ ಈ ಗ್ರಂಥದಲ್ಲಿ 26 ಕೃತಿಗಳನ್ನು ಕುರಿತ ಅಧ್ಯಯನಾತ್ಮಕ ಬರಹಗಳಿವೆ.
    ಜಗತ್ತಿನ ಕೃತಿಗಳು ಇಲ್ಲಿ ಅಡಕವಾಗಿರುವ ಕಾರಣ, ಈ ಗ್ರಂಥಕ್ಕೆ ‘ಕೃತಿ ಜಗತ್ತು’ ಎನ್ನುವ ಶೀರ್ಷಿಕೆ ಅರ್ಥಪೂರ್ಣವಾಗಿದೆ.

    Original price was: $3.72.Current price is: $2.23.
    Add to basket
  • -40%

    ಮೊಗ್ಗಿನ ಮಾತು

    0

    ಮೊಗ್ಗಿನ ಮಾತು:

    ಶ್ರೀ ಪಳಕಳ ಸೀತಾರಾಮ ಭಟ್ಟರ ಸಮಗ್ರ ಕೃತಿಗಳ ಕುರಿತು ಅಧ್ಯಯನ ಮಾಡಿ ಬರೆದಿರುವ ಪುಸ್ತಕ ಈ `ಮೊಗ್ಗಿನ ಮಾತು’. ಒಂದನೆ ಅಧ್ಯಾಯದಲ್ಲಿ ಮಕ್ಕಳ ಸಾಹಿತ್ಯ ಎಂದರೇನು? ಎಂಬುವುದರ ಕುರಿತು ಚಿಂತನೆಯಿದೆ. ಎರಡನೆ ಅಧ್ಯಾಯದಲ್ಲಿ ಪಳಕಳರ ಬದುಕು ಹಾಗೂ ಬರಹಗಳ ಕುರಿತು ಚರ್ಚಿಸಲಾಗಿದೆ. ಅಧ್ಯಾಯ ಮೂರರಲ್ಲಿ ಪಳಕಳರ ಮಕ್ಕಳ ಕವನಗಳನ್ನು ಮನೋವೈಜ್ಞಾನಿಕ ಹಾಗೂ ಶೈಕ್ಷಣಿಕ ನೆಲೆಗಳಲ್ಲಿ ಅಧ್ಯಯನ ಮಾಡಲಾಗಿದೆ. ನಾಲ್ಕನೆ ಅಧ್ಯಾಯದಲ್ಲಿ ಪಳಕಳರ ಮಕ್ಕಳ ಕಥೆಗಳ ಕಾಲ್ಪನಿಕ ಹಾಗೂ ವಾಸ್ತವವಾದಿ ನೆಲೆಗಳನ್ನು ಪಂಜೆ ಮಂಗೇಶರಾಯರ ಕಥೆಗಳೊಂದಿಗೆ ಇಟ್ಟು ತೌಲನಿಕವಾಗಿ ಅಧ್ಯಯನ ಮಾಡಲಾಗಿದೆ. ಐದನೆ ಅಧ್ಯಾಯದಲ್ಲಿ ಮಕ್ಕಳ ಹಾಗೂ ಹೆತ್ತವರ ಅಭಿಪ್ರಾಯಗಳ ಸಂಗ್ರಹದ ಮೂಲಕ ಪಳಕಳರ ಕಥೆಗಳ ಹಾಗೂ ಕವನಗಳ ಪ್ರಾಯೋಗಿಕ ಅಧ್ಯಯನ ನಡೆಸಲಾಗಿದೆ. ಆರನೆ ಅಧ್ಯಾಯದಲ್ಲಿ `ಮಕ್ಕಳ ನಾಟಕ’ ಎಂದರೇನು? ಅವುಗಳಿಂದ ಮಕ್ಕಳಿಗೇನು ಪ್ರಯೋಜನ? ಮಕ್ಕಳ ನಾಟಕ ಹಾಗೂ ಪ್ರೌಢನಾಟಕ ಎಂಬ ಪ್ರತ್ಯೇಕ ವಿಭಾಗದ ಅಗತ್ಯವಿದೆಯೆ? ಎಂಬುದನ್ನು ಅನುಭವಿ ರಂಗಕರ್ಮಿಗಳ ಅಭಿಪ್ರಾಯಗಳ ಹಿನ್ನೆಲೆಯಲ್ಲಿ ಅಧ್ಯಯನ ಮಾಡಲಾಗಿದೆ.  ಏಳನೆಯ ಅಧ್ಯಾಯದಲ್ಲಿ ಪಳಕಳರ ಪ್ರೌಢಕೃತಿಗಳಾದ ಭಾವಗೀತೆಗಳು, ಚುಟುಕಗಳು ಹಾಗೂ ಕೀರ್ತನ ಕುಸುಮ ಕೃತಿಗಳ ಕುರಿತು ಚರ್ಚಿಸಲಾಗಿದೆ. ಕೊನೆಯ ಅಧ್ಯಾಯದಲ್ಲಿ ಪಳಕಳರ ಕೃತಿಗಳ ಸಮೀಕ್ಷೆಯ ಒಟ್ಟು ನೋಟವನ್ನು ಸಂಕ್ಷಿಪ್ತವಾಗಿ ನೀಡಲಾಗಿದೆ.

    Original price was: $4.20.Current price is: $2.52.
    Add to basket
  • -39%

    ಸಾಹಿತ್ಯ ಹಾಗೂ ನವ್ಯತೆ

    0

    ಸಾಹಿತ್ಯ ಹಾಗೂ ನವ್ಯತೆ:

    – ವಿನಾಯಕ ಕೃಷ್ಣ ಗೋಕಾಕ

    Original price was: $0.36.Current price is: $0.22.
    Add to basket
  • -39%

    Coleridge’s Aesthetics

    0

    Coleridge’s transcendentalism has been a stumbling block in the way of his admirers as well as student of his poetry and criticism. Readers are in love with his subtle-souled psychology in poetry and delicate imagery. They also admire his brilliant and perceptive criticism seen in his remakes on the genius of Shakespeare or the poetry diction of Wordsworth. But the philosophical and psychological assumptions that underline his criticism, especially with readers. Several efforts have been made to elucidate them but without much success.

    Original price was: $0.36.Current price is: $0.22.
    Add to basket
  • -50%

    ಟಿಪ್ಪು ಸುಲ್ತಾನನ ಹಕೀಕತ್

    0

    ಟಿಪ್ಪು ಸುಲ್ತಾನನ ಹಕೀಕತ್:

    (ಹಿಂದೂತ್ವ ಸೆಕ್ಯುಲರಿಸಂ ಮತ್ತು ಇಸ್ಲಾಮಿನ ಕ್ರಿಯಾಶೀಲತೆ)
    ಡಾ. ಮಹೇಶ್ ಕುಮಾರ್ ಸಿ. ಎಸ್

    ಟಿಪ್ಪು ಸುಲ್ತಾನನ ವಿಚಾರಗಳ ಬಗ್ಗೆ ರಚಿಸಿರುವ ಕೃತಿ ಇದಾಗಿದೆ.

    Original price was: $1.44.Current price is: $0.72.
    Add to basket
  • -40%

    ಮಕ್ಕಳ ಮನೋಲೋಕ-೨ ಆಕಾಶಕ್ಕೆ ಏಣಿ

    0

    ಮಕ್ಕಳ ಮನೋಲೋಕ-೨ ಆಕಾಶಕ್ಕೆ ಏಣಿ:

    (ಮಕ್ಕಳ ಮಾನಸಿಕ ಮತ್ತು ಬೌದ್ಧಿಕ ವಿಕಸನ ಮಾಲೆ)

    ನಾವು ಮಕ್ಕಳಿಗಾಗಿ ಮಾಡುವ ಎಲ್ಲ ಪ್ರಯತ್ನಗಳ ಅಂತಿಮ ಗುರಿ-ಮಕ್ಕಳ ಅರಳುವಿಕೆ.  ಪರಿಸರ, ಸಂಸ್ಕಾರ, ಸಾಹಿತ್ಯ, ಕಲೆ ಇವುಗಳೆಲ್ಲಾ ಪೂರಕವಾಗಿದ್ದಾಗ ಮಾತ್ರ ಮಕ್ಕಳ ಪೂರ್ಣ ಮಾನಸಿಕ ವಿಕಸನ ಸಾಧ್ಯ.   ವೃಷ್ಟಿಯಿಂದ ಸಮಷ್ಟಿ, ಪ್ರತಿಯೊಬ್ಬ ಮಗುವೂ ಶಕ್ತಿಯಾದಾಗಲೇ ರಾಷ್ಟ್ರದ ಬೆಳೆವಣಿಗೆ, ರಾಷ್ಟ್ರದ ಚಾರಿತ್ರ್ಯ, ರಾಷ್ಟ್ರದ ಸಾಮರ್ಥ್ಯ.  ಈ ಪೂರ್ಣತ್ವಕ್ಕಾಗಿಯೇ ಸತತ ಅನ್ವೇಷಣೆ ಮತ್ತು ಪ್ರಯತ್ನಶೀಲತೆಯ ಅಗತ್ಯ.
    ಯಾವ ಜೀವಿಯಲ್ಲೇ ಆಗಲಿ ಅದರ ಒಂದೊಂದು ವರ್ತನೆಗೆ ಸಂಬಂಧಪಟ್ಟಂತೆ ಒಂದೊಂದು ಮನೋವೃತ್ತಿ ಇರುತ್ತದೆ.  ಮೂಕ ಪ್ರಾಣಿಗಳ ಮತ್ತು ಸಣ್ಣ ಮಕ್ಕಳ ಮನೋವೃತ್ತಿಯನ್ನು ನಡವಳಿಕೆ, ಹೇಳಿಕೆಗಳ ಮೂಲಕ ನಾವು ಊಹಿಸಿ ತಿಳಿಯಬೇಕೇ ಹೊರತು ನೇರವಾಗಿ ತಿಳಿಯುವುದು ಅಸಾಧ್ಯ.  ಮಕ್ಕಳು ಬೆಳೆದು ಶಾಲೆಗೆ ಹೋಗಿ ಜ್ಞಾನ ಸಂಪಾದಿಸುವುದರ ಜೊತೆಗೆ ಅವರಿಗೆ ನೈತಿಕ ಬುನಾದಿಯಾಗಿ ಪ್ರಾಮಾಣಿಕತೆ, ಗುರು ಹಿರಿಯರಿಗೆ ಗೌರವ ತೋರಿಸುವುದು, ವಿನಯ ಶೀಲತೆ, ಶ್ರದ್ಧೆ, ಅಚ್ಚುಕಟ್ಟುತನ ಇವುಗಳನ್ನು ಕಲಿಸಿಕೊಟ್ಟು ಅವರ ಚಾರಿತ್ರ್ಯನಿರ್ಮಾಣ ಮಾಡುವ ಮನೋಶಿಕ್ಷಣದ ಅವಶ್ಯಕತೆಯೂ ಇದೆ.

    Original price was: $1.08.Current price is: $0.65.
    Add to basket
  • -40%

    ಹುಡುಗಾಟ- ಹುಡುಕಾಟ

    0

    ಹುಡುಗಾಟ- ಹುಡುಕಾಟ

    ‘ತರಂಗ’ ವಾರಪತ್ರಿಕೆ ಧಾರವಾಹಿ
    (ಹದಿಹರೆಯದವರಿಗಾಗಿ )

    ಇದು ಜನಪ್ರಿಯ ‘ತರಂಗ ವಾರಪತ್ರಿಕೆ’ಯಲ್ಲಿ ಧಾರಾವಾಹಿಯಾಗಿ ಹರಿದುಬಂದ ಹದಿ ಹರೆಯದವರಿಗಾಗಿ ಬರೆದ ಕಾದಂಬರಿ.  ಸರಿಯಾದ ಕ್ರಮದಲ್ಲಿ ಬೆಳೆದ ಮಕ್ಕಳ ಮನಸ್ಸಿನಲ್ಲಿ ಅದೆಷ್ಟು ಆತ್ಮವಿಶ್ವಾಸವಿರುತ್ತದೆ, ಎಂತಹಾ ಕಷ್ಟ ಬಂದರೂ ಅದನ್ನು ಹೇಗೆ ಎದುರಿಸುತ್ತಾರೆ, ಎನ್ನುವುದನ್ನು ವಿವರಿಸುವ ಪಶ್ಚಿಮಘಟ್ಟದ ಒಳಗನ್ನು ಸ್ವಲ್ಪವಾದರೂ ತೆರೆದಿಡಲು ಯತ್ನಿಸಿದ ಕಾದಂಬರಿ.  ಕಷ್ಟ ಬಂದಾಗ ಮನುಷ್ಯ ಇನ್ನಿಲ್ಲದಂತೆ ಹೋರಾಡುತ್ತಾನೆ.  ದೊಡ್ಡವರಾದರೂ ಅಷ್ಟೆ; ಮಕ್ಕಳೂ ಅಷ್ಟೆ.  ಪಶ್ಚಿಮಘಟ್ಟದ ಇದು ಜನಪ್ರಿಯ ‘ತರಂಗ ವಾರಪತ್ರಿಕೆ’ಯಲ್ಲಿ ಧಾರಾವಾಹಿಯಾಗಿ ಹರಿದುಬಂದ ಹದಿ ಹರೆಯದವರಿಗಾಗಿ ಬರೆದ ಕಾದಂಬರಿ.  ಸರಿಯಾದ ಕ್ರಮದಲ್ಲಿ ಬೆಳೆದ ಮಕ್ಕಳ ಮನಸ್ಸಿನಲ್ಲಿ ಅದೆಷ್ಟು ಆತ್ಮವಿಶ್ವಾಸವಿರುತ್ತದೆ, ಎಂತಹಾ ಕಷ್ಟ ಬಂದರೂ ಅದನ್ನು ಹೇಗೆ ಎದುರಿಸುತ್ತಾರೆ, ಎನ್ನುವುದನ್ನು ವಿವರಿಸುವ ಪಶ್ಚಿಮಘಟ್ಟದ ಒಳಗನ್ನು ಸ್ವಲ್ಪವಾದರೂ ತೆರೆದಿಡಲು ಯತ್ನಿಸಿದ ಕಾದಂಬರಿ.  ಕಷ್ಟ ಬಂದಾಗ ಮನುಷ್ಯ ಇನ್ನಿಲ್ಲದಂತೆ ಹೋರಾಡುತ್ತಾನೆ.  ದೊಡ್ಡವರಾದರೂ ಅಷ್ಟೆ; ಮಕ್ಕಳೂ ಅಷ್ಟೆ.  ಪಶ್ಚಿಮಘಟ್ಟದ ಅರಣ್ಯ ಈಗಲೂ ನಿಗೂಢವೇ.  ದಾರಿ ತಿಳಿದವರೂ ಅದರೊಳಗೆ ಸುತ್ತಿ ಬೆವರುವುದುಂಟು.  ದಾರಿ ತಿಳಿಯದ ಚಾರಣಿಗರೇ ಮಳೆಗಾಲದಲ್ಲಿ ದಿಕ್ಕು-ದೆಸೆ ತಿಳಿಯದೆ ಬದುಕು ಕಳೆದುಕೊಂಡಿರುವುದೂ ಉಂಟು. ಅರಣ್ಯವೆಂದರೇನೆಂದೇ ತಿಳಿಯದ ಮೂವರು ಉತ್ಸಾಹಿ ಹದಿಹರೆಯದವರು ಅಕಸ್ಮಾತ್ತಾಗಿ ಇಂತಹಾ ದಟ್ಟವಾದ ಅರಣ್ಯದೊಳಗೆ ಸಿಕ್ಕಿ ಹಾಕಿಕೊಂಡು ಬದುಕಿಗಾಗಿ ಹೋರಾಡುವುದನ್ನು ವಿವರಿಸುವುದೇ ಹುಡುಗಾಟವಾಡಲು ಹೋಗಿ ಹುಡುಕಾಟಕ್ಕೆ ದಾರಿಯಾದ ಈ ಹದಿಹರೆಯದವರ ಕಾದಂಬರಿ. ಆ ಪ್ರಾಯದವರ ಮನೋಭಾವ ಹೇಗಿರುತ್ತದೆ? ಅದರೊಂದು ಚಿತ್ರಣ ನೀಡುವ ಯತ್ನವೂ ಇಲ್ಲಿದೆ.  ‘ಕಷ್ಟ ಬಂದಾಗ ಎದೆಗುಂದದೆ ಅದನ್ನು ಎದುರಿಸುವುದು ಹೇಗೆ?’ ಎಂಬ ಚಿಂತನೆ ಹೇಗೆ ಕಷ್ಟವನ್ನು ಕೊನೆಗೂ ದೂರ ಮಾಡುತ್ತದೆ ಎನ್ನುವುದನ್ನು ಹದಿಹರೆಯದವರ ಜೊತೆಗೆ ದೊಡ್ಡವರೂ ಓದಬಹುದು.

    Original price was: $1.56.Current price is: $0.94.
    Add to basket
  • -40%

    ಮಕ್ಕಳ ಮನೋಲೋಕ – ೧  ಹಕ್ಕಿಯ ಹೆಗಲೇರಿ

    0

    ಮಕ್ಕಳ ಮನೋಲೋಕ – ೧  ಹಕ್ಕಿಯ ಹೆಗಲೇರಿ
    (ಮಕ್ಕಳ ಮಾನಸಿಕ ಮತ್ತು ಬೌದ್ಧಿಕ ವಿಕಸನ ಮಾಲೆ )

    ನಾವು ಮಕ್ಕಳಿಗಾಗಿ ಮಾಡುವ ಎಲ್ಲ ಪ್ರಯತ್ನಗಳ ಅಂತಿಮ ಗುರಿ-ಮಕ್ಕಳ ಅರಳುವಿಕೆ.  ಪರಿಸರ, ಸಂಸ್ಕಾರ, ಸಾಹಿತ್ಯ, ಕಲೆ ಇವುಗಳೆಲ್ಲಾ ಪೂರಕವಾಗಿದ್ದಾಗ ಮಾತ್ರ ಮಕ್ಕಳ ಪೂರ್ಣ ಮಾನಸಿಕ ವಿಕಸನ ಸಾಧ್ಯ.   ವೃಷ್ಟಿಯಿಂದ ಸಮಷ್ಟಿ, ಪ್ರತಿಯೊಬ್ಬ ಮಗುವೂ ಶಕ್ತಿಯಾದಾಗಲೇ ರಾಷ್ಟ್ರದ ಬೆಳೆವಣಿಗೆ, ರಾಷ್ಟ್ರದ ಚಾರಿತ್ರ್ಯ, ರಾಷ್ಟ್ರದ ಸಾಮರ್ಥ್ಯ.  ಈ ಪೂರ್ಣತ್ವಕ್ಕಾಗಿಯೇ ಸತತ ಅನ್ವೇಷಣೆ ಮತ್ತು ಪ್ರಯತ್ನಶೀಲತೆಯ ಅಗತ್ಯ.
    ಯಾವ ಜೀವಿಯಲ್ಲೇ ಆಗಲಿ ಅದರ ಒಂದೊಂದು ವರ್ತನೆಗೆ ಸಂಬಂಧಪಟ್ಟಂತೆ ಒಂದೊಂದು ಮನೋವೃತ್ತಿ ಇರುತ್ತದೆ.  ಮೂಕ ಪ್ರಾಣಿಗಳ ಮತ್ತು ಸಣ್ಣ ಮಕ್ಕಳ ಮನೋವೃತ್ತಿಯನ್ನು ನಡವಳಿಕೆ, ಹೇಳಿಕೆಗಳ ಮೂಲಕ ನಾವು ಊಹಿಸಿ ತಿಳಿಯಬೇಕೇ ಹೊರತು ನೇರವಾಗಿ ತಿಳಿಯುವುದು ಅಸಾಧ್ಯ.  ಮಕ್ಕಳು ಬೆಳೆದು ಶಾಲೆಗೆ ಹೋಗಿ ಜ್ಞಾನ ಸಂಪಾದಿಸುವುದರ ಜೊತೆಗೆ ಅವರಿಗೆ ನೈತಿಕ ಬುನಾದಿಯಾಗಿ ಪ್ರಾಮಾಣಿಕತೆ, ಗುರು ಹಿರಿಯರಿಗೆ ಗೌರವ ತೋರಿಸುವುದು, ವಿನಯ ಶೀಲತೆ, ಶ್ರದ್ಧೆ, ಅಚ್ಚುಕಟ್ಟುತನ ಇವುಗಳನ್ನು ಕಲಿಸಿಕೊಟ್ಟು ಅವರ ಚಾರಿತ್ರ್ಯನಿರ್ಮಾಣ ಮಾಡುವ ಮನೋಶಿಕ್ಷಣದ ಅವಶ್ಯಕತೆಯೂ ಇದೆ.

    Original price was: $1.08.Current price is: $0.65.
    Add to basket
  • -40%

    ಮಧುರವಾಗಲಿ ದಾಂಪತ್ಯ

    0
    Original price was: $1.44.Current price is: $0.86.
    Add to basket
  • -40%

    ಭಾರತ, ಇಸ್ಲಾಂ ಮತ್ತು ಗಾಂಧಿ

    0

    ಭಾರತ, ಇಸ್ಲಾಂ ಮತ್ತು ಗಾಂಧಿ:
    ಶ್ರೀ ಅರವಿಂದರ ಭವಿಷ್ಯವಾಣಿ
    ಮತ್ತು ಇತರ ಲೇಖನಗಳು
    ಗಾಂಧಿಯವರ ಮೇಲೂ ಹೆಚ್ಚು ಬೆಳಕು ಚೆಲ್ಲುವ, ದಿಗ್ದರ್ಶಕವಾದ ಸೂಕ್ತ ಲೇಖನಗಳು ಎಂದು ಭಾವಿಸುತ್ತೇನೆ. ಈಗ ನಮ್ಮೆದುರು ಇರುವುದು ರಾಷ್ಟ್ರ ರಕ್ಷಣೆಯ ಮಹಾ ಹೊಣೆ. ಅದಕ್ಕೆ ವಿಘ್ನವಾಗಿರುವ ಎಲ್ಲ ದುಷ್ಟ ವಿಚಾರಗಳನ್ನೂ, ಅಂಥ ಪರಂಪರೆಗಳನ್ನೂ, ಅವುಗಳನ್ನು ಹುಟ್ಟು ಹಾಕಿದವರನ್ನೂ ನಿರ್ದಾಕ್ಷಿಣ್ಯವಾಗಿ ಬಯಲು ಮಾಡಿ, ಅವುಗಳನ್ನು ಮೆಟ್ಟಿಯೇ ನಾವು ಮುಂದೆ ನಡೆದ ಹೊರತು ನಮಗೆ ಭವಿಷ್ಯವಿಲ್ಲ. ಕಣ್ಣು ಮುಚ್ಚಿ ಒಪ್ಪುವ, ಯಾರನ್ನೂ ಪೂಜಿಸುವ ಅಂಧಶ್ರದ್ಧೆ ಭಾರತೀಯ ಪರಂಪರೆಗೆ ದೂರವಾದುದು.

    Original price was: $1.80.Current price is: $1.08.
    Add to basket
  • -40%

    ಎಲ್ಲರಂಥವನಲ್ಲ ನನ್ನಪ್ಪ!

    0

    ಎಲ್ಲರಂಥವನಲ್ಲ ನನ್ನಪ್ಪ !
    ಅಪ್ಪನ ಕುರಿತ ಮಿಡಿತಗಳು
    ಈ ಪುಸ್ತಕದ ಮೂವತ್ತೇಳು ಲೇಖನಗಳು ಅಪ್ಪನ ಮೂವತ್ತೇಳು ಮುಖಗಳನ್ನು ಚಿತ್ರಿಸಿವೆ. ಮಗುವಿನ ಕಷ್ಟವನ್ನು ನೋಡಲಾರದೆ ಗಳಗಳನೆ ಅಳುವ ಅಪ್ಪ, ಮಗುವನ್ನು ಸರಿಯಾದ ಮಾರ್ಗದಲ್ಲಿ ನಡೆಯಿಸಲು ಕಠಿಣವಾಗಿ ಶಿಕ್ಷಿಸುವ ಅಪ್ಪ, ಮಗುವಿನೊಡನೆ ಗೆಳೆಯನಂತೆ ವರ್ತಿಸುವ ಅಪ್ಪ ಇವರೆಲ್ಲರೂ ಅಪ್ಪನ ಕರ್ತವ್ಯದಿಂದ ಪ್ರೇರಿತರಾದವರೆ. ಪ್ರತಿ ನಿಯಮಕ್ಕೊಂದು ಅಪವಾದವಿರುತ್ತದೆ ಎನ್ನುವಂತೆ, ತನ್ನವರನ್ನು ಮೋಸಗೊಳಿಸಿ ಓಡಿ ಹೋದಂತಹ ಅಪ್ಪನೂ ಇಲ್ಲಿದ್ದಾನೆ.
    ಅಪ್ಪನ ವ್ಯಕ್ತಿತ್ವವನ್ನು ಚಿತ್ರಿಸುತ್ತಿರುವಾಗಲೆ, ಇಲ್ಲಿಯ ಲೇಖನಗಳುಹಳೆಯ ತಲೆಮಾರಿನವರ ಜಗತ್ತಿನ ಚಿತ್ರವನ್ನೂ ನಮ್ಮೆದುರಿಗೆ ಇಡುತ್ತವೆ. ಆ ಕಾಲದ ನೀತಿ, ನಿಯಮಗಳು, ಆದರ್ಶ, ಹಿರಿಯರ ವರ್ತನೆಯ ಕ್ರಮ ಇವುಗಳ ಅನಾವರಣವೂ ಇಲ್ಲಿರುವ ಲೇಖನಗಳಲ್ಲಿ ಆಗಿದೆ.

    Original price was: $1.44.Current price is: $0.86.
    Add to basket
  • -40%

    ಮಕ್ಕಳೊಡನೆ ಆಟ-ಪಾಠ, ಒಡನಾಟ

    0

    ಮಕ್ಕಳೊಡನೆ ಆಟ-ಪಾಠ, ಒಡನಾಟ:

    ಇದು `ನಮ್ಮ ಮಕ್ಕಳು ಆಟ-ಪಾಠ, ಒಡನಾಟ’ ಎಂಬ ಹೆಸರಿನಲ್ಲಿ ಪ್ರಸಿದ್ಧ ದಿನಪತ್ರಿಕೆ `ಪ್ರಜಾವಾಣಿ’ ಯಲ್ಲಿ ಬರೆದ ಮತ್ತೊಂದು ಲೇಖನ ಮಾಲೆ. ಮಕ್ಕಳಿಂದ ಆನಂದ ಪಡೆಯಬೇಕಾದರೆ ಚಿಕ್ಕ ಮಕ್ಕಳ ಹಾಗೂ ಹದಿ ಹರೆಯದವರ ಶಾರೀರಕ ಮತ್ತು ಮಾನಸಿಕ ಬದಲಾವಣೆಗಳ ಬಗ್ಗೆ ಹೆತ್ತವರೂ ತಿಳಿದಿರಬೇಕು. ಇಲ್ಲದಿದ್ದರೆ ಮಕ್ಕಳೇಕೆ ಹಾಗೆ ಆಡುತ್ತಾರೆ ಎಂದೇ ತಿಳಿಯುವುದಿಲ್ಲ. ಮಕ್ಕಳ ಗುಣ-ಸ್ವಭಾವಗಳಂತೆ ಮಕ್ಕಳ ಸಮಸ್ಯೆಗಳೂ ಹಲವು. ತಿಳಿದಷ್ಟೂ ಇನ್ನೂ ತುಂಬ ಬಾಕಿ ಉಳಿದಿದೆ ಎನ್ನುವಷ್ಟು! ಈಗಂತೂ ಗೊಂದಲ ಮತ್ತು ಕಗ್ಗಂಟಾಗಿರುವ ಮಕ್ಕಳನ್ನು ಬೆಳೆಸುವುದರ ಬಗ್ಗೆ, ಅವರ ವಿದ್ಯಾಭ್ಯಾಸದ ಬಗ್ಗೆ ಬರೆಯುವುದು ಕೂಡ ಕಷ್ಟ ಎನಿಸುತ್ತಿದೆ. ಏಕೆಂದರೆ ಬಹಳಷ್ಟು ಹೆತ್ತವರೆ ಮಕ್ಕಳ ಎದುರು ಆಧುನಿಕ ತಂತ್ರಜ್ಞಾನದ ದುರ್ಲಾಭ ಪಡೆಯುವ ವ್ಯವಸ್ಥೆ ಮಾಡಿ, ಕೈ ತುಂಬ ಹಣ ನೀಡಿ, ತಪ್ಪುದಾರಿಯಲ್ಲಿ ನಡೆಸಿ ತಮ್ಮದೇ ಸರಿ ಎಂದು ಭಾವಿಸಿ ಮತ್ತೆ ಅವರನ್ನು ದೂರುವುದು ಕಾಣುತ್ತಿದ್ದೇವೆ. ಹಾಗಾಗಿ ಮಕ್ಕಳ ಬಗ್ಗೆ ತಿಳಿದಷ್ಟೂ ಅದು ಕಮ್ಮಿಯೇ ಎನಿಸುತ್ತಿದೆ. ಆಧುನಿಕತೆ ಬೆಳೆಯುತ್ತಾ ತಂತ್ರಜ್ಞಾನದ ಅಭಿವೃದ್ಧಿಯೂ ಆಗಿ ದಿನನಿತ್ಯ ಎಂಬಂತೆ ಆಧುನಿಕ ವಸ್ತುಗಳೂ ಮಾರುಕಟ್ಟೆಗೆ ಬರುತ್ತವೆ. ಮಾರುವವರು ಅದರ ಪ್ರಯೋಜನದ ಬಗ್ಗೆ ಇನ್ನಿಲ್ಲದಷ್ಟು ಹೇಳಿ ಆಮಿಷ ಒಡ್ಡುತ್ತಾರೆ. ಆದರೆ ಅದರಿಂದಾಗುವ ತೊಂದರೆಗಳ ಬಗ್ಗೆ ಚಕಾರ ಎತ್ತುವುದಿಲ್ಲ. ತಿಳಿದುಕೊಳ್ಳುವ ಹಂಬಲವೂ ಕಮ್ಮಿ. ಏಕೆಂದರೆ ಅದು ಪ್ರತ್ಯಕ್ಷವಾಗಿ ಕಾಣದೆ ಪರೋಕ್ಷವಾಗಿ ಕಾಡುತ್ತದೆ. ಪ್ರತ್ಯಕ್ಷವಾದ ಸಂಗತಿಗಳೇ ಅರಿವಿಗೆ ಬಾರದಿರುವಾಗ ಇನ್ನು ಪರೋಕ್ಷವಾಗಿದ್ದನ್ನು ಅರಿಯುವುದು ಹೇಗೆ? ಸಮಸ್ಯೆಗಳು ಉಲ್ಬಣಿಸಿದಾಗಲೇ ಅದರ ಅರಿವಾಗುವುದು! ಅವೆಲ್ಲದರ ಅರಿವಿನೊಂದಿಗೆ ಉದ್ವೇಗ ರಹಿತವಾಗಿ ಮಕ್ಕಳನ್ನು ಬೆಳೆಸುತ್ತಾ ಅವರೊಡನೆ ಆಟೋಟಗಳಲ್ಲಿ ಭಾಗಿಯಾಗಿ ಅವರನ್ನು ಬೆಳೆಸುತ್ತಲೇ ಅದರ ಆನಂದ ಅನುಭವಿಸಬೇಕು. ಅವರ ಸಮಸ್ಯೆಗಳಿಗೂ ಉತ್ತರವಾಗಬೇಕು.

    Original price was: $1.68.Current price is: $1.01.
    Add to basket
  • -40%

    ಮಕ್ಕಳ ಮನೋಲೋಕ -೩ ಗೆಲುವಿನ ಗುಟ್ಟು

    0

    ಮಕ್ಕಳ ಮನೋಲೋಕ -೩ ಗೆಲುವಿನ ಗುಟ್ಟು
    (ಮಕ್ಕಳ ಮಾನಸಿಕ ಮತ್ತು ಬೌದ್ಧಿಕ ವಿಕಸನ ಮಾಲೆ )
    ನಾವು ಮಕ್ಕಳಿಗಾಗಿ ಮಾಡುವ ಎಲ್ಲ ಪ್ರಯತ್ನಗಳ ಅಂತಿಮ ಗುರಿ-ಮಕ್ಕಳ ಅರಳುವಿಕೆ.  ಪರಿಸರ, ಸಂಸ್ಕಾರ, ಸಾಹಿತ್ಯ, ಕಲೆ ಇವುಗಳೆಲ್ಲಾ ಪೂರಕವಾಗಿದ್ದಾಗ ಮಾತ್ರ ಮಕ್ಕಳ ಪೂರ್ಣ ಮಾನಸಿಕ ವಿಕಸನ ಸಾಧ್ಯ.   ವೃಷ್ಟಿಯಿಂದ ಸಮಷ್ಟಿ, ಪ್ರತಿಯೊಬ್ಬ ಮಗುವೂ ಶಕ್ತಿಯಾದಾಗಲೇ ರಾಷ್ಟ್ರದ ಬೆಳೆವಣಿಗೆ, ರಾಷ್ಟ್ರದ ಚಾರಿತ್ರ್ಯ, ರಾಷ್ಟ್ರದ ಸಾಮರ್ಥ್ಯ.  ಈ ಪೂರ್ಣತ್ವಕ್ಕಾಗಿಯೇ ಸತತ ಅನ್ವೇಷಣೆ ಮತ್ತು ಪ್ರಯತ್ನಶೀಲತೆಯ ಅಗತ್ಯ.
    ಯಾವ ಜೀವಿಯಲ್ಲೇ ಆಗಲಿ ಅದರ ಒಂದೊಂದು ವರ್ತನೆಗೆ ಸಂಬಂಧಪಟ್ಟಂತೆ ಒಂದೊಂದು ಮನೋವೃತ್ತಿ ಇರುತ್ತದೆ.  ಮೂಕ ಪ್ರಾಣಿಗಳ ಮತ್ತು ಸಣ್ಣ ಮಕ್ಕಳ ಮನೋವೃತ್ತಿಯನ್ನು ನಡವಳಿಕೆ, ಹೇಳಿಕೆಗಳ ಮೂಲಕ ನಾವು ಊಹಿಸಿ ತಿಳಿಯಬೇಕೇ ಹೊರತು ನೇರವಾಗಿ ತಿಳಿಯುವುದು ಅಸಾಧ್ಯ.  ಮಕ್ಕಳು ಬೆಳೆದು ಶಾಲೆಗೆ ಹೋಗಿ ಜ್ಞಾನ ಸಂಪಾದಿಸುವುದರ ಜೊತೆಗೆ ಅವರಿಗೆ ನೈತಿಕ ಬುನಾದಿಯಾಗಿ ಪ್ರಾಮಾಣಿಕತೆ, ಗುರು ಹಿರಿಯರಿಗೆ ಗೌರವ ತೋರಿಸುವುದು, ವಿನಯ ಶೀಲತೆ, ಶ್ರದ್ಧೆ, ಅಚ್ಚುಕಟ್ಟುತನ ಇವುಗಳನ್ನು ಕಲಿಸಿಕೊಟ್ಟು ಅವರ ಚಾರಿತ್ರ್ಯನಿರ್ಮಾಣ ಮಾಡುವ ಮನೋಶಿಕ್ಷಣದ ಅವಶ್ಯಕತೆಯೂ ಇದೆ.

    Original price was: $1.08.Current price is: $0.65.
    Add to basket
  • -40%

    ಸುಖ ಯಾರ ಸೊತ್ತು?

    0

    ಸುಖ ಯಾರ ಸೊತ್ತು?
    (ವ್ಯಕ್ತಿತ್ವ ವಿಕಸನ)
    ನಾವು ಸುಖವಾಗಿರಬೇಕೆಂಬ ಬಯಕೆ ಅತಿಯಾದಾಗ ನಮಗೇ ತಿಳಿಯದಂತೆ ಇನ್ನೊಬ್ಬರ ಸುಖವನ್ನು ಕಿತ್ತು ಮತ್ತೊಬ್ಬರ ಬದುಕನ್ನು ಮೂರಾಬಟ್ಟೆ ಮಾಡಿರುತ್ತೇವೆ. ಜಗತ್ತನ್ನು ಕಣ್ಣು ಬಿಟ್ಟು ನೋಡಿದರೆ ಹಾಗೆ ಮಾಡದೆಯೂ ಅಂದರೆ ಯಾರಿಗೂ ತೊಂದರೆ ಕೊಡದೆ, ಯಾರ ಬದುಕನ್ನೂ ಕಿತ್ತುಕೊಳ್ಳದೆಯೂ ನಾವು ಸುಖ ಪಡುವ ಎಲ್ಲಾ ದಾರಿಗಳೂ ನಮಗಿವೆ ಮತ್ತು ನಿಜವಾದ ಸುಖ ಅಡಗಿರುವುದು ಅದರಲ್ಲೇ ಎನ್ನುವುದೂ ತಿಳಿಯುತ್ತದೆ. ಅದಕ್ಕೆ ವಿದ್ಯೆ, ಬುದ್ಧಿ, ವಿವೇಚನೆ, ಹುಟ್ಟುಗುಣಗಳ ಸಹಕಾರ ಬೇಕು. ಜೊತೆಗೆ ಯಾವುದು ಸತ್ಯ, ಏನು ಮಾಡಿದ್ದರಿಂದ ಏನಾಗುತ್ತದೆ ಎಂಬ ಜಗತ್ತಿನ ನಿಯಮಗಳನ್ನು ಅರ್ಥಮಾಡಿಕೊಳ್ಳುವ ಹಂಬಲ ಬೇಕು. ಮನಸ್ಸು ಮಾಡಿದರೆ ಅವನ್ನೆಲ್ಲಾ ತಿಳಿಯುವ ಶಕ್ತಿ ನಮಗೇ ಇದೆ. ಅದು `ತಿಳಿದು ಮಾಡಿದರೆ ನಿನಗೇ ಸುಖ; ಇಲ್ಲದೆ ಇದ್ದರೆ ಮಾಡಿದ್ದನ್ನು ಅನುಭವಿಸು’ ಎಂದು ಸೃಷ್ಟಿಕರ್ತ ನಮಗೆ ಹಾಕಿದ ಒಂದು ಛಾಲೆಂಜ್!

    Original price was: $1.20.Current price is: $0.72.
    Add to basket
  • -40%

    ಓಡಬೇಡ ಎದುರಿಸು…

    0

    ಓಡಬೇಡ ಎದುರಿಸು…
    ಉತ್ತುಂಗ ಬದುಕಿಗೆ ಧೀಮಂತ ಚಿಂತನೆಗಳು
    ಈ ಕೃತಿಯು ಪರಮ ಪೂಜ್ಯ ಸ್ವಾಮಿ ವಿಜಯಾನಂದ ಸರಸ್ವತಿಯವರು ತಮ್ಮ ಆಶ್ರಮ ಕಳೆದ ಹಲವಾರು ವರ್ಷಗಳಿಂದ ಪ್ರಕಟಿಸುತ್ತಿರುವ ‘ನವ ಚಿಂತನ’ ತ್ರೈಮಾಸಿಕ ಪತ್ರಿಕೆಗೆ ಬರೆಯುತ್ತ ಬಂದಿರುವ ಸಂಪಾದಕೀಯ ಲೇಖನಗಳಿಂದ ಆಯ್ದ ಮೌಲಿಕ ಲೇಖನಗಳನ್ನು ಒಳಗೊಂಡಿದೆ. ವರ್ತಮಾನದಲ್ಲಿ ಕುಸಿಯುತ್ತಿರುವ ನೈತಿಕಪ್ರಜ್ಞೆಯನ್ನು, ರಾಷ್ಟ್ರಪ್ರೇಮವನ್ನು, ನಿರ್ಭಯತೆಯನ್ನು, ವಿವೇಕವನ್ನು, ವಿನಯವನ್ನು, ಧೀರೊದ್ಧಾತ್ತ ನಾಯಕತ್ವದ ಗುಣಗಳನ್ನು ವಿಶೇಷವಾಗಿ ಯುವಮನಸ್ಸುಗಳಲ್ಲಿ ಮರುಬಿತ್ತನೆ ಮಾಡುವ ತೀವ್ರತರವಾದ ತುಡಿತ ಪ್ರಸ್ತುತ ಲೇಖನಗಳಲ್ಲಿ ವ್ಯಾಪ್ತವಾಗಿರುವುದನ್ನು ಯಾರೂ ಪರಿಭಾವಿಸಬಾರದು. ಬದುಕಿನ ಹತಾಶೆಗೆ, ಅರಿವಿನ ಅಭಾವಕ್ಕೆ, ಮನುಷ್ಯತ್ವದ ಕೊರತೆಗೆ, ಬದುಕಿನ ಅನರ್ಥಕತೆಗೆ, ತಂದೆ-ತಾಯಿಗಳ ಬೇಜವಾಬ್ದಾರಿಕೆಗೆ, ಅಭಿಮಾನಶೂನ್ಯತೆಗೆ, ಮಾನಸಿಕ ಅನಾರೋಗ್ಯಕ್ಕೆ ಸರಿಯಾದ ಚಿಕಿತ್ಸೆ ನೀಡಬಲ್ಲ ಮತ್ತು ಬದುಕಿಗೆ ದಾರಿದೀಪವಾಗಬಲ್ಲ ಕೃತಿ ಇದಾಗಿದೆ.

    Original price was: $1.32.Current price is: $0.79.
    Add to basket
  • -42%

    ಕುಶಲೋಪರಿ

    0

    ಕುಶಲೋಪರಿ
    ಶರತ್ ಎಚ್.ಕೆ.
    ‘ಕುಶಲೋಪರಿ’ ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾದ ಲೇಖನಗಳ ಗುಚ್ಛ.  ಲೇಖಕರ  ಕಿವಿಗೆ ಬಿದ್ದ ಹಾಗೂ ಸ್ವತಃ ಲೇಖಕರೇ  ಭಾಗಿಯಾದ ಮಾತುಕತೆಗಳ ಹಿನ್ನೆಲೆಯಲ್ಲಿ ರೂಪುಗೊಂಡ ಬರಹಗಳು ಇಲ್ಲಿವೆ.

    Original price was: $0.24.Current price is: $0.14.
    Add to basket
  • -40%

    ಮನೋನಂದನ

    0

    ಮನೋನಂದನ
    ಮನೋದೈಹಿಕ ಬೇನೆಗಳು ವಿಚಿತ್ರ ರೂಪಗಳನ್ನು ಪ್ರದರ್ಶಿಸುತ್ತವೆ. ಸರಿಯಾಗಿ ಅರ್ಥಮಾಡಿಕೊಳ್ಳಲು ಸುಮಾರು ತ್ರಾಸು ಆಗುತ್ತದೆ. “ಇಂತಿಂತಹ ರೋಗಿ ಈ ತೆರನಾಗಿ ತನ್ನ ಕಷ್ಟ ಹೇಳಿಕೊಂಡ. ಹೀಗಿರಬಹುದು ಎಂದು ನಾನು ತರ್ಕಮಾಡಿ , ನಿರ್ಣಯಿಸಿ ಚಿಕಿತ್ಸೆ ನಡೆಸಿದ. ಏನೂ ಪ್ರಯೋಜನವಾಗಲಿಲ್ಲ. ಕಡೆಗೆ, ಅನಿರೀಕ್ಷಿತವಾಗಿ ತಿಳಿದುಬಂದ ಸಂಗತಿಯಿಂದ ಗುಣವಾಯಿತು.
    ಮನಸ್ಸಿನ ದೃಢತೆಯನ್ನೂ ಸಮಾಧಾನವನ್ನೂ ಸಾಧಿಸಲು ಇರುವ ಎಲ್ಲ ಮಾರ್ಗಗಳನ್ನೂ ಅಲ್ಪಸ್ವಲ್ಪವಾದರೂ ಸರಳವಾಗಿ ತಿಳಿಸೋಣ” ಎನ್ನಿಸಿತು. ಅದನ್ನು ಬರೆದು ಹೋದಾಗ, ‘ಹುಡುಗಿಗಿಂತ ಹೆರಳೇ ಭಾರ’ ಎಂದ ಹಾಗೆ, ಈ ಭಾಗವೇ ಕತೆಗಳ ಭಾಗಕ್ಕಿಂತ ಭಾರವಾಯಿತು. ಕಲಿಯಬೇಕಾದರೆ ಇನ್ನೊಬ್ಬರಿಗೆ ಕಲಿಸಬೇಕು’ ಎಂಬ ಹಿರಿಯರ ನುಡಿಯ ಸತ್ಯವು ಮನದಟ್ಟಾಯಿತು. ನನಗಾದಂತೆಯೇ ಓದುಗರಾರಿಗಾದರೂ ಸಂದೇಹ ಬಂದರೆ, ಅವರೂ ನಾನು ಓದಿದ ಆಧಾರ ಗ್ರಂಥಗಳನ್ನು ಓದಿ ತಿಳಿದುಕೊಳ್ಳಲಿ ಎನ್ನಿಸಿತು.

    Original price was: $1.98.Current price is: $1.19.
    Add to basket
  • -40%

    ಜ್ಞಾನವೃಕ್ಷ

    0

    ಜ್ಞಾನವೃಕ್ಷ
    (ಜೀವನ ಮತ್ತು ಬದುಕು)
    ಜೀವನ ಸಹಜ ಪ್ರಕೃತಿಯಾದರೆ ಬದುಕು ಸಂಸ್ಕಾರದಿಂದ ರೂಪುಗೊಂಡ ಪ್ರತಿಮೆ. ಧಾರ್ಮಿಕ,  ಸಾಮಾಜಿಕ, ವೈಜ್ಞಾನಿಕ, ಭೌತಿಕವೇ ಮೊದಲಾದ ಅನೇಕ ವಿಷಯಗಳನ್ನು ಕೈಗೆತ್ತಿಕೊಂಡು ಹಿಂದೂ, ಮುಸ್ಲಿಮ್ ಕ್ರಿಶ್ಚಿಯನ್, ಸಿಖ್, ಪಾರ್ಸಿ ಮುಂತಾದ ಜನಾಂಗಗಳಿಗೆ ಸಂಬಂಧಿಸಿದ ಗ್ರಂಥಗಳ ಜೊತೆಗೆ ತುಲನಾತ್ಮಕ ಅಧ್ಯಯನದಿಂದ ತಮ್ಮ ಪ್ರಬಂಧಗಳನ್ನು ಮಂಡಿಸುತ್ತಾರೆ. ಈ ಬಹುಮುಖ ಅಧ್ಯಯನ ಇಂದಿನ ಸಮಾಜಕ್ಕೆ ಬದುಕಿನ ಕನ್ನಡಿಯಾಗಿ ಬಾಳಿನ ಮುನ್ನುಡಿಯಾಗಿ ಓದುಗರನ್ನು ಮುನ್ನಡೆಸಲು ಸಹಾಯಕವಾಗಿದೆ.  ‘ಉಪವಾಸದ ಹಿನ್ನೆಲೆಯಲ್ಲಿ ಏಕಾದಶಿಯ ಮಹತ್ವ’ವನ್ನು ನಾನಾ ಬಗೆಯಾಗಿ ವಿಶ್ಲೇಷಿಸಿದ್ದಾರೆ.

    Original price was: $1.30.Current price is: $0.78.
    Add to basket
  • -40%

    ವಿವಕ್ಷಾ

    0

    ವಿವಕ್ಷಾ
    ಕಳೆದ ಒಂದು ದಶಕದಿಂದ ಗಂಭೀರವಾದ ಸಂಶೋಧನೆಯನ್ನು ಕೈಗೊಂಡ ಡಾ.ಲಲಿತ ಕೆ.ಪಿ.ಅವರು ತಮ್ಮ ಡಾಕ್ಟರೇಟ್ ಪದವಿ ಪಡೆಯುವ ಮೊದಲು ‘ವಿವಕ್ಷಾ’ . ಕೊಡಗಿನ ಮೂಲೆ ಮೂಲೆಗಳಲ್ಲಿ ಓಡಾಡಿ ಸಂಗ್ರಹಿಸಿದ ಮೌಖಿಕ ಆಕರಗಳನ್ನು  ಪ್ರಕಟಗೊಂಡ ಸಂಶೋಧನಾ ಕ್ರತಿಗಳ ಹಾಗೂ ಪ್ರಚಲಿತದಲ್ಲಿರುವ ಸೈದ್ಧಾಂತಿಕ ಪರಿಪೇಕ್ಷ್ಯಗಳ ಜೊತಗೆ ತುಲನೆ ಮಾಡಿ ಕೊಡಗಿನ ಸಾಹಿತ್ಯ, ಜಾನಪದ,ಚರಿತ್ರೆ, ಭಾಷಾ ವಿಜ್ಞಾನಕ್ಕೆ ಸಂಬಂಧಿಸಿದಂತಹ ಉತ್ಕೃಷ್ಠ ಮಾಹಿತಿಗಳನ್ನು ಡಾ.ಲಲಿತ ಅವರು  ಸೈದ್ಧಾಂತಿಕರಿಸಿದ್ದಾರೆ. ಭಾಷೆ ಹಾಗೂ ಸಮಾಜ ವಿಜ್ಞಾನಗಳ ಅಧ್ಯಯನಗಳಲ್ಲಿ ತೊಡಗಿಸಿಕೊಂಡ ಸಂಶೋಧಕರಿಗೆ ಈ ಕೃತಿ ಭಿನ್ನವಾದ ಒಳನೋಟಗಳನ್ನು ನೀಡುವುದರಲ್ಲಿ ಯಾವುದೇ ಸಂಶಯವಿಲ್ಲ. 

    Original price was: $1.20.Current price is: $0.72.
    Add to basket
  • -40%

    ಸ್ತ್ರೀ ಎಂದರೆ ಅಷ್ಟೇ ಸಾಕೆ

    0

    ಸ್ತ್ರೀ ಎಂದರೆ ಅಷ್ಟೇ ಸಾಕೆ
    ವಿಚಾರ ವಿಮರ್ಶಾ ಲೇಖನಗಳು
    ಡಾ. ಎಚ್ ಎಲ್ ಪುಷ್ಪ ಅವರ ‘ಸ್ತ್ರೀ ಅಂದರೆ ಅಷ್ಟೇ ಸಾಕೆ’ ಕೃತಿಯು ಸ್ತ್ರೀಕೇಂದ್ರಿತ ಬರವಣಿಗೆಯಾಗಿದ್ದು, ಅವರೇ ಹೇಳುವಂತೆ ಇಲ್ಲಿನ ಲೇಖನಗಳು ಬೇರೆ ಬೇರೆ ಸಂದರ್ಭ ಗಳಲ್ಲಿ ಸಿದ್ಧವಾಗಿವೆ. ವಿಚಾರ ಸಂಕಿರಣಗಳಲ್ಲಿ ಮಂಡಿಸಿದ ಲೇಖನಗಳು, ಆಡಿದ ಮಾತುಗಳ ಲೇಖನ ರೂಪಗಳೆಲ್ಲವೂ ಈ ಕೃತಿಯಲ್ಲಿ ಸೇರಿವೆ. 
    ಸ್ತ್ರೀ ಸಂವೇದನೆ, ಚಿಂತನೆ, ಸಾಹಿತ್ಯದ ಮೇಲಿನ ಚರ್ಚೆ, ವಿಮರ್ಶೆಗಳು ಮದ್ದು ಹುಡುಕುವುದಕ್ಕಿಂತ ಹೆಚ್ಚು ಕುಂದು ಕೇರುವುದರಲ್ಲೇ ನಿರತವಾಗಿವೆ. ಆದ್ರೆ ಎಚ್ ಎಲ್ ಪುಷ್ಪ ಅವರಿಗೆ ಕುಂದು ಕೇರುವುದರಿಂದ ಜಾಡ್ಯ ಹರಿಯುವುದಿಲ್ಲ ಎಂದು ಖಚಿತವಾಗಿ ತಿಳಿದಂತಿದೆ. ಹಾಗಾಗಿ ‘ಸ್ತ್ರೀ ಎಂದರೆ ಅಷ್ಟೇ ಸಾಕೆ’ ಓದುವಾಗ ಈವರೆಗಿನ ಉಸಿರು ಬಿಗಿತದಿಂದ ಬಿಡುಗಡೆಗೊಂಡ ಅನುಭವವಾಗುತ್ತದೆ.
    ಬೆಡಗಿನ ವಚನಕಾರ್ತಿಯರಿಂದ ಮೊದಲಗೊಂಡು ಬಿ ಟಿ ಜಾಹ್ನವಿಯವರೆಗೆ, ಕಾರಂತರ ಮೈಮನಗಳ ಕಡಲ ಸುಳಿಯಿಂದ ಹಿಡಿದು ಮಹಾದೇವರ ದೇವನೂರಿನ ಸ್ತ್ರೀ ಬಯಲಿನವರೆಗೆ ಕನ್ನಡ ಸಾಹಿತ್ಯ ಶರಧಿಯ ಹಿರಿ-ಕಿರಿಯ ಬಂದರುಗಳಲ್ಲೆಲ್ಲಾ ಲಿಂಗಭೇಧವಿಲ್ಲದೆ ಲಂಗರು ಹಾಕಿ ಈವರೆಗೂ ಅವರಿವರು ಕಾಣದ್ದನ್ನು ಕಣ್ಣಿಗೆ ತುಂಬಿಕೊಂಡು ಯಾವ ಯಗಟು-ಒಗಟುಗಳಿಲ್ಲದೆ ಮಾಡಿದ ಪಕ್ಕಾ ಸಿದಾಸಾದ ಸಿರಿವಂತ ಮಂಡನೆ ಇಲ್ಲಿದೆ.ದತ್ತ ಓದು, ಪಕ್ವನೋಟ, ಪಕ್ಷಪಾತ, ವಕೀಲಿಗಳಿಲ್ಲದ ಇಲ್ಲಿಯ ದಿಟ್ಟ ಬರಹಗಳು ಅನನ್ಯ ಒಳನೋಟದಿಂದಾಗಿ ಓದುಗರನ್ನು ತಟ್ಟುತ್ತವೆ.

    Original price was: $2.40.Current price is: $1.44.
    Add to basket
  • -40%

    ಕಂಪನಿ ನಾಟಕ ಅರ್ಥಾತ್ ವೃತ್ತಿರಂಗಭೂಮಿ

    0

    ಕಂಪನಿ ನಾಟಕ ಅರ್ಥಾತ್ ವೃತ್ತಿರಂಗಭೂಮಿ

    ವೃತ್ತಿರಂಗಭೂಮಿಯ ತಲಸ್ಪರ್ಶಿಯಾದ ಅಧ್ಯಯನಗಳು ಕನ್ನಡದಲ್ಲಿ ವಿರಳ. ಹಾಗಿರುವಲ್ಲಿ ವೃತ್ತಿರಂಗಭೂಮಿಯು ಬೆಳೆದುಬಂದ ಬಗೆಗೆ ಅಧಿಕೃತ ಮಾಹಿತಿಗಳನ್ನು  ಇರಿಸಿಕೊಂಡು ಮಾಡಿದ ಈ ಅಧ್ಯಯನ ಮುಖ್ಯವಾಗುತ್ತದೆ. ಸ್ವತಹ ರಂಗಭೂಮಿಯಲ್ಲಿ ತೊಡಗಿಸಿಕೊಂಡಿರುವ ಶ್ರೀ ಪ್ರಕಾಶ ಗರುಡರು ರಂಗಭೂಮಿಯ ಏಳುಬೀಳುಗಳನ್ನು ಹತ್ತಿರದಿಂದ ಬಲ್ಲವರು. ಅವುಗಳನ್ನು ಮುಖ್ಯ ಆಕರವಾಗಿಸಿ ಐತಿಹಾಸಿಕವಾಗಿ ವೃತ್ತಿ ರಂಗಭೂಮಿಯ ಬೆಳವಣಿಗೆಯನ್ನು ಅವುಗಳ ವಿವಿಧ ಅಯಾಮಗಳನ್ನು ಗುರುತಿಸುವ ಪ್ರಯತ್ನ ಈ ಪುಸ್ತಕದಲ್ಲಿದೆ. ಹಾಗಾಗಿ ಈ ಬರೆಹ ವೃತ್ತಿರಂಗಭೂಮಿಯ ಸಂದರ್ಭದಲ್ಲಿ ಒಂದು ಮಹತ್ವದ ಹೆಜ್ಜೆಯಾಗಿದೆ.

    Original price was: $3.12.Current price is: $1.87.
    Add to basket
  • -40%

    ನೋಡಿರಿ ಧರ್ಮಜ ಫಲುಗುಣಾದಿಗಳು

    0

    ಯಕ್ಷಗಾನರಂಗದಲ್ಲಿ ಶಂಭು ಹೆಗಡೆ ಅಪರೂಪದ ವ್ಯಕ್ತಿ. ಮೇಳದ ಬಗೆಗೆ, ತಮ್ಮ ಮೇಳದ ಕಲಾವಿದರ ಬಗೆಗೆ ವಿವಿಧ ಪತ್ರಿಕೆಗಳಲ್ಲಿ ಪ್ರಕಟಗೊಂಡ ಲೇಖನ, ಸುದ್ದಿ, ಫೋಟೋ ಇತ್ಯಾದಿಗಳನ್ನು ಸಂಗ್ರಹಿಸಿಡುವ ಪ್ರವೃತ್ತಿಯುಳ್ಳವರು. ಅದೇ ಪ್ರವೃತ್ತಿಯು ಶಿವಾನಂದ ಹೆಗಡೆಯವರಲ್ಲೂ ಮುಂದುವರೆದಿದೆ. ಈ ಸಂಗ್ರಹದ ರಾಶಿಯಿಂದ ಆಯ್ದ ಲೇಖನಗಳನ್ನೆಲ್ಲಾ ಪ್ರಕಟಿಸುವುದೆಂದರೆ ಸಾವಿರಾರು ಪುಟಗಳೇ ಆದಾವು. ಹಾಗಾಗಿ ಅವುಗಳಿಂದ ಆಯ್ದ ಕೆಲವು ಲೇಖನಗಳನ್ನು ಮಾತ್ರ ಈ ಪುಸ್ತಕದಲ್ಲಿ ಪ್ರಕಟಿಸಲಾಗಿದೆ.

     
    ಯಕ್ಷಗಾನ ಚರಿತ್ರ್ರೆಯ ದೃಷ್ಟಿಯಿಂದ ಈ ತೆರನಾದ ಪುಸ್ತಕಕ್ಕೆ ಮಹತ್ವವಿದೆ. ಪತ್ರಿಕೆಗಳಲ್ಲಿ ಪ್ರಕಟಗೊಂಡ ಲೇಖನಗಳು ಅಧ್ಯಯನಾಸಕ್ತರಿಗೆ ಪ್ರಯೋಜನಕಾರಿಗಳಾಗಿದ್ದರೂ ಅವುಗಳನ್ನು ಅರಸುವುದು ಶ್ರಮದಾಯಕ. ಆದರೆ ಪುಸ್ತಕ ರೂಪದಲ್ಲಿ ಬಂದರೆ ಸುಲಭವಾಗಿ ಲಭಿಸುತ್ತದೆ. ಅಧ್ಯಯನ ಮಾಡುವವರ ಶ್ರಮ, ಹಣ ಎರಡರ ಉಳಿತಾಯವೂ ಆಗುತ್ತದೆ. ಹಾಗಾಗಿ ಅಲ್ಲಲ್ಲಿ ಚದುರಿಕೊಂಡಿದ್ದ ಲೇಖನಗಳನ್ನು ಒಂದೆಡೆಗೆ ತರುವ ಪ್ರಯತ್ನ ಈ ಪುಸ್ತಕ.
     
    ಶಿವರಾಮ ಕಾರಂತರು, ಲಂಕೇಶ್, ತದ್ದಲಸೆ ಶರ್ಮಾ, ಲೈಫ್ 360 ಪತ್ರಿಕೆಯ ಬಿ.ಗಣಪತಿ ಹೀಗೆ ಹಿರಿಯ-ಕಿರಿಯ ಲೇಖಕರ ಬರವಣಿಗೆಯ ಗುಚ್ಛವೇ “ನೋಡಿರಿ ಧರ್ಮಜ ಫಲುಗುಣಾದಿಗಳು”
    Original price was: $1.44.Current price is: $0.86.
    Add to basket
  • -40%

    ಚಂದ್ರಶೇಖರ ಕಂಬಾರರ ಕಾವ್ಯಭಾಷೆ

    0

    ಚಂದ್ರಶೇಖರ ಕಂಬಾರರ ಕಾವ್ಯಭಾಷೆ

    ಸಾಹಿತ್ಯದಲ್ಲಿ ಭಾಷೆಗೆ ವಿಶಿಷ್ಟವಾದ ಸ್ಥಾನವಿದೆ. ಭಾಷೆಯನ್ನು ಸಾಹಿತ್ಯದಿಂದ ಪ್ರತ್ಯೇಕವಾಗಿ ನೋಡಲು ಸಾಧ್ಯವಿಲ್ಲ. ಅದು ಅಭಿನ್ನ. ಏಕೆಂದರೆ ಸಾಹಿತ್ಯ ಸಂಭವಿಸುವುದು ಭಾಷೆಯ ಮೂಲಕವೇ. ಸಹೃದಯರು ಗ್ರಹಿಸುವ ವಸ್ತು, ಭಾಷೆಯ ಮೂಲಕವೇ ವಿಶಿಷ್ಟವಾದ ಅರ್ಥವನ್ನು ಪಡೆದುಕೊಂಡು ಸೃಷ್ಟಿಯಾಗುತ್ತದೆ. ಭಾಷೆಯ ಮೂಲಕವೇ ಕಾವ್ಯ ವಸ್ತುವಿನ ಸೂಕ್ಷ್ಮವಿನ್ಯಾಸಗಳು, ಪದರುಗಳು, ಭಾವಗಳು, ಸೂಕ್ಷ್ಮಕಂಪನಗಳು, ವೈವಿಧ್ಯ ಪೂರ್ಣವಾಗಿ ಪ್ರಕಟವಾಗುತ್ತವೆ. ಕಾವ್ಯಭಾಷೆ ಎನ್ನುವುದು ವ್ಯಾವಹಾರಿಕ ಭಾಷೆಗಿಂತ ಭಿನ್ನವಾದುದು. ಕಾವ್ಯಭಾಷೆಗಿರುವ ಸೂಕ್ಷ್ಮಸ್ತರಗಳು ವ್ಯಾವಹಾರಿಕ ಭಾಷೆಯಲ್ಲಿ ಕಾಣಿಸುವುದಿಲ್ಲ. ಕಾವ್ಯಭಾಷೆ ಖಾಸಗಿಯಾಗುತ್ತ ಅದು ಕವಿಯ ಒಳಜಗತ್ತಿಗೆ ಸಹೃದಯರನ್ನು ಒಯ್ದುಬಿಡುತ್ತದೆ. ಕನ್ನಡ ಕಾವ್ಯಲೋಕದಲ್ಲಿ ಭಾಷೆಯನ್ನು ಸಮರ್ಥವಾಗಿ ಬಳಸಿದ ಕವಿಗಳಲ್ಲಿ ಕಂಬಾರರು ಪ್ರಮುಖರು.
    ಕಂಬಾರರು, ಬೇಂದ್ರೆ, ಬೆಟಗೇರಿ ಅವರ ಪ್ರಭಾವವನ್ನು ಪಡೆದುಕೊಳ್ಳುತ್ತಲೇ ಕ್ರಮೇಣ ಆ ಪ್ರಭಾವದಿಂದ ಮುಕ್ತರಾಗಿ ಭಿನ್ನಮಾರ್ಗ ಹಿಡಿದರು; ಬೆಳೆದರು. ಭಾಷೆ, ಛಂದಸ್ಸು, ವಸ್ತು, ಪ್ರತಿಮೆ ಎಲ್ಲವೂ ಕಂಬಾರರ ಕಾವ್ಯದಲ್ಲಿ ಭಿನ್ನವಾಯಿತು.

    Original price was: $1.44.Current price is: $0.86.
    Add to basket
  • -40%

    ಸುಪ್ರಸಿದ್ಧ ಭಾಷಣಗಳು

    0

    ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ
    ಸುಪ್ರಸಿದ್ಧ ಭಾಷಣಗಳು
    ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಬೇರೆ ಬೇರೆ ಸಂದರ್ಭಗಳಲ್ಲಿ ಮಾಡಿದ ೨೯ ಭಾಷಣಗಳ ಸಂಕಲನವಿದು. ಈ ಸಂಗ್ರಹದಲ್ಲಿ ಬಾಬಾಸಾಹೇಬರು ಆರಂಭದಲ್ಲಿ ಮಾಡಿದ ಹಲಕೆಲ ಭಾಷಣಗಳ ಜೊತೆಗೆ ಅವರು ಸಾರಾನಾಥದಲ್ಲಿ ಮಾಡಿದ ಐತಿಹಾಸಿಕ ಕೊನೆಯ ಭಾಷಣವೂ ಅಡಕವಾಗಿದೆ. ಅವರ ಮಾತುಗಳಲ್ಲಿ ಅವರಿಗೆ ದಲಿತರ ಬಗ್ಗೆ ಇದ್ದ ಕಳಕಳಿ, ಪ್ರೀತಿ ಹಾಗೂ ಅಸ್ವಸ್ಥತೆ(restlessness) ಗೊತ್ತಾಗುತ್ತದೆ. ಬೌದ್ಧ ಧರ್ಮವನ್ನು ಆಳವಾಗಿ ಅಭ್ಯಾಸ ಮಾಡಿದ ಬಾಬಾಸಾಹೇಬರು ತಮ್ಮ ಭಾಷಣಗಳಲ್ಲಿ ಅದರ ತಿರುಳನ್ನು ಹೇಳಿದ್ದಾರೆ.

    Original price was: $1.44.Current price is: $0.86.
    Add to basket
  • -40%

    ಯಕ್ಷಗಾನ ಸ್ಥಿತ್ಯಂತರ

    0

    ಯಕ್ಷಗಾನ ಸ್ಥಿತ್ಯಂತರ
    (ಸಂಶೋಧನ ಲೇಖನಗಳು)
    ಯಕ್ಷಗಾನವು ಕಾಲದಿಂದ ಕಾಲಕ್ಕೆ ಬದಲಾಗುತ್ತಾ ಬರಲು ಸಾಂಸ್ಕೃತಿಕವಾಗಿ ಹತ್ತು ಹಲವು ಕಾರಣಗಳಿವೆ. ಈ ಸ್ಥಿತ್ಯಂತರಗಳನ್ನು ಶೈಕ್ಷಣಿಕ ಶಿಸ್ತು ಹಾಗೂ ವಿಮರ್ಶಾತ್ಮಕ ಒಳನೋಟಗಳಿಂದ ಇಲ್ಲಿನ ಲೇಖನಗಳು ದಾಖಲಿಸಿವೆ. ಯಕ್ಷಗಾನದ ಕುರಿತಂತೆ ಬಂದಿರುವ ಬರವಣಿಗೆಗಳಿಗೆ  ವಿನೂತನ ಆಯಾಮವನ್ನು ನೀಡಬಲ್ಲ ಆಲೋಚನೆಗಳು ಪ್ರಸ್ತುತ ಗ್ರಂಥದ ಲೇಖನಗಳಲ್ಲಿ ಹರಳುಗೊಂಡಿವೆ. 

    Original price was: $2.40.Current price is: $1.44.
    Add to basket
  • -40%

    ದಲಿತರ ಮೇಲಿನ ದೌರ್ಜನ್ಯ ಮತ್ತು ಸಾಮಾಜಿಕ ನ್ಯಾಯದ ಪ್ರಶ್ನೆಗಳು

    0

    ದಲಿತರ ಮೇಲಿನ ದೌರ್ಜನ್ಯ ಮತ್ತು ಸಾಮಾಜಿಕ ನ್ಯಾಯದ ಪ್ರಶ್ನೆಗಳು
    ಇಲ್ಲಿನ ಲೇಖನಗಳಲ್ಲಿ ದಲಿತರ ಸಮಕಾಲೀನ ಸಮಸ್ಯೆಗಳನ್ನು ಆತ್ಮೀಯವಾಗಿ ವಿಶ್ಲೇಷಿಸ ಲಾಗಿದೆ. ದಲಿತರ ಸಮಸ್ಯೆಗಳು ಮೇಲ್ನೋಟಕ್ಕೆ ತೋರುವುದಕ್ಕಿಂತಲೂ ಭಿನ್ನವಾಗಿ ಅವುಗಳ ಆಂತರ್ಯವನ್ನು ಶೋಧಿಸಿರುವಲ್ಲಿ ಲೇಖಕರ ಸಾಮಾಜಿಕ ಕಾಳಜಿ ಸ್ಪಷ್ಟವಾಗುತ್ತದೆ. ಅಂಬೇಡ್ಕರ್ ಚಿಂತನೆಯನ್ನು ಮತ್ತು ದಲಿತ ಲೋಕವನ್ನು ಚಾರಿತ್ರಿಕ ಹಿನ್ನೆಲೆಯಲ್ಲಿ ವಿಶ್ಲೇಷಿಸುತ್ತ ಮತಾಂತರದ ಒಳ ಹೊರಗುಗಳನ್ನು ಸೂಕ್ಷ್ಮವಾಗಿ ಇಲ್ಲಿನ ಬರವಣಿಗೆಗಳಲ್ಲಿ ಓದುಗರ ಮುಂದಿಡಲಾಗಿದೆ. ದಲಿತ ಸಂಸ್ಕೃತಿಯನ್ನು ಕೇಂದ್ರೀಕರಿಸಿ ಬರೆದ ಇಲ್ಲಿನ ಲೇಖನಗಳು ಕನ್ನಡ ವಿಚಾರ ಪ್ರಪಂಚದಲ್ಲಿ ಹೊಸ ತಿಳುವಳಿಕೆಯನ್ನು ಮೂಡಿಸುವಲ್ಲಿ ಸಶಕ್ತವಾಗಿವೆ.

    Original price was: $1.20.Current price is: $0.72.
    Add to basket
  • -40%

    ಬಹುರೂಪ

    0

    ಬಹುರೂಪ
    ಡಾ. ಪುರುಷೋತ್ತಮ ಬಿಳಿಮಲೆಯವರು ಅಂಕಣದ ಮೂಲಕ ಹರಿಯಬಿಟ್ಟ ನಿರಂತರ ಅನುಭವ, ಆಲೋಚನೆಗಳ ಬರಹಗಳು ಒಂದೆಡೆ ಈ ಕೃತಿಯಲ್ಲಿ ದಾಖಲಾಗಿದೆ. ಸ್ಥಳೀಯತೆಯ ಸಂಸ್ಕೃತಿ ಮತ್ತು ಬದುಕಿನ ಆರಂಭದ ದಿನಗಳ ಅನುಭವದ ಮೂಲಕ ನಾಡನ್ನು ದೇಶವನ್ನು ಮತ್ತು ವಿಶ್ವವನ್ನು ಕಾಣುವ ದೃಷ್ಟಿಕೋನ; ಮೌಖಿಕ ಸಂಸ್ಕೃತಿಯನ್ನು ತಳದಲ್ಲಿ ಮತ್ತು ಕೇಂದ್ರದಲ್ಲಿ ಇಟ್ಟುಕೊಂಡು ಅದರ ಮೂಲಕ ಪುರಾಣ ಮತ್ತು ಶಿಷ್ಟಸಂಸ್ಕೃತಿಯನ್ನು ಅರ್ಥಮಾಡಿಕೊಳ್ಳುವುದು; ಯಕ್ಷಗಾನ ರಂಗಭೂಮಿಯ ಆಕೃತಿಯ ಮೂಲಕ ರಾಷ್ಟ್ರೀಯ ಮತ್ತು ವಿಶ್ವದ ರಂಗಭೂಮಿ ಕಲೆಗಳನ್ನು ಅಭ್ಯಾಸ ಮಾಡುವುದು; ಭಾಷೆ ಮತ್ತು ನಾಡಿನ ಅನನ್ಯತೆಯನ್ನು ಸ್ಥಾಪಿಸಲು ನಿರ್ದಿಷ್ಟ ಯೋಜನೆಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸುವುದು; ಜಾತೀಯತೆ ಮತ್ತು ಕೋಮುವಾದಗಳು ಜನಪದ ಸಂಸ್ಕೃತಿಯ ಮೇಲೆ ನಡೆಸುತ್ತಿರುವ ಧಾಳಿಯನ್ನು ಸಂಸ್ಕೃತಿಯ ಒಳಗಿನಿಂದಲೇ ಪ್ರತಿರೋಧಿಸುವುದು; ಪರಂಪರೆಯ ಸಂಸ್ಕೃತಿಯನ್ನು ಗಲೀಜು ಮಾಡುವ ಆಧುನಿಕತೆಯ ಹುನ್ನಾರಗಳನ್ನು ಬಯಲು ಮಾಡುವುದು-ಇವೆಲ್ಲವನ್ನೂ ತಾಳಮದ್ದಲೆಯ ಅರ್ಥಗಾರಿಕೆಯಂತೆ ಹರಿಕತೆಯ ಪ್ರವಚನದಂತೆ ತುಂಬ ಆಪ್ತವಾಗಿ ಸ್ವಾರಸ್ಯಕರವಾಗಿ ಅನುಭವ ಕಥನ ಮತ್ತು ಗ್ರಂಥ ಪಠನಗಳ ಉಪಕತೆಗಳೊಂದಿಗೆ ಓದುಗರ ಜೊತೆಗೆ ಹಂಚಿಕೊಳ್ಳುವುದು. ಇದು ‘ಬಿಳಿಮಲೆ ಬಹುರೂಪ’ದ ಆಂಜನೇಯ ಶಕ್ತಿ.

    Original price was: $2.40.Current price is: $1.44.
    Add to basket
  • -40%

    ಮಾಟದೊಳಗಣ ನೋಟ

    0

    ಮಾಟದೊಳಗಣ ನೋಟ
    (ಶಿಲ್ಪಕಲೆ ಕುರಿತ ಬರೆಹಗಳು)
    ವಿಭಿನ್ನ ಮಾಧ್ಯಮಗಳ ಶಿಲ್ಪಕಲೆಗಳು ಭಾರತೀಯ ಸಂಸ್ಕೃತಿಯ ಅವಿಸ್ಮರಣೀಯ ಕುರುಹುಗಳು. ಹಾಗಾಗಿ ಸಮಕಾಲೀನ ದಿನಗಳಲ್ಲಿಯೂ ಸಾಂಪ್ರದಾಯಿಕ ಶಿಲ್ಪ ಕಲೆಗಳ ಬಗೆಗೆ ಪ್ರೀತಿ, ಆರಾಧನಾಭಾವ ಉಳಿದುಕೊಂಡಿದೆ. ಸಾಂಪ್ರದಾಯಿಕ ಶಿಲ್ಪ ಕಲೆಗಳ ರಚನಾ ವಿಧಾನ, ಹಿನ್ನೆಲೆ, ಅರ್ಥ, ಸ್ವರೂಪ ಇವುಗಳನ್ನು ಉಳಿಸಿಕೊಂಡು ಬಂದಿರುವ ಮನುಷ್ಯನ ನಂಬಿಕೆಗಳು ಇತ್ಯಾದಿಗಳೆಲ್ಲ “ಮಾಟದೊಳಗಣ ನೋಟ” ಪುಸ್ತಕದ ಲೇಖನಗಳಲ್ಲಿ ದಾಖಲಾಗಿವೆ.

    Original price was: $1.44.Current price is: $0.86.
    Add to basket
  • -40%

    ನಾದದ ನವನೀತ

    0

    ನಾದದ ನವನೀತ
    ಬೇಂದ್ರೆಯವರ ಕಾವ್ಯವನ್ನು ಕುರಿತಂತೆ ಆಳವಾದ ಅಧ್ಯಯನದಿಂದ ರೂಪುಗೊಂಡ ಲೇಖನಗಳು ಪುಸ್ತಕದಲ್ಲಿ ಅಡಕವಾಗಿವೆ. ನಾದದ ನವನೀತದಲ್ಲಿ ಹೊರಹೊಮ್ಮುವ ಭಾವಗೀತದ ಬಗೆಗಿನ ಬೇಂದ್ರೆಯವರ ಕಾವ್ಯತತ್ವವನ್ನು ವಿಸ್ತರಿಸುವ ಇಲ್ಲಿನ ಬರವಣಿಗೆ ಯಾವುದೇ ಕಾವ್ಯಾಭ್ಯಾಸಿಗೆ ಉಪಯುಕ್ತವಾಗಿದೆ. ಬೇಂದ್ರೆಯವರ ಕಾವ್ಯ ಮಥಿಸಿದಷ್ಟು ನವನೀತವಾಗಿ ಭಾವ, ಅರ್ಥ, ಗ್ರಾಹ್ಯವಾಗುವ ಪರಿ ವಿಸ್ಮಯಕಾರಿಯಾಗಿದೆ ಎಂಬುದನ್ನು ಪ್ರಸ್ತುತ ಕೃತಿಯ ಓದು ಖಚಿತ ಪಡಿಸುತ್ತದೆ.

    Original price was: $1.92.Current price is: $1.15.
    Add to basket