• -40%

    ಮನೋನಂದನ

    0

    ಮನೋನಂದನ
    ಮನೋದೈಹಿಕ ಬೇನೆಗಳು ವಿಚಿತ್ರ ರೂಪಗಳನ್ನು ಪ್ರದರ್ಶಿಸುತ್ತವೆ. ಸರಿಯಾಗಿ ಅರ್ಥಮಾಡಿಕೊಳ್ಳಲು ಸುಮಾರು ತ್ರಾಸು ಆಗುತ್ತದೆ. “ಇಂತಿಂತಹ ರೋಗಿ ಈ ತೆರನಾಗಿ ತನ್ನ ಕಷ್ಟ ಹೇಳಿಕೊಂಡ. ಹೀಗಿರಬಹುದು ಎಂದು ನಾನು ತರ್ಕಮಾಡಿ , ನಿರ್ಣಯಿಸಿ ಚಿಕಿತ್ಸೆ ನಡೆಸಿದ. ಏನೂ ಪ್ರಯೋಜನವಾಗಲಿಲ್ಲ. ಕಡೆಗೆ, ಅನಿರೀಕ್ಷಿತವಾಗಿ ತಿಳಿದುಬಂದ ಸಂಗತಿಯಿಂದ ಗುಣವಾಯಿತು.
    ಮನಸ್ಸಿನ ದೃಢತೆಯನ್ನೂ ಸಮಾಧಾನವನ್ನೂ ಸಾಧಿಸಲು ಇರುವ ಎಲ್ಲ ಮಾರ್ಗಗಳನ್ನೂ ಅಲ್ಪಸ್ವಲ್ಪವಾದರೂ ಸರಳವಾಗಿ ತಿಳಿಸೋಣ” ಎನ್ನಿಸಿತು. ಅದನ್ನು ಬರೆದು ಹೋದಾಗ, ‘ಹುಡುಗಿಗಿಂತ ಹೆರಳೇ ಭಾರ’ ಎಂದ ಹಾಗೆ, ಈ ಭಾಗವೇ ಕತೆಗಳ ಭಾಗಕ್ಕಿಂತ ಭಾರವಾಯಿತು. ಕಲಿಯಬೇಕಾದರೆ ಇನ್ನೊಬ್ಬರಿಗೆ ಕಲಿಸಬೇಕು’ ಎಂಬ ಹಿರಿಯರ ನುಡಿಯ ಸತ್ಯವು ಮನದಟ್ಟಾಯಿತು. ನನಗಾದಂತೆಯೇ ಓದುಗರಾರಿಗಾದರೂ ಸಂದೇಹ ಬಂದರೆ, ಅವರೂ ನಾನು ಓದಿದ ಆಧಾರ ಗ್ರಂಥಗಳನ್ನು ಓದಿ ತಿಳಿದುಕೊಳ್ಳಲಿ ಎನ್ನಿಸಿತು.

    Original price was: $1.98.Current price is: $1.19.
    Add to basket
  • -40%

    ಮಿನುಗು ದೀಪ

    0

    ಮಿನುಗು ದೀಪ
    ಬದುಕಿನ ಶುಷ್ಕ ವಸ್ತುಗಳನ್ನು ಕಾವ್ಯರಸದಲ್ಲಿ ಅದ್ದಿ ಚಪ್ಪರಿಸಿ ಸವಿಯುವಂತೆ ಮಾಡುವ ಕಾವ್ಯ ಪಾಕ ಪ್ರವೀಣೆ ಇವರು. ನಮ್ಮ ಮುಂದಿರುವ ಪ್ರಕೃತ ಹನಿಗವನ ಸಂಕಲನದಲ್ಲಿ ‘ಮುಕ್ತಕಗೀತೆ’, ಮತ್ತು ‘ಚುಟುಕ’ಗಳ ಬಗೆಯವು. ಇಲ್ಲಿಯ ವಿಷಯಗಳ ಹರವು ಅಣುರೇಣುತೃಣದಿಂದ ಬ್ರಹ್ಮ ಬ್ರಹ್ಮಾಂಡ ಪರ್ಯಂತವಾದವು. ಅಡಿಗೆ ಮನೆ ಸೌಟಿನಿಂದ ಹಿಡಿದು, ಚಪ್ಪಲಿ, ಕುಂಚ, ಕಲ, ಬಲ, ಬೆಟ್ಟ, ಕಡಲು, ಗಗನ, ಅಳು- ನಗು, ಸೂರ್ಯ- ಚಂದ್ರ, ಗಂಡ- ಹೆಂಡತಿ, ಇರುವೆ- ಅನೆ, ನಾಯಿ- ನರಿ, ವಸ್ತುಗಳನ್ನು ಒಮ್ಮೆ ಚಕಮಕಿಯ ಬೆಳಕಾಗಿ ಮಿಂಚಾಗಿ , ಒಮ್ಮೆ ರಸಾರ್ದ್ರ ನುಡಿಯಾಗಿ , ಕಿಡಿಯಾಗಿ, ಲೇವಡಿಯಾಗಿ, ಉಪಹಸ್ಯವಾಗಿ, ಹಂಗಿಸಿ, ಭಂಗಿಸಿ, ನೇರವಾಗಿ , ವಕ್ರವಾಗಿ, ತಿರುಚಿ, ಮಣಿಸಿ, ಖಂಡಿಸಿ, ಮಂಡಿಸಿ, ಸಿಹಿಯಾಗಿ, ಒಗರಾಗಿ, ಖಾರವಾಗಿ, ಕಹಿಯಾಗಿ, ನಾನಾ ಕಲ್ಲಹರಳುಗಳನ್ನು ಎಸೆಯುತ್ತ, ಬಾಣಬಿರುಸು ಬಿಡುತ್ತ, ಪಟಾಕಿ – ಚಟಾಕಿಗಳನ್ನು ಹಾರಿಸುತ್ತ , ಕಾವ್ಯ ದಿಗಂತವನ್ನು ವಿಸ್ತರಿಸುತ್ತಾ ನಡೆದಿದ್ದಾರೆ.

    Original price was: $0.42.Current price is: $0.25.
    Add to basket
  • -40%

    ಅಲೆಯ ಆಲಾಪ

    0

    ಅಲೆಯ ಆಲಾಪ
    ಕನ್ನಡದಲ್ಲಿ ಇತ್ತೀಚೆಗೆ ಹೇರಳವಾಗಿ ಹನಿಗವನ, ಚುಟುಕುಗಳ ಸಾಹಿತ್ಯ ಸೃಷ್ಟಿಯಾಗಿದೆ. ತ್ರಿಪದಿ , ಮುಕ್ತಕ, ಚೌಪದಿಗಳು ಕೂಡ ಅಷ್ಟ ಜನ ಸಾಮಾನ್ಯರನ್ನು ಆಕರ್ಷಿಸಿದೆ. ಬೃಹತ್ತಾದುದನ್ನು , ಮಹತ್ತಾದದನ್ನು ಕಾಯಿಸಿ ಶೋಧಿಸಿ ಭಟ್ಟಿ ಇಳಿಸಿ ಮೂರು ಹ್ರಸ್ವ ಪಂಕ್ತಿಗಳಲ್ಲಿ ಹೇಳುವ ಯತ್ನಕ್ಕೆ ನನ್ನ ಮನ ಮುದಗೊಂಡಿತು.
    ನನ್ನ ಅನುಭವಗಳ, ನೆನಪುಗಳ , ಮನದ ಒಳಪುಗಳ ಸಾರೆಸರ್ವಸ್ವವನ್ನು ಹಿತಮಿತವಾಗಿ ಚಿತ್ರಿಸಲು ಯತ್ನಿಸಿದ್ದೇನೆ. ಪ್ರಾಸ ಎಲ್ಲಿ ಸಹಜವಾಗಿ ಬಂದಿದೆಯೋ ಅಲ್ಲಲ್ಲಿ ಅದನ್ನು ಬರಮಾಡಿಕೊಂಡಿದ್ದೇನೆ.
    ಇನ್ನು ಸುಂದರವಾದ ‘ಹೈಕು ಹಂದರದಲ್ಲಿ ಮನವು ವಾಯುವಿಹಾರ ಮಾಡುತ್ತದೆ ಬುವಿಬಾನ ದಾರಿಯಲಿ, ಜಪಾನಿನ ಹೈಕು ಕವಿತೆಗಳು ಮನದ ಅತ್ಯಂತ ಸೂಕ್ಷ್ಮಾತಿ ಸೂಕ್ಷ್ಮಭಾವ ಪ್ರಚೋದಿಸಿ ಭಾವನೆಗೆ ಪ್ರತಿಷ್ಠಾಪನೆಯ ಮಂಟಪವನ್ನು ಕಟ್ಟತ್ತದೆ ಕೇವಲ ಮೂರು ಸಾಲುಗಳಲ್ಲಿ.
    ಈ ಪುಸ್ತಕದಲ್ಲಿ ಬರುವ ತ್ರಿಪದಿಗಳು
    ಅಲೆಯ ಆಲಾಪ
    ಮುಕ್ಕಾಲು ಪದ್ಯಗಳು
    ಹೈಕು – ಹಂದರ

    Original price was: $0.42.Current price is: $0.25.
    Add to basket
  • -40%

    ಕಥೆ ಹೇಳುವೆ ಬಾ ಕಂದ

    0

    ಕಥೆ ಹೇಳುವೆ ಬಾ ಕಂದ
    ಈ ಪುಸ್ತಕವು ಹಲವಾರು ಕಥೆಗಳನ್ನು ಒಳಗೊಂಡಿದೆ. ಆ ಕಥೆಗಳೆಂದರೆ :
    ಬುದ್ಧಿವಂತ ಬದರಿ, ನರಿಯ ಸೇಡು, ಹಸಿರು ಚಿನ್ನ, ಮುಯ್ಯಿಗೆ ಮುಯ್ಯಿ, ಕುಸ್ತಿ ಕಲಿತ ಆಮೆ, ಮಂಗೂಸ್ ಮತ್ತು ಹಾವು, ರೈತ ರಾಮಣ್ಣ,  ಪಾಠ ಕಲಿತ ಒಂಟೆ,  ನರಿಯ ಮೋಸ,ಸೊಂಬೇರಿ ಮೊಲ, ಸಿಂಹದ ಜನ್ಮ ದಿನ, ಮೂರ್ಖ ನಾಯಿಗಳು, ಬೆಲೆಯಿಲ್ಲದ ಧನ್ಯತೆ, ವ್ಯಾಪಾರಿಯ ಸಾಕ್ಷಿ, ದೇವರು ಮತ್ತು ಮಾನವ, ಕಪ್ಪೆ ವೈದ್ಯನಾಥ, ಮೇಕೆಯ ಉಪದೇಶ,  ದೇವರು ಕರುಣಾಮಯ, ಕಪ್ಪೆಗಳ ಜಗಳ, ಚಿನ್ನದ ವಿಗ್ರಹ, ಸಂಗೀತಗಾರ ತೋಳ, ಬುದ್ಧಿವಂತ ಕತ್ತೆ, ಸತತ ಪ್ರಯತ್ನದ ಫಲ, ತಾಳ್ಮೆಯ ಫಲ, ದೇವರು ಕೊಟ್ಟ ವರ, ಬುದ್ಧಿವಂತ ಕಲಾವಿದ, ಮೇಧಾವಿ ನ್ಯಾಯಾಧೀಶ, ಪಕ್ಷಿಯ ಉಪಕಾರ, ನರಿಯ ಪುನರ್ಜನ್ಮ, ಮೂರ್ಖ ಸ್ನೇಹಿತರು, ಕುಂಬಾರನ ಪ್ರಾರ್ಥನೆ, ಹೂದಳ ಮತ್ತು ಮುಳ್ಳು, ಪಕ್ಷಿಗಳಿಗೆ ವೈದ್ಯ,  ಕೆಟ್ಟದ್ದು ಮಾಡಬಾರದು,  ಕುತಂತ್ರಿ ಕಾಗೆ, ಬುದ್ಧಿವಂತ ವ್ಯಾಪಾರಿ, ಎದೆಗಾರಿಕೆ, ಕನಸುಗಳು ನಿಜವಾಗುವುವೇ?, ನಂಬಿ ಕೆಟ್ಟ ಕರಿಯಣ್ಣ, ಇಲಿಯ ಚಾತುರ್ಯ, ದೇವರನ್ನು ದೂಷಿಸಬೇಡ,  ಸಮಯಕ್ಕೆ ತಕ್ಕ ನುಡಿ, ಸೋಮಾರಿ ಹಕ್ಕಿಗಳು, ಮ್ಯಾಜಿಕ್ ಗಂಗಾಳ, ಕತ್ತೆ ಜಂಭ, ಕೋತಿಗೇಕೆ ಉಪದೇಶ?, ಸತ್ತ ಮೊಸಳೆ, ಚಿಟ್ಟೆಯ ಹಿರಿಮೆ, ಕುಂಟು ನಾಯಿ, ಎರಡು ಕಪ್ಪೆಗಳು,  ಆನೆಯ ಉದ್ದ ಸೊಂಡಿಲು,ರಾಜಕುಮಾರಿಗೆ ಒಲಿದ ಹಕ್ಕಿ, ಆನೆಯ ಹಲ್ಲು, ನರಿಯ ಉಡುಗೊರೆ, ಪಂಜರದ ಕೋತಿ, ಮೂರ್ಖ ಕಪ್ಪೆ, ನರಿಯ ಉಪಾಯ, ಮುಯ್ಯಿಗೆ ಮುಯ್ಯಿ, ಸಿಂಹದ ಪ್ರೀತಿ.

    Original price was: $0.60.Current price is: $0.36.
    Add to basket
  • -40%

    ಅಂತರಂಗಯಾನ

    0

    ಅಂತರಂಗಯಾನ
    ಹೈಕುಗಳು ಸಹೃದಯರ ಹೃದಯವನ್ನು ಹಾಯ್ದು ಒಳನುಗ್ಗಿ ಚಿರವಾಗಿ ಅಲ್ಲೇ ಸೆರೆಯಾಗಿರಬಲ್ಲವು. ಏಕೆಂದರೆ ಇಲ್ಲಿನ ಕಾವ್ಯದ ವಿಚಾರಗಳಿಗೆ ಭಾವನೆಗಳಿಗೆ ಕಾಲವನ್ನು ಮೀರಿ ನಿಲ್ಲುವ ಸತ್ಯದ ಸ್ಪರ್ಶಗುಣವಿದೆ.
    ಈ ಕೃತಿಯಲ್ಲಿನ ವಿಷಯ ವ್ಯಾಪ್ತಿಯ ಹರಹು ತುಂಬ ವಿಶಾಲವಾದುದು. ಸೃಷ್ಟಿಯಲ್ಲಿನ ಪ್ರಕೃತಿ ಪರಿಸರದಿಂದ ಮೊದಲ್ಗೊಂಡು ದಿನಬಳಕೆಯ ಅತ್ಯಂತ ಪರಿಚಿತ ಸಾಮಾನ್ಯ ಸಂಗತಿಗಳವರೆಗೂ ಈ ಹೈಕುಗಳು ನಮ್ಮೊಂದಿಗೆ ಆಪ್ತವಾಗಿ ಸಂಭಾಷಿಸುತ್ತವೆ. ಊದುಕಡ್ಡಿ,, ಇರುವೆ, ಸೌಟು, ಕುಕ್ಕರ್, ಸಾಬೂನುಗುಳ್ಳೆ, ಗಾಳಿಪಟ…. ಕಡೆಗೆ ಸೋಪಿನಲ್ಲಿ ಸಿಕ್ಕ ಕೂದಲೆಳೆ… ಅದೇನೇ ಇರಲಿ, ಇವೆಲ್ಲ ಯಾವುದೊ ತತ್ವವೊಂದನ್ನು ಬಿಂಬಿಸುವ ಸತ್ವಶಾಲಿ ಸಾಲುಗಳಾಗಿ ಪರಿಣಮಿಸಿಬಿಡುತ್ತವೆ. ಅತಿಬಳಕೆಯಿಂದಾಗಿ ಗಮನಕ್ಕೇ ಬಾರದ ವಿಷಯವಸ್ತು ಕೂಡ ಇಲ್ಲಿ ಓದುಗನ ಗಮನ ಸೆಳೆದು ಸೃಷ್ಟಿವೈಚಿತ್ರ್ಯಕ್ಕೆ ನನ್ನ ನಮನ ಸಲ್ಲಿಸಿಬಿಡುತ್ತದೆ. ಇದು ನಿಜಕ್ಕೂ ಕವಯತ್ರಿಯಲ್ಲಿರುವ ಕಾವ್ಯ ಕೈಚಳಕವೇ ಸರಿ!

    Original price was: $0.60.Current price is: $0.36.
    Add to basket
  • -40%

    ಕೊರವಂಜಿಯ ಪಡುವಣ ಯಾತ್ರೆ

    0

    ಅರುವತ್ತರ ದಶಕದ ಆದಿಭಾಗದಲ್ಲಿ ರಾಶಿಯವರು ಒಂದು ವೈದ್ಯಕೀಯ ತಂಡದೊಂದಿಗೆ ರಷ್ಯಾ ಹಾಗೂ ಯೂರೋಪ್ ದೇಶಗಳ ಪ್ರವಾಸವನ್ನು ಕೈಗೊಂಡರು. ಪ್ರವಾಸದ ಉದ್ದೇಶ ಆ ದೇಶಗಳ ವೈದ್ಯಕೀಯ ವಿಧಿವಿಧಾನಗಳ ಅಧ್ಯಯನವಾದರೂ ರಾಶಿಯವರ ತುಂಟ ಮನಸ್ಸು ಅಲ್ಲಿನ ಜನಜೀವನದ ವೈಚಿತ್ರ್ಯಗಳನ್ನು ನೋಡಿ ತನ್ಮೂಲಕ ನಗೆಯನ್ನು  ಹೊಮ್ಮಿಸುವ ಅವಕಾಶವನ್ನು  ಕಂಡುಕೊಂಡಿತು. ಆ ಪ್ರಕ್ರಿಯೆಯ ಫಲಶ್ರುತಿಯೇ  ‘ಕೊರವಂಜಿಯ ಪಡುವಣ ಯಾತ್ರೆ’.

    Original price was: $1.02.Current price is: $0.61.
    Add to basket
  • -40%

    ಮೃಗಶಿರ

    0

    ಮೃಗಶಿರ
    ‘ಮೃಗಶಿರ’ ಒಂದು ಸಣ್ಣಕಥೆಗಳ ಸಂಕಲನ, ಇದರಲ್ಲಿ ಕಂಡುಬರುವ ಬೋರವ್ವ, ಮಲ್ಲಿ, ಶಾರಿ, ಉಮಾಪತಿರಾಯ ಇವರೆಲ್ಲಾ ನಮ್ಮ ಸಮಾಜದಲ್ಲಿ ಎಲ್ಲೆಲ್ಲಿಯೂ ಕಾಣಸಿಗುವ ವ್ಯಕ್ತಿಗಳು. ಇವರೆಲ್ಲರ ನಡುವಳಿಕೆ, ಮೇಲು ನೋಟಕ್ಕೆ ‘ನಾಗರಿಕ’ ನಡುವಳಿಕೆಯಾದರೂ, ಹಿನ್ನೆಲೆಯಲ್ಲಿ ಕಾಡಿನ ಪ್ರಾಣಿಗಳ ಪಶುಸಹಜ ನಡುವಳಿಕೆಗಳನ್ನು ಮನುಷ್ಯ ಮಾನಸಿಕವಾಗಿ ಅನುಸರಿಸುತ್ತಿದ್ದಾನೋ ಎಂಬ ಸಂಶಯ     ಬರುವಂತೆ ಅವುಗಳ ನಡುವಣ ಸಾಮ್ಯತೆಯನ್ನು ರಾ.ಶಿ.ಯವರು ಈ ಪುಸ್ತಕದಲ್ಲಿ ನಮ್ಮ ಮುಂದಿಟ್ಟಿದ್ದಾರೆ. ಈ ಪುಸ್ತಕದಲ್ಲಿನ ಹತ್ತು ಹನ್ನೆರಡು ಕಥೆಗಳು ಓದುಗರ  ಆಸಕ್ತಿಯನ್ನು ಉಳಿಸಿಕೊಳ್ಳುತ್ತಲೇ, ಪ್ರಾಣಿಲೋಕದ ನಡುವಳಿಕೆ ಇಂದಿಗೂ ಮಾನವನ ಸುಪ್ತ ಮನಸ್ಸಿನಲ್ಲಿ ಎಷ್ಟು ಭದ್ರವಾಗಿ ನೆಲೆಯೂರಿಗೆ ಎಂಬ ಸಂಗತಿಯನ್ನು ಬಹು ಸ್ಪಷ್ಟವಾಗಿ ತೋರಿಸಿಕೊಡುತ್ತೇವೆ. ಕಥೆಗಳ ಕೊನೆಯಲ್ಲಿ ರಾ.ಶಿ ಯವರು ಬರೆದಿರುವ ಸುದೀರ್ಘ ಪ್ರಸ್ತಾವನೆ, ಮನುಕುಲಕೆ ವಿಕಾಸ ಹಾಗೂ ಮನಸ್ಸಿನ ವಿವಿಧ ವ್ಯಾಪಾರಗಳ ಬಗ್ಗೆ ಹೇಳುವುದಾರೆ,  ‘ವಿಚಾರ ಪ್ರಚೋದನೆಳು ಮಹತ್ಕಾರ್ಯಕ್ಕೆ ಇಷ್ಟೊಂದು ಪರಿಣಾಮಕಾರಿಯಾಗಿ ಲಲಿತ ಸಾಹಿತ್ಯದ ಬಳಕೆಯಾಗುವುದು ಎಂದಾದರೊಮ್ಮೆ’ ಈ ಕಾರಣದಿಂದ ಈ ಕೃತಿ ಅಮೂಲ್ಯವಾದದ್ದು. 

    Original price was: $1.08.Current price is: $0.65.
    Add to basket
  • -40%

    ಜ್ಞಾನವೃಕ್ಷ

    0

    ಜ್ಞಾನವೃಕ್ಷ
    (ಜೀವನ ಮತ್ತು ಬದುಕು)
    ಜೀವನ ಸಹಜ ಪ್ರಕೃತಿಯಾದರೆ ಬದುಕು ಸಂಸ್ಕಾರದಿಂದ ರೂಪುಗೊಂಡ ಪ್ರತಿಮೆ. ಧಾರ್ಮಿಕ,  ಸಾಮಾಜಿಕ, ವೈಜ್ಞಾನಿಕ, ಭೌತಿಕವೇ ಮೊದಲಾದ ಅನೇಕ ವಿಷಯಗಳನ್ನು ಕೈಗೆತ್ತಿಕೊಂಡು ಹಿಂದೂ, ಮುಸ್ಲಿಮ್ ಕ್ರಿಶ್ಚಿಯನ್, ಸಿಖ್, ಪಾರ್ಸಿ ಮುಂತಾದ ಜನಾಂಗಗಳಿಗೆ ಸಂಬಂಧಿಸಿದ ಗ್ರಂಥಗಳ ಜೊತೆಗೆ ತುಲನಾತ್ಮಕ ಅಧ್ಯಯನದಿಂದ ತಮ್ಮ ಪ್ರಬಂಧಗಳನ್ನು ಮಂಡಿಸುತ್ತಾರೆ. ಈ ಬಹುಮುಖ ಅಧ್ಯಯನ ಇಂದಿನ ಸಮಾಜಕ್ಕೆ ಬದುಕಿನ ಕನ್ನಡಿಯಾಗಿ ಬಾಳಿನ ಮುನ್ನುಡಿಯಾಗಿ ಓದುಗರನ್ನು ಮುನ್ನಡೆಸಲು ಸಹಾಯಕವಾಗಿದೆ.  ‘ಉಪವಾಸದ ಹಿನ್ನೆಲೆಯಲ್ಲಿ ಏಕಾದಶಿಯ ಮಹತ್ವ’ವನ್ನು ನಾನಾ ಬಗೆಯಾಗಿ ವಿಶ್ಲೇಷಿಸಿದ್ದಾರೆ.

    Original price was: $1.30.Current price is: $0.78.
    Add to basket
  • -40%

    ಮಠದ ಹೋರಿ ಮತ್ತು ಈವರೆಗಿನ ಕತೆಗಳು

    0

    ಮಠದ ಹೋರಿ ಮತ್ತು ಈವರೆಗಿನ ಕತೆಗಳು
    ಕತೆಗಾರನ ಮಾತಿನಲ್ಲಿ ಹನುಮಂತ ಹಾಲಿಗೇರಿ ಹೇಳಿಕೊಂಡಿರುವಂತೆ “ಇಲ್ಲಿನ ಎಲ್ಲ ಕತೆಗಳು ನಮ್ಮೂರು ಸೀಮೆಯಲ್ಲಿ ನೆಡಯುವಂಥವೆ. ಕಥೆ ನನ್ನೊಳಗಡೆ ಹುಟ್ಟುವುದಿಲ್ಲ . ದಿನನಿತ್ಯದ ಬದುಕಿನಲ್ಲಿ ಸಂಭವಿಸಿ, ನನ್ನೊಳಗೆ ಬೆಳೆದು ಕಥೆಯಾಗಿ ಹರಡಿಕೊಳ್ಳುತ್ತದೆ. ನನ್ನೂರು ಸೀಮೆಯಲ್ಲಿ ಇಲ್ಲಿನ ಪಾತ್ರಗಳೆಲ್ಲವೂ ಇನ್ನೂ ಜೀವಂತವಾಗಿವೆ. ಕಥೆಗಳಲ್ಲಿ ಅವುಗಳ ಸಂಕಷ್ಟ ಒಂದು ತಹಬಂದಿಗೆ ಬಂದಿದ್ದರೂ ಬದುಕಿನಲಿ ಇನ್ನೂ ಮುಂದುವರಿದೇ ಇದೆ.
    ಓದುಗನಿಗೆ ಮನರಂಜನೆ ನೀಡುವುದಕ್ಕಾಗಿ ನನ್ನಂಥವರು ಕಥೆ ಕಟ್ಟುವುದಿಲ್ಲ. ಈ ಕತೆಗಳನ್ನು ಓದುವವರ ಮನದಲ್ಲಿ ರಂಜನೆ ಹುಟ್ಟುವುದಕ್ಕಿಂತಲೂ ತಳಮಳ ಹುಟ್ಟಿದರೆ, ಚಿಂತೆನೆಗ ಹಚ್ಚಿದರೆ ಅಷ್ಟರಮಟ್ಟಿಗೆ ಈ ಕತೆಗಳು ಸಾರ್ಥಕ್ಕೆ ಕಂಡಂತೆ.”

    Original price was: $2.88.Current price is: $1.73.
    Add to basket
  • -40%

    ಊರು ಸುಟ್ಟರೂ ಹನುಮಪ್ಪ ಹೊರಗ….

    0

    ಊರು ಸುಟ್ಟರೂ ಹನುಮಪ್ಪ ಹೊರಗ….
    ಹೊಸ ನಾಟಕಗಳು ಬರುತ್ತಿಲ್ಲವೆಂಬ ಅಳುಕನ್ನು ಅಳಿಸಬಲ್ಲ ಯುವ ಕತೆಗಾರರು ನಾಟಕ ರಚನೆಯತ್ತ ಮುಖ ಮಾಡಿರುವುದು ನಿಜಕ್ಕೂ ಸಂತಸದ ಸಂಗತಿ. ಈಗಾಗಲೇ ಕತೆಗಾರರು ಎಂದೇ ಹೆಸರಾಗಿರುವ ಗೆಳೆಯ ಹನಮಂತ ಹಾಲಿಗೇರಿಯವರ ಊರು ಸುಟ್ಟರೂ ಹನುಮಪ್ಪ ನಾಟಕವನ್ನು ಆಟಮಾಟ ತಂಡದ ಅಡ್ಯಾಟಕ್ಕೆ ಮಾಡಬೇಕೆಂದುಕೊಂಡಾಗ ತಂಡದ ಎಲ್ಲಾ ಸಾಧ್ಯತೆಗಳಿಗೆ ಹೊಂದಿಕೊಳ್ಳುವಂತೆ ನಾಟಕದ ವಿನ್ಯಾಸದಲ್ಲಿ ಬದಲಾವಣೆ ಮಾಡಿಕೊಟ್ಟರು.
    ಎರಡು ಊರುಗಳ ನಡುವಿನ ಜಗಳ ನಾಟಕೀಯವಾದ ಹತ್ತಾರು ಘಟಣೆಗಳನ್ನು ಕಥಾಹಂದರದಲ್ಲಿ ಎಳೆದುಕೊಂಡಿದೆ. ಆದರೆ ಜಗಳಕ್ಕೆ ಕಾರಣನಾದ ದೇವರು ಮಾತ್ರ ವಾಸ್ತವದ ಪ್ರತಿನಿಧಿಯಾಗಿದ್ದಾನೆ. ಎಲ್ಲಿ ಪ್ರೀತಿ ಇರುತ್ತದೋ ಅಲ್ಲಿ ದ್ವೇಷ ಹುಟ್ಟಿಕೊಳ್ಳುತ್ತದೆ. ನಮ್ಮದು ಎಂದು ಗೆರೆಹಾಕಿಕೊಂಡು ಗಡಿ ಗುರುತಿಸಿಕೊಂಡಲ್ಲಿ ಇನ್ನೊಬ್ಬರದು ಎಂಬ ದ್ವೇಷದ, ಅಸಡ್ಡೆಯ, ತಿರಸ್ಕಾರದ ನೋಟವೂ ಹುಟ್ಟಿಕೊಳ್ಳುತ್ತದೆ. ಪ್ರತಿಯೊಂದು ಸೀಮೆಯಲ್ಲೂ ಊರಿನ ಹಕ್ಕಿಗಾಗಿ ಎರಡೂರ ಸೀಮೆಗಳ ನಡುವೆ ಸಣ್ಣದೊಂದು ಜಗಳವಿದ್ದೆ ಇರುತ್ತದೆ.

    Original price was: $1.20.Current price is: $0.72.
    Add to basket
  • -40%

    ಮನನ

    0

    ಮನನ
    ಮನನದಲ್ಲಿನ ಪ್ರಬಂಧಗಳು ಹೊಸತನದಿಂದ ಕೂಡಿವೆ. ನಮ್ಮ ಸಮಾಜದ ಸಂಸ್ಕೃತಿಯಲ್ಲಿ ಅನೂಚಾನವಾಗಿ ಬಂದ ಹಲವು ನುಡಿಗಟ್ಟುಗಳು, ಸಂಪ್ರದಾಯಗಳನ್ನು ಮುಕ್ತ ಮನಸ್ಸು ಹಾಗೂ ತಾರ್ಕಿಕ ದೃಷ್ಟಿಯಿಂದ ಅವಲೋಕಿಸಿ, ಅವುಗಳ ಹಿನ್ನೆಯಲ್ಲಿರಬಹುದಾದ ಸತ್ಯಾಂಶಗಳನ್ನು ಹೆಕ್ಕಿ ತೆರೆಯುವುದು ಈ ಪ್ರಬಂಧಮಾಲೆಯ ಉದ್ದೇಶ. ಕಾಲ ಭೈರವ ಎಂಬ ಪುಟ್ಟ ಪ್ರಬಂಧದಲ್ಲಿ ಅವರು ಕಾಲದ ವೈಜ್ಞಾನಿಕ ಸ್ವರೂಪವನ್ನು ಸಾಮಾನ್ಯ ಜನರಿಗೆ ತಿಳಿಯುವ ಭಾಷೆಯಲ್ಲಿ ವಿವರಿಸಿದ್ದಾರೆ. ಶಕುನಗಳಲ್ಲಿನ ನಂಬಿಕೆಯಾಗಲೀ, ನಗುವಿನಂತಹ ಸಹಜ ಪ್ರಕ್ರಿಯೆಯಾಗಲೀ ರಾಶಿಯವರ ಚಿಂತನೆಯ ಮೂಸೆಯಲ್ಲಿ ಕರಗಿ ಹೊರಬರುವಾಗ ಅಪ್ಪಟ ಅಪರಂಜಿಯ ಹೊಳಹನ್ನು ಪಡೆಯುವ ಚಮತ್ಕಾರವನ್ನು ಇಲ್ಲಿ ಕಾಣಬಹುದು. ಅನೇಕ ಕೌತುಕಮಯ ವೈಜ್ಞಾನಿಕ ಚಿಂತನೆಗಳನ್ನು ನಮ್ಮ ಸನಾತನ ಧರ್ಮದ ಒರೆಗಲ್ಲಿನಲ್ಲಿ ತೀಡಿ ಮನನಯೋಗ್ಯವಾದ ಸಾಮ್ಯಗಳನ್ನು ರಾಶಿಯವರು ಈ ಪುಸ್ತಕದಲ್ಲಿ ಓದುಗರಿಗೆ ಉಣಬಡಿಸಿದ್ದಾರೆ.

    Original price was: $1.08.Current price is: $0.65.
    Add to basket
  • -40%

    ರೂಪಾಯಿಕ್ಕೊಂದ ಕವನ

    0

    ರೂಪಾಯಿಕ್ಕೊಂದ ಕವನ 
    ಇಲ್ಲಿಯ ಕವನಗಳು ತಮ್ಮದೇ ಆದ ದಾಟಿಯಲ್ಲಿ ಸಮಾಜಕ್ಕೆ ಕಿವಿಮಾತು. ಮಾಮಿರ್ಕವಾಗಿ ಚಾಟಿ ಏಟನ್ನು ನೀಡುವದರ ಜೊತೆಗೆ ಸಮಾಜ ತಿದ್ದುವ ಕೆಲಸವನ್ನು ಮಾಡಿದ್ದು ಕಂಡು ಬರುತ್ತದೆ. ಮುಂಬೈ ದಾಳಿ ತಿರುಗೇಟು ನಾನು ಮತ್ತು ನನ್ನ ಮನಸು ಈ ಕವಿತೆಗಳು ಮತ್ತು ಸ್ಥಿತಿಯನ್ನು ಯಥಾವತ್ತಾಗಿ ಚಿತ್ರಿಸಿದ್ದು ಬಿಸಿರೊಟ್ಟಿ ಕವನ ಆಸೆಯನ್ನು ಪೂರೈಸಿಕೊಳ್ಳಲು ಸಮಯ ಅಡ್ಡ ಗೊಡೆಯಾಗಿ ನಿಂತು ನಮಗೆ ಅನುದಿನದ ಬದುಕಿನಲ್ಲಿ ಹೇಗೆ ಛೇಡಿಸುತ್ತದೆ ಎಂದು ಮಾರ್ಮಿಕವಾಗಿ ಬರೆದಿದ್ದಾರೆ.
    ಕಾಲ ಎನ್ನುವ ಕವನದಲ್ಲಿ ಕಾಲ ಎಂದೂ ಯಾರೂ ಹೇಳಿದರೂ ನಿಲ್ಲದೇ ಓಡುವ  ಎಂದೂ ನಿಲ್ಲದ ಕಾಲನ ಆಟವನ್ನು ತುಂಬಾ ಚೆನ್ನಾಗಿ ಚಿತ್ರಿಸಲಾಗಿದೆ.

    Original price was: $0.72.Current price is: $0.43.
    Add to basket
  • -40%

    ಬದುಕಲು ಅರ್ಹತೆ ಬೇಕು

    0

    ಬದುಕಲು ಅರ್ಹತೆ ಬೇಕು
    (ಶ್ರೀ ಸತ್ಯಾತ್ಮತೀರ್ಥಶ್ರೀಪಾದಂಗಳವರು ನೀಡಿದ ಪ್ರವಚನಗಳ ಸಾರ ಸಂಗ್ರಹ)
    ಒಂದು ಸಾಮಾನ್ಯ  ಸಂಸ್ಥೆಯ  ಸದಸ್ಯತ್ವವನ್ನು ಪಡೆಯಲು, ಒಂದು ಶಾಲೆಯನ್ನು  ಸೇರಲು , ಗಳಿಸಲು ಒಂದು ನೌಕರಿಯನ್ನು  ಪಡೆಯಲು . ಅವುಗಳಿಗೆ ತಕ್ಕ ಅರ್ಹತೆಯನ್ನು  ಪಡೆಯಬೇಕು.  ಹಾಗೆ ಅರ್ಹತೆ ಇದೆ ಎಂದು ಹೇಳುವ ಪ್ರವೇಶ ಪತ್ರವನ್ನು ತುಂಬಿ ಕೊಡಬೇಕು. ಅಗಾ ಸದಸ್ಯತ್ವ ಕೊಡಬೇಕೆ ಬೇಡವೇ ? ಶಾಲೆಗೆ ಸೆರಿಸಿಕೊಳ್ಳಬೇಕೆ ಬೇಡವೇ ? ನೌಕರಿಗೆ ಅರ್ಹನೆ ಎಂದು ವಿಚಾರಿಸುತ್ತಾರೆ. ಅಂಥದ್ದರಲ್ಲಿ ಭೂಮಿಯ ಮೇಲೆ ಹುಟ್ಟಿ ಬಂಡ ಮೇಲೆ, ಇಲ್ಲಿ ಬದುಕಲು ಅರ್ಹತೆಯನ್ನು  ಪಡೆಯಲು ಪ್ರವೇಶಪತ್ರ ಬೇಡವೇ ?

    Original price was: $0.84.Current price is: $0.50.
    Add to basket
  • -40%

    ಶ್ರೀ ಉತ್ತರಾದಿಮಠ

    0

    ಶ್ರೀ ಉತ್ತರಾದಿಮಠ  :

    ಶ್ರೀ ಮಜ್ಜಗದ್ಗುರು ಶ್ರೀ ಮನ್ಮಧ್ವಾಚಾರ್ಯರ ಮೂಲಮಹಾ ಸಂಸ್ಥಾನ, ಸರ್ವಜ್ಞ ಪೀಠ – ಶ್ರೀ ಉತ್ತರಾದಿಮಠ ಸಂಕ್ಷಿಪ್ತ ಪರಿಚಯ ಈ ಕೃತಿಯಲ್ಲಿದೆ. ಇದನ್ನು ಕೃಷ್ಣ ಕೊಲ್ಹಾರಕುಲಕರ್ಣಿ ಅವರು ರಚಿಸಿದ್ದಾರೆ.

    Original price was: $0.84.Current price is: $0.50.
    Add to basket
  • -40%

    ಮಂಕರು ಬೆಪ್ಪರು

    0

    ಮಂಕರು ಬೆಪ್ಪರು
    “ಮಂಕರು ಬೆಪ್ಪರು” ಎಂಬ ಈ ನಗೆ ಸಂಕಲನ ರಾ.ಶಿ.ಯವರ “ತುಟಿ ಮೀರಿದುದು” ಹಾಗೂ “ನಗು ಸರಸಿ ಅಪ್ಸರೆಯರು” ಇವುಗಳಿಂದ ಆಯ್ದ ಲೇಖನಗಳ ಸಂಗ್ರಹ.
    ಈ ಬರಹಗಳು ರಾ.ಶಿ.ಯವರ ಹಾಸ್ಯಪ್ರಜ್ಞೆಯ ಒಂದು ಮುಖ.

    Original price was: $1.14.Current price is: $0.68.
    Add to basket
  • -40%

    ಸುಂದರ ಭೂಮಿ

    0

    ಸುಂದರ ಭೂಮಿ
    (ಕವನ ಸಂಕಲನ)
    ಈ ಕವನಗಳಲ್ಲಿ ತಿಳಿಹಾಸ್ಯವಿದೆ, ಆಳವಾದ ಚಿಂತನ ಮಂಥನಗಳಿವೆ, ಎದೆ ತಲುಪಿ ಮನವರಳಿಸುವ ಸೂಕ್ಷ್ಮ ಸಂವೇದನಾ ಭಾವನೆಗಳಿವೆ, ಸಮಾಜ, ದೇಶದ ಭವಿಷ್ಯದ ಕುರಿತ ದುಗುಡ ಇದೆ, ಸ್ವಾರ್ಥಿಗಳ, ಆಷಾಢಭೂತಿಗಳ ವಿಡಂಬನೆಯಿದೆ. ಕೆಲವೇ ಸಾಲುಗಳಲ್ಲಿ ಓದುಗನನ್ನು ಸುದೀರ್ಘ ಚಿಂತನೆಗೆ ಹಚ್ಚಿ, ಆತ್ಮಾವಲೋಕನ ಮಾಡಿಕೊಳ್ಳುವಂತೆ ಪ್ರೇರೇಪಿಸುವ ಗುಣ ಈ ಕವನಗಳಲ್ಲಿವೆ.

    Original price was: $0.72.Current price is: $0.43.
    Add to basket
  • -40%

    ಸಂಗೀತ ಸಮ್ಮೋಹಿನಿ

    0

    ಸಂಗೀತ ಸಮ್ಮೋಹಿನಿ :
    (ವೈಜ್ಞಾನಿಕ ಕಾದಂಬರಿ)

    ೨೦೨೦ರ ಸುಮಾರಿಗೆ ಕಂಪ್ಯೂಟರ್ ವಿಜ್ಞಾನ ಸ್ಥಿತ್ಯಂತರ ಪಡೆಯುತ್ತದೆ. ದ್ವಿಮಾನ (ಬೈನರಿ) ಬದಲು ತ್ರಿಮಾನ ಪದ್ಧತಿಯನ್ನು ಅಳವಡಿಸಿದಾಗ ಕಂಪ್ಯೂಟರುಗಳು ಸೃಜನಾತ್ಮಕತೆಯನ್ನು ಮೈಗೂಡಿಸಿಕೊಳ್ಳುತ್ತವೆ . ಮನುಷ್ಯರೊಂದಿಗೆ ಪೈಪೋಟಿಗಿಳಿಯುತ್ತವೆ. ಸಂಗೀತ ಕ್ಷೇತ್ರವು ಇದಕ್ಕೆ ಹೊರತಾಗುವುದಿಲ್ಲ. ಒಂದು ಡೂರೋ ‘ಸಮ್ಮೋಹಿನಿ‘ ರಾಗವನ್ನು ಸೃಷ್ಟಿಸಿ ಪ್ರಸ್ತುತಪಡಿಸುತ್ತದೆ. ಸಂಗೀತ ಕ್ಷೇತ್ರದಲ್ಲಿ ಹೊಸ ಅಲೆಯ ಕಂಪನಗಳನ್ನೆಬ್ಬಿಸುವ ಕಾದಂಬರಿ.

    Original price was: $0.96.Current price is: $0.58.
    Add to basket
  • -39%

    ಅಕ್ಷಯಪಾತ್ರೆ

    0

    ಅಕ್ಷಯಪಾತ್ರೆ
    (ಕಾಂದಬರಿ)
    ಇತ್ತೀಚಿನ ದಿನಗಳಲ್ಲಿ ಕನ್ನಡ ಸಾಹಿತ್ಯ ಲೋಕದಲ್ಲಿ ಸಾಹಸ ಕಥೆ ಕಾದಂಬರಿಗಳು ಕಮ್ಮಿಯಾಗಿವೆ. ಮೊದಲೇ ಕನ್ನಡ ಸಾಹಿತ್ಯವು ಓದುಗರ ಕ್ಷಾಮವನ್ನು ಎದುರಿಸುತ್ತಿದೆ. ಟಿವಿ, ಸಿನಿಮಾದ ಅಬ್ಬರದಲ್ಲಿ ಕಾದಂಬರಿ ಓದಿಗರ ಸಂಖ್ಯೆ ಕಡಿಮೆಯಾಗಿದೆ. ಅದರಲ್ಲೂ ಯುವವರ್ಗ ಸಾಹಿತ್ಯ ಕ್ಷೇತ್ರದತ್ತ ನಿರಾಸಕ್ತಿ ಹೊಂದಿದೆ. ಇಂತಹ ವಿಷಮ ಘಟ್ಟದಲ್ಲಿ ಮಿತ್ರ ಶ್ರೀ ಎಚ್.ಜಿ.ಮಳಗಿಯವರು ರೋಚಕ ಸಾಹಸ ಕಾದಂಬರಿಯನ್ನು ಕನ್ನಡ ಓದುಗರಿಗೆ ನೀಡುವ ಸಾಹಸ ಮಾಡಿದ್ದು ಅಭಿನಂದನೀಯ. ಮಹಾಭಾರತ ಕಾಲದ ಅಕ್ಷಯಪಾತ್ರೆಯನ್ನು ಹುಡುಕಿಕೊಂಡು ಪ್ರಾಚ್ಯವಸ್ತು ಸಂಶೋಧನಾ ತಂಡವು ದೂರದ ಅಫಘಾನಿಸ್ತಾನಕ್ಕೆ ಹೋಗಿ ಅಲ್ಲಿ ಭಯೋತ್ಪಾದರಿಂದ, ಖಳನಾಯಕನಿಂದ ಅನೇಕ ತೊಂದರೆಗಳನ್ನು ಎದುರಿಸಿ ಬರುವ ರೋಚಕ ಕಥಾವಸ್ತುವನ್ನು ಹೊಂದಿದೆ. ಕ್ಷಣಕ್ಷಣಕ್ಕೂ ಎದುರಾಗುವ ಅಪಾಯಗಳು, ವಿಕ್ಷಿಪ್ತ ಖಳನಾಯಕನ ಕ್ರೂರ ನಡೆಗಳು. ನಾಯಕನ ಮೈನವಿರೇಳಿಸುವ ಸಾಹಸಗಳು, ನಾಯಕಿಯ ಅಹಂ, ಸಿಟ್ಟು, ಅಸಹಾಯಕತೆ ಎಲ್ಲವೂ ರೋಚಕತೆಗೆ ಮೆರಗನ್ನು ತಂದಿವೆ. ನಾಯಕಿ ಅಫಘಾನಿಸ್ತಾನದ ಹಳ್ಳಿಯ ತಾಂಡಾವೊಂದರಲ್ಲಿ ಅಲ್ಲಿನ ನೃತ್ಯಗಾತಿಯೊಂದಿಗೆ ಸ್ಪರ್ಧೆಗೆ ಬಿದ್ದು ನೃತ್ಯ ಮಾಡುವುದಂತೂ ಥೇಟ್ ಹಿಂದೀ ಚಿತ್ರದಲ್ಲಿ ಬರುವ ಸನ್ನಿವೇಶದಂತಿದೆ.

    Original price was: $0.77.Current price is: $0.47.
    Add to basket
  • -40%

    ಲಿಲ್ಲಿ ಪುಟ್ಟ

    0

    ಲಿಲ್ಲಿ ಪುಟ್ಟ
    ಲಿಲ್ಲಿ ಪುಟ್ಟ ಸಹಜ ಲಹರಿಯಲ್ಲಿ ಹರಿದು ಬರುವ ಕಾದಂಬರಿ. ರೋಚಕತೆ ಮತ್ತು ನಾಟಕೀಯತೆ ಇದರ ಪ್ರಧಾನ ಗುಣಗಳು. ಪಕ್ಕ ಧಾರವಾಡದ ಶೈಲಿ ಭಾಷಾ ಸೊಗಡು, ತಿಳಿ ಹಾಸ್ಯ, ದಟ್ಟ ಪಾತ್ರ ಚಿತ್ರಿಕತೆ, ಇಲ್ಲಿಯ ಸತ್ವವಾಗಿದೆ. ಯಾರಾದರು, ಎಂದಾದರೂ ತಮ್ಮ ಯವ್ವನದಲ್ಲಿ ಅನುಭವಿಸಿರಬಹುದಾದ ಕಥಾಕೋಷ ಇಲ್ಲಿಯದು. ಏಕಕಾಲಕ್ಕೆ ಸೀರಿಯಲ್ ಮತ್ತು ಸಿನೇಮಾ ಶೈಲಿ ಈ ಕಾದಂಬರಿಯ ಕಥಾ ಕೇಂದ್ರ ಯವ್ವನದ ರೋಚಕ ದಿನಗಳದ್ದಾಗಿದ್ದರಿಂದ ಒಂದು ವರ್ಗದ ಓದುಗರಿಗೆ ಗಕ್ಕನೆ ಹಿಡಿಯಬಲ್ಲ ಶಕ್ತಿ ಇದಕ್ಕಿದೆ.

    Original price was: $1.20.Current price is: $0.72.
    Add to basket
  • -40%

    ಶ್ರೀನಿವಾಸ ಕಲ್ಯಾಣ

    0

    ಶ್ರೀನಿವಾಸ ಕಲ್ಯಾಣ –

    ತಿರುಪತಿಯ ವೆಂಕಟಪ್ಪನ ಒಕ್ಕಲಿನವರಿಗೆ ಪ್ರತಿ ನವರಾತ್ರಿಯಲ್ಲಿ ‘ಶ್ರೀನಿವಾಸ ಕಲ್ಯಾಣ’ ಓದುವುದು, ಕೇಳುವುದು ಒಂದು ನಿಯಮ. ಪುರೋಹಿತರು ಬಂದು ಪುರಾಣವನ್ನು ಹೇಳುತ್ತಿದ್ದರು. ನೌಕರಿಗೆಂದು ನಗರಗಳಿಗೆ ವಲಸೆ ಬಂದ ನಂತರ ಪುರೋಹಿತರ ಕೆಲಸವನ್ನು ಯಜಮಾನನೇ ಮಾಡಬೇಕಾಯಿತು. ಅಂಥ ಸಂದರ್ಭದಲ್ಲಿ, ಸಮಯಕ್ಕೆ ಅನುಕೂಲವಾಗುವಂತೆ ಸಂಪ್ರದಾಯವನ್ನು ಉಳಿಸಿಕೊಂಡು ಬರುವಲ್ಲಿಯ ಪ್ರಯತ್ನದ ಫಲ ಈ ‘ಶ್ರೀನಿವಾಸ ಕಲ್ಯಾಣ’ ಕಿರು ಪುಸ್ತಿಕೆ.

    Original price was: $0.60.Current price is: $0.36.
    Add to basket