ದಲಿತರ ಮೇಲಿನ ದೌರ್ಜನ್ಯ ಮತ್ತು ಸಾಮಾಜಿಕ ನ್ಯಾಯದ ಪ್ರಶ್ನೆಗಳು
ಇಲ್ಲಿನ ಲೇಖನಗಳಲ್ಲಿ ದಲಿತರ ಸಮಕಾಲೀನ ಸಮಸ್ಯೆಗಳನ್ನು ಆತ್ಮೀಯವಾಗಿ ವಿಶ್ಲೇಷಿಸ ಲಾಗಿದೆ. ದಲಿತರ ಸಮಸ್ಯೆಗಳು ಮೇಲ್ನೋಟಕ್ಕೆ ತೋರುವುದಕ್ಕಿಂತಲೂ ಭಿನ್ನವಾಗಿ ಅವುಗಳ ಆಂತರ್ಯವನ್ನು ಶೋಧಿಸಿರುವಲ್ಲಿ ಲೇಖಕರ ಸಾಮಾಜಿಕ ಕಾಳಜಿ ಸ್ಪಷ್ಟವಾಗುತ್ತದೆ. ಅಂಬೇಡ್ಕರ್ ಚಿಂತನೆಯನ್ನು ಮತ್ತು ದಲಿತ ಲೋಕವನ್ನು ಚಾರಿತ್ರಿಕ ಹಿನ್ನೆಲೆಯಲ್ಲಿ ವಿಶ್ಲೇಷಿಸುತ್ತ ಮತಾಂತರದ ಒಳ ಹೊರಗುಗಳನ್ನು ಸೂಕ್ಷ್ಮವಾಗಿ ಇಲ್ಲಿನ ಬರವಣಿಗೆಗಳಲ್ಲಿ ಓದುಗರ ಮುಂದಿಡಲಾಗಿದೆ. ದಲಿತ ಸಂಸ್ಕೃತಿಯನ್ನು ಕೇಂದ್ರೀಕರಿಸಿ ಬರೆದ ಇಲ್ಲಿನ ಲೇಖನಗಳು ಕನ್ನಡ ವಿಚಾರ ಪ್ರಪಂಚದಲ್ಲಿ ಹೊಸ ತಿಳುವಳಿಕೆಯನ್ನು ಮೂಡಿಸುವಲ್ಲಿ ಸಶಕ್ತವಾಗಿವೆ.