ಜ್ಞಾನವೃಕ್ಷ
(ಜೀವನ ಮತ್ತು ಬದುಕು)
ಜೀವನ ಸಹಜ ಪ್ರಕೃತಿಯಾದರೆ ಬದುಕು ಸಂಸ್ಕಾರದಿಂದ ರೂಪುಗೊಂಡ ಪ್ರತಿಮೆ. ಧಾರ್ಮಿಕ, ಸಾಮಾಜಿಕ, ವೈಜ್ಞಾನಿಕ, ಭೌತಿಕವೇ ಮೊದಲಾದ ಅನೇಕ ವಿಷಯಗಳನ್ನು ಕೈಗೆತ್ತಿಕೊಂಡು ಹಿಂದೂ, ಮುಸ್ಲಿಮ್ ಕ್ರಿಶ್ಚಿಯನ್, ಸಿಖ್, ಪಾರ್ಸಿ ಮುಂತಾದ ಜನಾಂಗಗಳಿಗೆ ಸಂಬಂಧಿಸಿದ ಗ್ರಂಥಗಳ ಜೊತೆಗೆ ತುಲನಾತ್ಮಕ ಅಧ್ಯಯನದಿಂದ ತಮ್ಮ ಪ್ರಬಂಧಗಳನ್ನು ಮಂಡಿಸುತ್ತಾರೆ. ಈ ಬಹುಮುಖ ಅಧ್ಯಯನ ಇಂದಿನ ಸಮಾಜಕ್ಕೆ ಬದುಕಿನ ಕನ್ನಡಿಯಾಗಿ ಬಾಳಿನ ಮುನ್ನುಡಿಯಾಗಿ ಓದುಗರನ್ನು ಮುನ್ನಡೆಸಲು ಸಹಾಯಕವಾಗಿದೆ. ‘ಉಪವಾಸದ ಹಿನ್ನೆಲೆಯಲ್ಲಿ ಏಕಾದಶಿಯ ಮಹತ್ವ’ವನ್ನು ನಾನಾ ಬಗೆಯಾಗಿ ವಿಶ್ಲೇಷಿಸಿದ್ದಾರೆ.