• -10%

    ರಾಘವೇಂದ್ರ ಖಾಸನೀಸ ಸಮಗ್ರ

    0

    ರಾಘವೇಂದ್ರ ಖಾಸನೀಸ ಸಮಗ್ರ

    ರಾಘವೇಂದ್ರ ಖಾಸನೀಸರು ಕನ್ನಡದ ಅತ್ಯಂತ ಮಹತ್ವದ ಕಥೆಗಾರರಲ್ಲಿ ಒಬ್ಬರು. ಸಾಮಾನ್ಯವಾಗಿ ಎಲ್ಲ ಪಾತಿನಿಧಿಕ ಕಥಾ ಸಂಗ್ರಹಗಳಲ್ಲಿ ಅವರ ಕಥೆಗಳು ಕಾಣಿಸಿಕೊಳ್ಳುವವು. ಕೆಲವೇ ಕಥೆಗಳನ್ನು ಬರೆದರೂ ಖಾಸನೀಸರು ಸಣ್ಣ ಕಥೆಯ ಪ್ರಕಾರದ ಸಾಧ್ಯತೆಗಳನ್ನು ಸೊರೆಗೊಂಡಿದ್ದಾರೆ ಅಷ್ಟೇ ಅಲ್ಲದೆ ಅವುಗಳನ್ನು ಆಶ್ಚರ್ಯಕರವಾಗಿ ವಿಸ್ತರಿಸಿದ್ದಾರೆ. ಅವರ ಚಿಂತನೆ ಸ್ವರೂಪ ಹಾಗೂ ಅವರ ಕಥೆಗಳ ಬಂಧ ಅವ್ರಿಗೆಯೇ ವಿಶಿಷ್ಟವಾದವುಗಳು. ಈ ಕೃತಿಯಲ್ಲಿ ಖಾಸನೀಸರ ೧೬ ಪ್ರಕಟಿತ ಕಥೆಗಳು ಮತ್ತು ೭ ಅಪ್ರಕಟಿತ ಕಥೆಗಳು ಸೇರಿವೆ. ಇವುಗಳನ್ನು ಡಾ. ಜಿ.ಎಸ್ ಅಮೂರ ಹಾಗೂ ಡಾ. ರಮಾಕಾಂತ ಜೋಶಿ ಸಮರ್ಥವಾಗಿ ಸಂಪಾದನೆ ಮಾಡಿದ್ದಾರೆ.

    Original price was: $3.00.Current price is: $2.70.
    Add to basket
  • -10%

    ಆಚಾರ್ಯ ಪ್ರಹಸನ  ಮತ್ತು  ಏನ್ ಹುಚ್ಚೂರೀ….

    0

    ಆಚಾರ್ಯ ಪ್ರಹಸನ  ಮತ್ತು  ಏನ್ ಹುಚ್ಚೂರೀ….

    ಆಚಾರ್ಯ ಪ್ರಹಸನ  ಮತ್ತು ಏನ್ ಹುಚ್ಚುರೀ ಇವು ಎರಡು  ನಾಟಕಗಳಾಗಿದ್ದು , ಇವೆರಡು ನಾಟಕಗಳಿಗೆ ಪ್ರೇರಣೆ ಫ್ರೆಂಚ್ ಪ್ರಹಸನಕಾರ ಮೊಲಿಯರನದ್ದು. ‘ಆಚಾರ್ಯ  ಪ್ರಹಸನ’ವು  ಮೋಲಿಯರನ ‘ಲೆ ತಾರ್ ತೂಫ್’ ನಾಟಕದಿಂದಲೂ. ‘ಏನ್ ಹುಚ್ಚೂರೀ….’ ನಾಟಕವು ‘ಬೂರ್ಜ್ವಾ ದಿ ಜಂಟಲ್ ಮನ್’ ನಾಟಕದಿನ್ದಲೂ ಪ್ರಭಾವಿತವಾಗಿವೆ.  ಈ ಎರಡು ನಾಟಕಗಳನ್ನು ಅಭಿನಯಿಸುವುದು ಸುಲಭವಲ್ಲ. ನಾಟಕಕಾರ ಹಾಗೂ ನಿರ್ದೇಶಕರ ಮೇಲೆ ಕಲಾತ್ಮಕ ನಿರ್ಬಂಧ ಹೀರಾ ಬಲ್ಲ ಕೃತಿಗಳಿವು.

    Original price was: $1.44.Current price is: $1.30.
    Add to basket
  • -10%

    ತೇರು….

    0

    ತೇರು ಕಾದಂಬರಿಯನ್ನು ಓದಲಾರಂಭಿಸಿದಾಗ ಒಂದನೇ ಭಾಗದಲ್ಲಿ ಪತ್ರಕರ್ತ ಪಾಟೀಲರಿಗೆ ಧರಮನಟ್ಟಿ ಸ್ವಾಂವಪ್ಪಜ್ಜ, ಧರಮನಟ್ಟಿಯ ದೇಸಗತೀ ಕಥೀ ಹೇಳಲಾರಂಭಿಸಿದ. ಅದರ ಜೊತಿಗೆ ನಾಳೆ ನಮ್ಮೂರಾಗ ವಿಠ್ಠಲ ದೇವರ ತೇರ ಇದೆ ನೀವು ಬರಲೇ ಬೇಕು ಎಂದು ಹಠ ಹಿಡಿದು ಕರದುಕೊಂಡು ಹೋದ. ಅಂದು ರಾತ್ರಿ ಅಲ್ಲಿ ಗೊಂದಲಿಗ್ಯಾರು ಕಥಿ ಹೇಳತಾರ ಕೇಳುಣ ನಡಿರಿ ಎಂದು ಪಾಟೀಲರನ್ನು ಕರೆದುಕೊಂಡು ಹೋದ. ವಿಠಲ ದೇವರ ತೇರಿನ ವರ್ಣನೆಯನ್ನ ಆರಂಭಿಸಿ ತೊಗಲು ಬೊಂಗೆ ಆಡಿಸೋ ದ್ಯಾಮಣ್ಣನ‌ ಮಗನ ಮರಣದವರೆಗೂ ಗೊಂದಲಿಗ್ಯಾರ ಪದದ ಧಾಟಿಯಲ್ಲೇ ಸಂಪೂರ್ಣ ಕಥೆ ಹೇಳಿದ್ದು ಕಾದಂಬರಿಗೆ ಬಹು ವಿಶೇಷ ಮೆರಗನ್ನು ಕೊಟ್ಟಿದೆ.

    ಕಾದಂಬರಿಯಲ್ಲಿ ತೇರು ತಯಾರಿಸಿದ ನಂತರ ಮೊದಲ ತೇರು ಏಳೆಯಲು ಜನರು ಸೇರಿದಾಗ ಒಂಚೂರ ನೆಲಬಿಟ್ಟು ಕದಲೋದಿಲ್ಲ. ಅದಕ್ಕೆ ಪುರೋಹಿತರನ್ನ ವಿಚಾರಿಸಲಾಗಿ ಅದಕ್ಕೆ ಕೆಳಜಾತಿಯ ಮನುಜನ ಬಲಿ ಬೇಕು ಎಂದು ಕೇಳುತ್ತಿದೆ ತೇರು ಎಂದ ಹೇಳುತ್ತಾನೆ ಪುರೋಹಿತ. ಊರಲ್ಲಿ ಸುದ್ಧಿ ಹರಡಿ ಬೆಳಗಾಗುದರೊಳಗ ಎಲ್ಲ ಕೀಳುಕುಲದ ಜನಾಂಗ ಊರು ಬಿಟ್ಟು ಹೊರಟೋಗಿದ್ದರು. ಒಬ್ಬನೇ ಒಬ್ಬನು ಗೊಂಬೀರಾಮರಾ ದ್ಯಾವಯ್ಯ ದೇವಾಲಯದ ಆವರಣದಲ್ಲಿ ಸಿಕ್ಕನು. ಡಂಣಾಯಕ ಹಾಗು ಅವನ ಹೆಂಡತಿ ಸೇರಿ ದ್ಯಾವಯ್ಯನಿಗೆ ೮ ಎಕರೆ ಜಮೀನು ನೀಡುವುದಾಗಿ ಆಸೆ ಚೆಲ್ಲಿ ಒಬ್ಬ ಮಗನನ್ನ ತೇರಿಗೆ ಬಲಿಕೊಡಲು ತಯಾರಿ ಮಾಡಿದರು‌. ದ್ಯಾವಯ್ಯನ ಹೆಂಡತಿ ಪಾರೋತೆವ್ವ ಗೋಳಾಡಿ ಅಳಲು ಪ್ರಾರಂಭಿಸುತ್ತಾಳೆ. ಗಂಡ ಅವಳನ್ನು ಬಡಿದು ಹೊಡೆದು ದೇವರಿಗೆ ಮಗನನ್ನ ಅರ್ಪಿಸೋಣ ಎಂದು ಹೇಳಿದನು. ಹಣದ ಆಸೆಗೋ ಏನೋ ಅಂದು ಮಡದಿಯ ಮಾತಿಗೆ ಬೆಲೆ ಕೊಡದೇ ಬಡಿದು ತೇರಿಗೆ ಮಗನನ್ನ ಅರ್ಪಿಸಿದರು. ಅಂದಿನಿಂದ ಇಂದಿನವರೆಗೂ ದ್ಯಾವಪ್ಪನ ಮನೆತನದವರೇ ಬಂದು ರಕ್ತತಿಲಕ ಅಂದ್ರೆ ಹಣೆಯನ್ನು ತೇರಿನ ಗಾಲಿಗೆ ಗುದ್ದಿ ರಕ್ತಾ ಬಂದ ನಂತರ ಆ ರಕ್ತವನ್ನು ದೇವರಿಗೆ ಹಚ್ಚಿದಾಗ ತೇರು ಮುಂದೆ ಬರ್ತಿತ್ತು ಎಂಬ ವಾಡಿಕೆ ಮುಂದುವರೆದಿತ್ತು.

    Original price was: $2.04.Current price is: $1.84.
    Add to basket
  • -10%

    ಜಯ

    0

    ಮಹಾಭಾರತದ ಬೃಹತ್ ಕಥೆಯನ್ನು ಸಂಗ್ರಹವಾಗಿ ನಿರೂಪಿಸಿರುವ ಈ ಕಥನ ತನ್ನ ಅಚ್ಚುಕಟ್ಟಾದ ನಿರೂಪಣೆ, ಚಕಮಕಿಯಂತೆ ಮಿಂಚುವ ಚುರುಕಾದ ಸಂಭಾಷಣೆಗಳಿಂದ ಆಕರ್ಷಕವಾಗಿ, ಸವೇಗವಾಗಿ ಕಥೆಯನ್ನು ನಡೆಸಿಕೊಂಡು ಹೋಗುತ್ತದೆ. ಕಥೆಗಳನ್ನು ಸಂಗ್ರಹಿಸಿ ಹೇಳಿದ್ದರೂ, ಅವುಗಳ ನಾಟ್ಯಾಯಮಾನತೆ ಎದ್ದುಕಾಣುತ್ತದೆ. ಇದೆಲ್ಲ ಪಟ್ಟನಾಯಕರು ಸಿದ್ಧಹಸ್ತ ಕತೆಗಾರರು ಎಂಬುದಕ್ಕೆ ಸಾಕ್ಷಿಯಾಗಿದೆ.

    Original price was: $7.81.Current price is: $7.02.
    Add to basket
  • -10%

    ಕೈಗೆ ಬಂದ ತುತ್ತು

    0

    ಕೈಗೆ ಬಂದ ತುತ್ತು 

    ‘ಕೈಗೆ ಬಂದ ತುತ್ತು’ ಆತ್ಮಕಥನದಲ್ಲಿ ಗುರುಪ್ರಸಾದ ತಾವು ವೃತ್ತಿ ಜೀವನದಲ್ಲಿ ಕಂಡ ಹಲವಾರು ಕುತೂಹಲಕಾರಿ ಘಟನೆಗಳನ್ನೂ, ಅಪರಾಧಗಳ ತನಿಖೆಯನ್ನೂ ರೋಚಕವಾಗಿ ಬಣ್ಣಿಸಿದ್ದಾರೆ. ತಾವು ಹತ್ತಿರದಿಂದ ಕಂಡ ರಾಜಮಹಾರಾಜರು, ಪ್ರಧಾನಿಗಳು, ಪತ್ರಕರ್ತರು ಹಾಗೂ ಸಿನಿಮಾ ರಂಗದವರ ವ್ಯಕ್ತಿಚಿತ್ರಗಳನ್ನು ತಮ್ಮ ಸರಳ ಸುಂದರ ಶೈಲಿಯಲ್ಲಿ ಈ ಕೃತಿಯಲ್ಲಿ ದಾಖಲಿಸಿದ್ದಾರೆ.
    ಈ ಕೃತಿಯ ಪ್ರತಿ ಪುಟವೂ ರೋಮಾಂಚನಕಾರಿಯಾಗಿದ್ದು, ಗುರುಪ್ರಸಾದರ ಆತ್ಮಕಥನ ಇಂದಿನ ಯುವಪೀಳಿಗೆಗೆ ಪ್ರೇರಣೆಯಾಗುತ್ತದೆ. ಈ ಕೃತಿಯಲ್ಲಿ ಹಾಸ್ಯವಿದೆ. ಗಾಂಭೀರ್ಯವಿದೆ. ಕುತೂಹಲವಿದೆ. ರೋಮಾಂಚನವಿದೆ ಹಾಗೂ ವಿಷಾದವೂ ಇದೆ. ಸಂಗ್ರಹ ಯೋಗ್ಯ ಕೃತಿ ಇದು.

    Original price was: $3.00.Current price is: $2.70.
    Add to basket
  • -10%

    ಸಾಹಿತ್ಯದ ವೈಜ್ಞಾನಿಕ ಮೀಮಾಂಸೆ

    0

    ಸಾಹಿತ್ಯದ ವೈಜ್ಞಾನಿಕ ಮೀಮಾಂಸೆ

    ಕಾವ್ಯಮೀಮಾಂಸೆಯನ್ನು ಕುರಿತಂತೆ ಗಿರಿ ಅವರು ನಡೆಸುವ ವೈಜ್ಞಾನಿಕ ಶೋಧ, ಚಿಂತನೆ ಮಹತ್ವದ ಅಂಶಗಳನ್ನು ಹೊರ ಹಾಕುತ್ತದೆ. ಪ್ರಾಚೀನ ಭಾರತೀಯ ಮೀಮಾಂಸೆಯ ಸಾಧನೆಗಳನ್ನು ಮತ್ತು ಸಮಸ್ಯೆಗಳನ್ನು ಅಥವಾ ಕೊರತೆಗಳನ್ನು ಗಿರಿ ಅವರು ಶೋಧಿಸುತ್ತಾರೆ; ಸ್ಪಷ್ಟ ನಿಲುವಿನಲ್ಲಿ ಅವುಗಳನ್ನು ದಾಖಲಿಸುತ್ತಾರೆ.

    Original price was: $7.20.Current price is: $6.48.
    Add to basket
  • -10%

    ಮೆಲುಕು

    0

    ಮೆಲುಕು
    (ಲೇಖನಗಳು)

    ಈ ಪುಸ್ತಕವನ್ನು ಗಿರೀಶ ಕಾರ್ನಾಡ   ಅವರು ಬರೆದಿದ್ದಾರೆ.

    Original price was: $2.40.Current price is: $2.16.
    Add to basket
  • -10%

    ಕಣ್ಣಾ ಮುಚ್ಛೇ…. ಕಾಡೇ ಗೂಡೇ….

    0

    ಬಿ ಜಯಶ್ರೀ ಅವರಂತಹ ಶಕ್ತಿಯನ್ನು, ಸ್ವಾಭಿಮಾನಿಯನ್ನು, ಪ್ರತಿಭೆಯನ್ನು ಅಕ್ಷರಗಳಲ್ಲಿ ಬಂಧಿಸುವುದಾದರೂ ಹೇಗೆ? ನಾನು ಈ ಸವಾಲಿಗೆ ಮುಖಾಮುಖಿಯಾದಾಗಲೆಲ್ಲ ನನಗೆ ದೊಡ್ಡ ಬೆಂಬಲ ಮತ್ತು ಬೆನ್ನು ಚಪ್ಪರಿಸುವಂಥಾ ನಂಬಿಕೆಯ ಮಾತುಗಳು ಬಂದದ್ದು ಸ್ವತಃ ಜಯಶ್ರೀ ಅವರಿಂದ.

    Original price was: $3.00.Current price is: $2.70.
    Add to basket
  • -10%

    ಶೋಕಚಕ್ರ

    0

    ಶೋಕಚಕ್ರ

    ಮಹಾತ್ಮಾ ಗಾಂಧಿಯವರ ಚಳವಳಕ್ಕೆ ಪ್ರಾರಂಭವಾದದ್ದು ೧೯೨೦ರಲ್ಲಿ . ೧೯೨೪ರಲ್ಲಿ ೨೦ ನಿಮಿಷಗಳ ವರೆಗೆ ಅವರ ಸಂದರ್ಶವನ್ನು ಪಡೆದಿದ್ದೆ. ರಾಜಕೀಯಕ್ಕಿಂತ ಸಾಮಾಜಿಕ, ಅದಕ್ಕಿಂತ , ಅಂತರಂಗಿಕ  ಸುಧಾರಣೆ ಅಗತ್ಯ ಎಂಬುದನ್ನು ಆಗ ನಾನು ಕಲಿತುಕೊಂಡ ಪಾಠ.
    ಸ್ವಾತಂತ್ರ್ಯ ಪ್ರಾಪ್ತಿಯ ತರುವಾಯ ನಾನು ಬಹಳ ಆಶೆಯಿಂದ ಪರಿಸ್ಥಿತಿಯನ್ನು ನೋಡುತ್ತಲಿದ್ದೆ. ಯಾವುದೊ ಒಂದು ಕಾರಣಕ್ಕೆ ರಾಜಕೀಯ ಸ್ವಾತಂತ್ರ್ಯದ ಅವಸರವಿದ್ದು ಮಹಾತ್ಮಾಜಿಯವರು ಅದಕ್ಕೆ ಪ್ರಾಶಸ್ತ್ಯವನ್ನು ಕೊಟ್ಟಿದ್ದರು. ಈಗ ಆ ಜಂಜಾಟ ಮುಗಿಯುತ್ತಲ್ಲ? ಸಾವಿರಾರು ವರ್ಷಗಳಿಗೊಮ್ಮೆ ಅವತರಿಸುವ ಭಗವಂತನ ಅಂಶದಂತಿದ್ದ ಮಹಾತ್ಮಾಜಿಯವರಿಂದ ನಿಜವಾದ- ಅಂತರಂಗಿಕ-ಸುಧಾರಣೆ ಜನತೆಯಲ್ಲಿ ಮೂಡುವುದಲ್ಲ? ಹೀಗೆ ಉತ್ಸಾಹಗೊಳ್ಳುತ್ತಿರುವಾಗ ಜನವರಿ ೩೦, ೧೯೮೯ರ ದುರ್ಘಟನೆ ನಡೆದುಹೋಯಿತು. “ಜಗತ್ತಿನ ದೀಪ ನಂದಿತು.”
    ಈ ಸಂದರ್ಭದ ಹಿನ್ನಲೆಯಲ್ಲಿ ದೇಶದ ಚುನಾವಣಾ, ಸ್ಥಾನಿಕ ಮುಂದಾಳುಗಳ ಸಾಂಸ್ಕೃತಿಕ ಮಟ್ಟ ಇದನ್ನೆಲ್ಲ ನೋಡಿ ಮೂಡಿದ ಭಾವನೆಗಳೇ ಈ ‘ಶೋಕಚಕ್ರ ‘ ನಾಟಕದಲ್ಲಿ ಮೂಡಿದೆ. ಇಲ್ಲಿಯ ಆಯಾ ಪಾತ್ರಗಳೇ ಪರಿಸ್ಥಿತಿಯನ್ನು ಚನ್ನಾಗಿ ಚಿತ್ರಿಸುವುವು.

    Original price was: $0.72.Current price is: $0.65.
    Add to basket
  • -10%

    ಬೀಜದೊಳಗಣ ವೃಕ್ಷ

    0

    ಬೀಜದೊಳಗಣ ವೃಕ್ಷ

    ಶ್ರೀಮತಿ ಗೀತಾ ವಸಂತ ಅವರು ಬೇಂದ್ರೆ ಕಾವ್ಯದ ವಿರಾಟ್ ಸ್ವರೂಪದ ಬಗ್ಗೆ `ಬೀಜದೊಳಗಣ ವೃಕ್ಷ’ ಎಂಬ ಹೆಸರಿನಿಂದ ಅಧ್ಯಯನ ಗ್ರಂಥವೊಂದನ್ನು ಬರೆದು ಪ್ರಸ್ತುತ ಪಡಿಸುತ್ತಿದ್ದಾರೆ. ಈ ವಿಷಯದ ಬಗ್ಗೆ ಅವರು ತುಮಕೂರು ವಿಶ್ವವಿದ್ಯಾಲಯಕ್ಕೆ ಮಹಾಪ್ರಬಂಧವನ್ನು ಸಲ್ಲಿಸಿ ಡಿ.ಲಿಟ್. ಪದವಿ ಪಡೆದಿದ್ದಾರೆ. ಅದನ್ನು ಓದುಗರಿಗೆ ಉಪಯೋಗವಾಗುವ ರೀತಿಯಲ್ಲಿ ಮಾರ್ಪಡಿಸಿ ಕೃತಿ ರಚಿಸಿದ್ದಾರೆ.

    Original price was: $2.16.Current price is: $1.95.
    Add to basket
  • -10%

    ತಾವರೆಯ ಬಾಗಿಲು

    0

    ‘ತಾವರೆಯ ಬಾಗಿಲು’ ಕಾವ್ಯ ಕುರಿತು 40 ಪ್ರಬಂಧಗಳ ಸಂಕಲನ

    Original price was: $2.40.Current price is: $2.16.
    Add to basket
  • -10%

    ಮತ್ತೊಬ್ಬ ರಾಧೆ

    0

    ಮತ್ತೊಬ್ಬ ರಾಧೆ
    (ಕೀರ್ತನಕಾರ್ತಿ ಗಲಗಲಿ ಅವ್ವನವರನ್ನು ಕುರಿತ ನಾಟಕ)

    ಈ ನಾಟಕವು ಹದಿನೆಂಟನೇ ಶತಮಾನದ ಕೀರ್ತನಕಾರ್ತಿ ಗಲಗಲಿ ಅವ್ವನವರನ್ನು ಕುರಿತದ್ದಾಗಿದೆ. ಬಾಗಲಕೋಟ ಜಿಲ್ಲೆಯ ಬೀಳಗಿ ತಾಲೂಕಿನ ಗಲಗಲಿಯಲ್ಲಿ ಪ್ರಸಿದ್ಧ ಪಂಡಿತರಾಗಿದ್ದ ಗಲಗಲಿ ಮುದಗಲ್ಲಾಚಾರ್ಯರ ಕಿರುಪತ್ನಿಯಾಗಿ ರಮಾ ತನ್ನ ಹನ್ನೆರಡು ವರ್ಷದಲ್ಲಿಯೇ ಮದುವೆಯಾಗಿ ಗಲಗಲಿ ಗ್ರಾಮವನ್ನು ಪ್ರವೇಶಿಸಿದಳು. ಮದುವೆಯಾದ ಎಂಟು ದಿನಕ್ಕೇ ವಿಧವೆಯಾದಳು. ವಿಧವೆಯಾಗಿ ಬತ್ತಿ ಹೊಸೆಯದೆ, ನ್ಯಾಯಪಂಡಿತಳಾಗಿ ಪೇಶ್ವೇ ಅರಸರ ಪಂಡಿತರನ್ನು ಸೋಲಿಸಿ, ಪುಣೆಯ ಅರಸರಿಂದ ವರ್ಷಾಶನ ಪಡೆದಳು. ಅವ್ವನವರ ಮುನ್ನೂರು ಕೀರ್ತನೆಗಳು ಪ್ರಕಟವಾಗಿವೆ. ಕನ್ನಡದಲ್ಲಿ ಕೀರ್ತನೆ ರಚಿಸಿದ ಮೊದಲ ಮಹಿಳೆಯೆಂಬ ಹೆಗ್ಗಳಿಕೆಗೆ ಗಲಗಲಿ ಅವ್ವ ಸಾಕ್ಷಿಯಾಗಿದ್ದಾಳೆ. ಪುಟ್ಟ ವಿಧವೆಯಾಗಿ ಕಾಣಿಸಿಕೊಂಡ ಈ ಮಹಿಳೆ ಗಲಗಲಿ ಅವ್ವನಾಗಿ ಬೆಳೆದು ನಿಂತದ್ದು, ಅಧ್ಯಾತ್ಮ ಮತ್ತು ಸಾಹಿತ್ಯದಲ್ಲಿ ಮಹತ್ತರ ಸಾಧನೆ ಮಾಡಿದ್ದು ಈಗ ಚರಿತ್ರೆಗೆ ಸೇರಿದ ವಿಷಯವಾಗಿದೆ.
    ಗಲಗಲಿ ಅವ್ವನವರ ವೈಯಕ್ತಿಕ ಬದುಕಿನ ವಿವರಗಳನ್ನು ವಿವರಿಸುವುದು ಈ ನಾಟಕದ ಉದ್ದೇಶವಲ್ಲ. ಅವ್ವನನ್ನು ಒಂದು ಪ್ರತಿಮೆಯನ್ನಾಗಿಸಿಕೊಂಡು, ಶತಮಾನಗಳಿಂದ  ಸ್ತ್ರೀ ಈ ದೇಶವ್ಯವಸ್ಥೆಯಲ್ಲಿ ಎದುರಿಸುತ್ತಿರುವ ಸವಾಲುಗಳನ್ನು ಕುರಿತು ಚರ್ಚಿಸಲಾಗಿದೆ. ಹೆಣ್ಣೊಬ್ಬಳು ಅಧ್ಯಾತ್ಮದೆತ್ತರಕ್ಕೇರಿದ ಸ್ಥಿತಿಯನ್ನು ಗುರುತಿಸಲಾಗಿದೆ.

    Original price was: $0.84.Current price is: $0.76.
    Add to basket
  • -10%

    ಕಾಲು ದಾರಿಯ ಕಥನಗಳು

    0

    ಕಾಲು ದಾರಿಯ ಕಥನಗಳು
    (ಜಾನಪದ-ಜೀವನ-ಕಥನ)

    ಶ್ರೀ ಕೃಷ್ಣಮೂರ್ತಿ ಹನೂರು ಇವರ `ಕಾಲು ದಾರಿಯ ಕಥನಗಳು’ (ಜಾನಪದ-ಜೀವನ-ಕಥನ) ಕೃತಿಯನ್ನು ಚಂದಾದಾರರಿಗೆ ತಲುಪಿಸಲು ಸಂತೋಷವಾಗುತ್ತಿದೆ. ಶ್ರೀ ಹನೂರು ಅವರು ತಮ್ಮ ಜೀವನದ ಅಮೂಲ್ಯ ಭಾಗವನ್ನು ಜಾನಪದ ಜೀವನದೊಂದಿಗೆ ಕಳೆದು, ಅದು ನಶಿಸಿ ಹೋಗದಂತೆ ತಮ್ಮ ಅಕ್ಷರ ಸಾಹಿತ್ಯದ ಮೂಲಕ ಕೊನೆಯವರೆಗೂ ಉಳಿಯುವಂತೆ ನೋಡಿಕೊಂಡಿದ್ದಾರೆ. ಅವರಿಗೆ ಕನ್ನಡ ಸಾಹಿತ್ಯ ಋಣಿಯಾಗಿರಬೇಕು.

    Original price was: $3.12.Current price is: $2.81.
    Add to basket
  • -10%

    ಮ್ಯೂಟೇಶನ್

    0

    ಮ್ಯೂಟೇಶನ್
    (ಕಥಾಸಂಕಲನ)

    ಇದು ‘ಆರಾಮಕುರ್ಚಿ ಮತ್ತು ಕತೆಗಳು’ ನಂತರದ, ನನ್ನ ಎರಡನೆಯ ಕಥಾಸಂಕಲನವಾಗಿದೆ. ಈ ಕತೆಗಳನ್ನು ಬೇರೆ ಬೇರೆ ಕಾಲಘಟ್ಟದಲ್ಲಿ ಬರೆಯಲಾಗಿದೆ. ಸಣ್ಣಕತೆಗಳು ನನ್ನನ್ನು ತಿಳಿಗೊಳಿಸುತ್ತಾ ಬಂದಿವೆ. ಬರೆದಾದ ಮೇಲೆ ಅವುಗಳಲ್ಲಿ ನನ್ನ ಮುಖ ನೋಡುತ್ತಾ ಸಂತೋಷಪಟ್ಟಿದ್ದೇನೆ. ಅಲ್ಲಿ ಕಂಡ ಇತರ ಮುಖಗಳು ಕೂಡ ಅಚ್ಚರಿ ಹುಟ್ಟಿಸಿವೆ. ಬರೆಯುವ ಕ್ರಿಯೆಯೇ ನನ್ನನ್ನು ನಾನು ಶುದ್ಧೀಕರಿಸಿಕೊಳ್ಳುವ ಕ್ರಿಯೆಯಾಗಿದೆ. ಬರೆದಾದ ಮೇಲೆ ಅದು ಮೂಡಿಸುವ ಪ್ರಸನ್ನತೆ ಬಿಡುಗಡೆಯ ಭಾಗ್ಯ ಕೊಟ್ಟಿದೆ. ನಾಟಕ, ಕಾವ್ಯ ಸಾಹಿತ್ಯದ ಪ್ರಮುಖ ಅಂಗಗಳಾದರೂ ಕೂಡ, ಕತೆ-ಕಾದಂಬರಿ ಮಾತ್ರ ಪೂರ್ಣದೇಹಿಗಳಂತೆ ಕಂಡಿವೆ. ಬಹುತೇಕ ಓದುಗರು ಸಣ್ಣಕತೆಗಳಿಗೆ ಭೇಟಿಕೊಡುವಷ್ಟು, ಉಳಿದ ಪ್ರಕಾರಗಳಿಗೆ ಭೇಟಿ ಕೊಡಲಾರರು. ಸಣ್ಣಕತೆಯ, ಸಣ್ಣದೆನ್ನುವ ಭಾವನೆಯೇ ಮನುಷ್ಯನ ಸಾವನ್ನು ನೆನಪಿಸುತ್ತಿರಬಹುದು! ಹುಟ್ಟು ಸಾವಿನ ಮಧ್ಯದ ಬದುಕು ಬರಿ ಸಣ್ಣ ಕತೆಯಾಗಿರಬಹುದು! ಹೀಗಾಗಿ ಓದುಗರಿಗೆ ಇದರ ಬಗ್ಗೆ ವಿಲಕ್ಷಣವಾದ ಸೆಳೆತವಿದೆ.

    Original price was: $0.72.Current price is: $0.65.
    Add to basket
  • -10%

    ಇಣುಕಿದಲ್ಲಿ ಛಂದ

    0

    ಇಣುಕಿದಲ್ಲಿ ಛಂದ
    (ಲಲಿತ ಪ್ರಬಂಧಗಳು)

    ಕಾವ್ಯ ನನಗೆ ಮೌನಗಳ ಮೀಟುವ ಏಕತಾರಿ. ನಾಟಕ ಹಲವು ಸಮಸ್ಯೆಗಳ ಚಿಂತನೆಯ ಅನಾವರಣ. ಸುತ್ತಲಿನ ನನಗಿಷ್ಟವಾದದ್ದನ್ನೆಲ್ಲ ಎತ್ತಿಕೊಂಡು ತನ್ಮಯಳಾಗುವ ಖುಷಿ, ಲಲಿತ ಪ್ರಬಂಧ.
    ಎದುರಾಗುವ ಸನ್ನಿವೇಶ, ವ್ಯಕ್ತಿಗಳನ್ನು ರಾಗಭಾವಗಳಿಂದ ಪ್ರತ್ಯೇಕಿಸಿ ನವಿರು ಹಾಸ್ಯಕ್ಕೆ ಪ್ರತಿಮೆಯಾಗಿಸಿಯೂ, ಓರೆ ಕೋರೆಗಳ ಸಾಪೇಕ್ಷತೆಯನ್ನು ಈ ಪ್ರಪಂಚದ ಸಾರ್ವತ್ರಿಕ ಸಹಜ ನಡವಳಿಕೆಯಾಗಿ ಸ್ವೀಕರಿಸುವ ಆರೋಗ್ಯಕರ ಔದಾರ್ಯವೇ ಲಲಿತಪ್ರಬಂಧದ ಜೀವನಾಡಿ. ಯಾವುದೇ ಸಾಹಿತ್ಯಿಕ ಕಾಲಘಟ್ಟದ ಹಣೆಪಟ್ಟಿಯ ಹಂಗಿಲ್ಲದೆ ಹರಿವ ಹೊಳೆ ಲಲಿತ ಪ್ರಬಂಧ. ನನ್ನ ಬೊಗಸೆಯಲಿ ಹಿಡಿವಷ್ಟು ಸಲಿಲವನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿರುವೆ. ಕನ್ನಡದಲ್ಲಿ ಗೊರೂರು, ವಿ. ಸೀ., ಪು.ತಿ.ನ., ಎ. ಎನ್. ಮೂರ್ತಿರಾಯರು, ಅ. ರಾ. ಮಿತ್ರ ಮುಂತಾದ ಲೇಖಕರು ಲಲಿತ ಪ್ರಬಂಧ ಪ್ರಕಾರವನ್ನು ಬೆಳೆಸಿದ್ದಾರೆ. ಮನೆಯ ಪುಸ್ತಕದ ರಾಶಿಯಲ್ಲಿ ಮೊದಲು ನನ್ನ ಕಣ್ಣಿಗೆ ಬಿದ್ದ ರಾ. ಕು. ಅವರ `ಗಾಳಿಪಟ’ ಪ್ರತಿಯೊಂದು ಮರು ಓದಿನಲ್ಲೂ ಅದೇ ಸಂತೋಷ ಕೊಡುವ ಕೃತಿ.

    Original price was: $2.40.Current price is: $2.16.
    Add to basket
  • -10%

    ಅತಿಥಿ ದೇವೋ ಭವ

    0

    ಅತಿಥಿ ದೇವೋ ಭವ
    (ಅತಿಥಿಯ ರಸಪ್ರಸಂಗಗಳು)

    ಸ್ವಾಮಿರಾವ ಕುಲಕರ್ಣಿಯವರ  `ಅತಿಥಿ ದೇವೋ ಭವ’ ಎಂಬ ಅತಿಥಿಯ ಅನುಭವಗಳ ರಸಪ್ರಸಂಗಗಳ ಕುರಿತಾಗಿ ಬರೆದ ಪ್ರಬಂಧಗಳ ಸಂಕಲನ.
    “ಕನ್ನಡ ಸಾಹಿತ್ಯದಲ್ಲಿ ಇದೊಂದು ಹೊಸ ಪ್ರಯೋಗದ ಅಪರೂಪದ ಸಾಹಿತ್ಯ ಪ್ರಕಾರವಾಗಿದೆ.” ೧೯೯೮ರಲ್ಲಿ ಪ್ರಕಟವಾದ ನನ್ನ `ರಂಗನಾಟಕದ ರಸಪ್ರಸಂಗಳು’- ರಂಗಾನುಭವದ ಕಿರುಲೇಖನಗಳ ಕೃತಿಯ ಬಗ್ಗೆ ಹಿರಿಯ ಸಾಹಿತಿ ದಿ. ಡಾ. ಹಾ. ಮಾ. ನಾಯಕರ ಮಾತುಗಳಿವು. ರಂಗಭೂಮಿಯ ಹಿರಿಯರಾದ ಮಾಸ್ಟರ್ ಹಿರಣ್ಣಯ್ಯನವರು “ನಾನೂ ಹಲವು ದಶಕಗಳಿಂದ ನಾಟಕ ಮಾಡತಿದ್ದೀನಿ. ಇಂತಹ ಅನೇಕ ಘಟನೆಗಳು, ಪ್ರಸಂಗಗಳು ನಡೆದಿವೆ. ನಿಮ್ಮ `ರಂಗನಾಟಕಗಳ ರಸಪ್ರಸಂಗಗಳು’ ಓದಿದ ಮೇಲೆ, ನಾನು ಇಂತಹ ಪ್ರಸಂಗಗಳನ್ನು ಬರೆಯದೇ ತಪ್ಪು ಮಾಡಿದೆ ಅನಿಸುತ್ತದೆ.’ ಈರ್ವರು ಹಿರಿಯರ ಈ ಮಾತುಗಳೇ `ಅತಿಥಿ ದೇವೋಭವ’ ಬರಹಕ್ಕೆ ಮೂಲ ಪ್ರೇರಣೆಯಾಗಿವೆ.

    Original price was: $0.84.Current price is: $0.76.
    Add to basket
  • -10%

    ಉತ್ತರ ವಿಹಾರ

    0

    ಉತ್ತರ ವಿಹಾರ
    (ಪ್ರವಾಸಕಥನ)

    ಕಳೆದ ಎರಡು ಮೂರು ವರ್ಷಗಳಲ್ಲಿ ದೇಶದ ಉತ್ತರ ಭಾಗಗಳಲ್ಲಿ ಕೈಗೊಂಡ ಪ್ರವಾಸದ ಫಲಸ್ವರೂಪ ಈ ಕೃತಿ. ಉತ್ತರಪ್ರದೇಶ ಮತ್ತು ಬಿಹಾರದ ಪ್ರಮುಖ ಪ್ರವಾಸಿ ತಾಣಗಳಲ್ಲದೆ, ಕಾಶ್ಮೀರ, ಉತ್ತರಾಖಂಡದ ಕೆಲವು ಪ್ರೇಕ್ಷಣೀಯ ಸ್ಥಳಗಳು ಹಾಗೂ ಪೂರ್ವಾಂಧ್ರ ಕುರಿತು ಎರಡು ಕಥನಗಳು ಕೃತಿಯಲ್ಲಿ ಸೇರಿವೆ. ಇವುಗಳಲ್ಲಿ ಕಾಶ್ಮೀರ ಪ್ರವಾಸ ಮಾತ್ರ ಸಹಕುಟುಂಬ ಪ್ರವಾಸವಾಗಿದ್ದರೆ, ಉಳಿದ ಪ್ರವಾಸಗಳು ಸಹೃದಯ ಸನ್ಮಿತ್ರರೊಂದಿಗೆ ಕೈಗೊಂಡ ಪ್ರವಾಸಗಳು. ನೋಡುವ ಕಣ್ಣಿಗೆ ಪ್ರತಿ ಪ್ರವಾಸವೂ ಒಂದು ಅಪೂರ್ವ ಅನುಭವವೆ. ಒಂದು ಪ್ರದೇಶದ ಇತಿಹಾಸ, ಭೂಗೋಳ, ಪರಂಪರೆ ಕುರಿತು ತೀವ್ರ ಆಸಕ್ತಿ ನನ್ನ ಪ್ರವಾಸ ಕಥನಗಳ ಹಿಂದಿನ  ಪ್ರೇರಕ ಶಕ್ತಿ. ಪ್ರತಿಯೊಂದು ವಿಶಿಷ್ಟ, ವಿಭಿನ್ನ. ನನ್ನ ಹಿಂದಿನ ಆರೂ ಪ್ರವಾಸ ಕಥನಗಳಿಗೆ ಓದುಗರಿಂದ ಒಳ್ಳೆಯ ಸ್ಪಂದನೆ ಸಿಕ್ಕಿದೆ.

    Original price was: $2.04.Current price is: $1.84.
    Add to basket
  • -10%

    ಮೊಲೆವಾಲು ನಂಜಾಗಿ

    0

    ಮೊಲೆವಾಲು ನಂಜಾಗಿ

    ಕತೆಗಳು

    ಶ್ರೀ ಮಲ್ಲಿಕಾರ್ಜುನ ಹಿರೇಮಠ

    ‘‘ಮೊಲೆವಾಲು ನಂಜಾಗಿ….’’ ಎಂಬ ಈ ಕಥಾ ಸಂಕಲನದ ತಲೆ ಬರಹವನ್ನು ಅವರು ಬಸವಣ್ಣನವರ ಒಂದು ವಚನದಿಂದ ಆಯ್ದುಕೊಂಡಿದ್ದಾರೆ. ಅಲ್ಲದೆ ಆ ಹೆಸರಿನ ಕಥೆಯೊಂದು ಈ ಸಂಕಲನದ ಕೇಂದ್ರದಲ್ಲಿಯೇ ಇದೆ. ‘‘ಅವನತಿ’’ ಕಥೆಯು ಮೇಲ್ನೋಟಕ್ಕೆ ಒಂದು ಗ್ರಾಮೀಣ ಪ್ರದೇಶದಲ್ಲಿಯ ಕಾಲೇಜಿನಲ್ಲಿ ನಡೆಯುವ ವಿದ್ಯಮಾನದಂತೆ ತೋರುತ್ತದೆ. ‘‘ತಯಾರಿ’’ ಕಥೆಯು  ಹೆಚ್ಚು ಜಟಿಲವಾಗಿದ್ದು ಕಥೆಯು ಸ್ತ್ರೀ ಕೇಂದ್ರಿತವಾಗಿದೆ. ವಿಧವೆಯೊಬ್ಬಳು ಮರುಮದುವೆಯಾಗಿದ್ದಾಳೆ. ಅವಳ ಮನೆಯವರ ವಿರೋಧದಿಂದಾಗಿ ಮತ್ತು ಗಂಡನ ತಂದೆ-ತಾಯಿಗಳಿಗೆ ಈ ಮದುವೆ ಸ್ವೀಕೃತವಾಗಿಲ್ಲವಾದುದರಿಂದ, ಪ್ರೀತಿಯ ಆಧಾರವೊಂದರಲ್ಲಿಯೇ ಅವರು ಬಾಳಬೇಕಾಗಿದೆ. ಆದರೆ ಪ್ರೀತಿಯೊಂದೇ ಆಧಾರವಾಗಿ ಬಾಳಬೇಕಿದ್ದ ಮಹಿಳೆಯು ತನ್ನ ಗಂಡನನ್ನೇ ಅರ್ಥಾತ್ ತನ್ನ ಪ್ರೀತಿಯನ್ನೇ ಕಳೆದುಕೊಂಡಾಗ ಬದುಕಲು ಅವಳು ಮಾಡಿಕೊಳ್ಳಬೇಕಾದ ಸಿದ್ಧತೆಯೇ ಈ ಕಥೆಯ ವಸ್ತು. ಸಂಕಲನದ ಕೊನೆಯ ಕಥೆ ‘‘ಮಾಗಿ’’ ಸ್ವಲ್ಪ ದೀರ್ಘವಾದ ಕತೆಯೆ. ಮೂವರು ಮಿತ್ರರು ಒಂದು ಪ್ರವಾಸದಲ್ಲಿ ತಮ್ಮನ್ನೇ ತಾವು ಗುರುತಿಸಿಕೊಳ್ಳುವ ವಿಧಾನವನ್ನು ಕುರಿತು  ಕಥೆಯು ಚಿಂತಿಸುತ್ತದೆ. 

    Original price was: $1.80.Current price is: $1.62.
    Add to basket
  • -10%

    ತುಕ್ಕಪ್ಪಾ ಮಾಸ್ತರ

    0

    ತುಕ್ಕಪ್ಪಾ ಮಾಸ್ತರ
    (ಕತೆಗಳು)

    ಶ್ರೀ ಚಂದ್ರಕಾಂತ ಕುಸನೂರ

    ಈ ಕೃತಿಯು ಶ್ರೀ ಚಂದ್ರಕಾಂತ ಕುಸನೂರರ ೮ ವಿಭಿನ್ನ ಕತೆಗಳನ್ನು ಒಳಗೊಂಡಿದೆ.

    Original price was: $1.20.Current price is: $1.08.
    Add to basket
  • -10%

    ಮಕರಂದ

    0

    ಮಕರಂದ:

    ಇದು ವಿ .ಎಸ್. ಕುಲಕರ್ಣಿ ಯವರ ಕವನ ಸಂಕಲನವಾಗಿದೆ.

    Original price was: $0.72.Current price is: $0.65.
    Add to basket
  • -10%

    ಪಂಚಾಮೃತ

    0

    ಪಂಚಾಮೃತ:

    ‘ಪಂಚಾಮೃತ’ವು ವಿ. ಎಸ್. ಅರವಿಂದ  ಅವರು ರಚಿಸಿದ ಲಘು ಕತೆಗಳನ್ನು  ಒಳಗೊಂಡಿದೆ.

    Original price was: $0.84.Current price is: $0.76.
    Add to basket
  • -10%

    ಅಕ್ಷರ ಚಿತ್ರಗಳು

    0

    ಅಕ್ಷರ ಚಿತ್ರಗಳು

    ಇದು ಹಿರಿಯ ಲೇಖಕರ ವ್ಯಕ್ತಿ ಚಿತ್ರಗಳನ್ನು ಒಳಗೊಂಡಿದೆ.

    Original price was: $1.56.Current price is: $1.40.
    Add to basket
  • -10%

    ಮೀಸೆ ಮಾವ

    0

    ಮೀಸೆ ಮಾವ

    ಮೀಸೆ ಮಾವ- ಶ್ರೀ ಭಾಸ್ಕರ ಹೆಗಡೆಯವರ ಕಥಾಸಂಕಲನ .

    Original price was: $1.56.Current price is: $1.40.
    Add to basket
  • -10%

    ಮೃತ್ಯು ಗೆದ್ದ ನಚಿಕೇತ

    0

    ಮೃತ್ಯು ಗೆದ್ದ ನಚಿಕೇತ

    ಕಠೋಪನಿಷತ್ತಿನ ಕಥಾನಕ ಆಧರಿತ ನಾಟಕ

    Original price was: $0.84.Current price is: $0.76.
    Add to basket
  • -10%

    ದಶಾವತಾರ

    0

    ದಶಾವತಾರ

    ಈ ಪುಸ್ತಕವು ಮಾಗೋಡು ರಾಮ ಹೆಗಡೆ ಅವರ ಆತ್ಮಕಥನವನ್ನು ಒಳಗೊಂಡಿದೆ.

    Original price was: $0.96.Current price is: $0.86.
    Add to basket
  • -10%

    ತ್ರಸ್ತ

    0

    ತ್ರಸ್ತ

    ಈ ಪುಸ್ತಕವು ರೇಖಾ ಕಾಖಂಡಕಿ ಅವರು ಬರೆದ ಕಾದಂಬರಿಯಾಗಿದೆ.

    Original price was: $1.56.Current price is: $1.40.
    Add to basket
  • -10%

    ಪ್ರೇಯಸಿಗೆ ಪತ್ರಗಳು

    0

    ಪ್ರೇಯಸಿಗೆ ಪತ್ರಗಳು

    ಈ ಪುಸ್ತಕವು ಕೃಷ್ಣಾ ನಂದ ಕಾಮತರ ಪತ್ರ ಸಂಕಲನವನ್ನು ಒಳಗೊಂಡಿದೆ.

    Original price was: $0.96.Current price is: $0.86.
    Add to basket
  • -10%

    ಯುದ್ದ ಯೋಧ

    0

    ಯುದ್ದ ಯೋಧ
    ಈ ಪುಸ್ತಕವು ಭಾರತೀಯ ಸೇನೆಯನ್ನು ಪರಿಚಯಿಸುತ್ತದೆ.

    Original price was: $1.80.Current price is: $1.62.
    Add to basket
  • -10%

    ಉಮೇದುವಾರರು

    0

    ಡಾ. ಲೋಹಿತ್ ನಾಯ್ಕರ ರಾಜಕೀಯ ಕಾದಂಬರಿ “ಉಮೇದುವಾರರು”.
    ಡಾ. ಲೋಹಿತ್ ನಾಯ್ಕರ ರಾಜಕೀಯದಲ್ಲೂ ತೊಡಗಿಸಿಕೊಂಡಿದ್ದರಿಂದ ರಾಜಕೀಯದ ಒಳಹೊರಗನ್ನು ಬಲ್ಲವರಾಗಿದ್ದಾರೆ. ಹಾಗಾಗಿ ಅವರ ಅನುಭವದ ಮೂಸೆಯಿಂದ ಹೊರಬಂದಿರುವ ಈ ಕಾದಂಬರಿಯ ಕಥಾವಸ್ತುವಿಗೆ ಮತ್ತು ಇಲ್ಲಿನ ಪಾತ್ರಗಳಿಗೆ ಅಧಿಕೃತತೆ ದಕ್ಕಿರುವುದರಿಂದ ಕೃತಿಯ ಘನತೆಯನ್ನು ಹೆಚ್ಚಿಸಿದೆ. ಹೈದರಾಬಾದ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕದಲ್ಲಿ ಎರಡು ರಾಜಕೀಯ ಕುಟುಂಬಗಳಲ್ಲಿ ನಡೆಯುವ ಹಗ್ಗಜಗ್ಗಾಟದ ಜೊತೆಗೆ ಮಧ್ಯ ಕರ್ನಾಟಕದಲ್ಲಿ ಹಣ, ಹೆಂಡ ಮತ್ತು ಸಾರಾಯಿ ಇವುಗಳ ಜೊತೆಗೆ ಜಾತಿವ್ಯವಸ್ಥೆ ಹೇಗೆ ರಾಜಕೀಯ ದಾಳಗಳಾಗಬಲ್ಲವು ಎಂಬುದನ್ನು ಅತ್ಯಂತ ನವಿರಾದ ಹಾಗೂ ಲವಲವಿಕೆಯ ಭಾಷೆಯಲ್ಲಿ ಲೋಹಿತ್ ಹಿಡಿದಿಟ್ಟಿದ್ದಾರೆ.

    Original price was: $3.00.Current price is: $2.70.
    Add to basket
  • -10%

    ಕ್ರಿಯಾಪದಗಳಿವೆ ಕೊಲ್ಲುವುದಕ್ಕೆ

    0

    ಶ್ರೀ ಎಸ್. ದಿವಾಕರ್ ಅವರು “ಕ್ರಿಯಾಪದಗಳಿವೆ ಕೊಲ್ಲುವುದಕ್ಕೆ’’ ಎಂಬ ಹೆಸರಿನಲ್ಲಿ ಜಗತ್ತಿನ ಅತಿ ಸಣ್ಣಕತೆಗಳನ್ನು ಸಂಗ್ರಹಿಸಿದ್ದಾರೆ. ಸುಮಾರು ೬೬ ಕತೆಗಳನ್ನು ಒಳಗೊಂಡಿರುವ ಈ ಹೊತ್ತಿಗೆ ಫ್ರಾನ್ಸ್, ರಷ್ಯಾ, ಪೋರ್ಚುಗೀಸ್, ಸ್ಪ್ಯಾನಿಶ್, ಅಮೆರಿಕ, ಸ್ವಿಡನ್, ದಕ್ಷಿಣ ಆಫ್ರಿಕಾ, ಅರ್ಜೆಂಟೀನಾ, ಇಸ್ರೆಲ್, ಗ್ರೀಸ್, ಹಂಗೇರಿ ಇನ್ನೂ ಹಲವಾರು ದೇಶಗಳ ಲೇಖಕರ ಕತೆಗಳನ್ನು ಕನ್ನಡಕ್ಕೆ ತಂದಿರುವುದು ಲೇಖಕರ ಎಲ್ಲ ಭಾಷೆಯ, ಎಲ್ಲ ಕಾಲದ, ಎಲ್ಲ ರೀತಿಯ ಬರಹಗಳ ಆಸಕ್ತಿಯನ್ನು ತಿಳಿಸುವಂತದ್ದು. ಜಗತ್ತಿನ ಅತಿ ಸಣ್ಣಕತೆಗಳನ್ನು ಸಂಗ್ರಹಿಸಿದ್ದಾರೆ.

    Original price was: $1.92.Current price is: $1.73.
    Add to basket