• -10%

    ಮತ್ತೊಬ್ಬ ರಾಧೆ

    0

    ಮತ್ತೊಬ್ಬ ರಾಧೆ
    (ಕೀರ್ತನಕಾರ್ತಿ ಗಲಗಲಿ ಅವ್ವನವರನ್ನು ಕುರಿತ ನಾಟಕ)

    ಈ ನಾಟಕವು ಹದಿನೆಂಟನೇ ಶತಮಾನದ ಕೀರ್ತನಕಾರ್ತಿ ಗಲಗಲಿ ಅವ್ವನವರನ್ನು ಕುರಿತದ್ದಾಗಿದೆ. ಬಾಗಲಕೋಟ ಜಿಲ್ಲೆಯ ಬೀಳಗಿ ತಾಲೂಕಿನ ಗಲಗಲಿಯಲ್ಲಿ ಪ್ರಸಿದ್ಧ ಪಂಡಿತರಾಗಿದ್ದ ಗಲಗಲಿ ಮುದಗಲ್ಲಾಚಾರ್ಯರ ಕಿರುಪತ್ನಿಯಾಗಿ ರಮಾ ತನ್ನ ಹನ್ನೆರಡು ವರ್ಷದಲ್ಲಿಯೇ ಮದುವೆಯಾಗಿ ಗಲಗಲಿ ಗ್ರಾಮವನ್ನು ಪ್ರವೇಶಿಸಿದಳು. ಮದುವೆಯಾದ ಎಂಟು ದಿನಕ್ಕೇ ವಿಧವೆಯಾದಳು. ವಿಧವೆಯಾಗಿ ಬತ್ತಿ ಹೊಸೆಯದೆ, ನ್ಯಾಯಪಂಡಿತಳಾಗಿ ಪೇಶ್ವೇ ಅರಸರ ಪಂಡಿತರನ್ನು ಸೋಲಿಸಿ, ಪುಣೆಯ ಅರಸರಿಂದ ವರ್ಷಾಶನ ಪಡೆದಳು. ಅವ್ವನವರ ಮುನ್ನೂರು ಕೀರ್ತನೆಗಳು ಪ್ರಕಟವಾಗಿವೆ. ಕನ್ನಡದಲ್ಲಿ ಕೀರ್ತನೆ ರಚಿಸಿದ ಮೊದಲ ಮಹಿಳೆಯೆಂಬ ಹೆಗ್ಗಳಿಕೆಗೆ ಗಲಗಲಿ ಅವ್ವ ಸಾಕ್ಷಿಯಾಗಿದ್ದಾಳೆ. ಪುಟ್ಟ ವಿಧವೆಯಾಗಿ ಕಾಣಿಸಿಕೊಂಡ ಈ ಮಹಿಳೆ ಗಲಗಲಿ ಅವ್ವನಾಗಿ ಬೆಳೆದು ನಿಂತದ್ದು, ಅಧ್ಯಾತ್ಮ ಮತ್ತು ಸಾಹಿತ್ಯದಲ್ಲಿ ಮಹತ್ತರ ಸಾಧನೆ ಮಾಡಿದ್ದು ಈಗ ಚರಿತ್ರೆಗೆ ಸೇರಿದ ವಿಷಯವಾಗಿದೆ.
    ಗಲಗಲಿ ಅವ್ವನವರ ವೈಯಕ್ತಿಕ ಬದುಕಿನ ವಿವರಗಳನ್ನು ವಿವರಿಸುವುದು ಈ ನಾಟಕದ ಉದ್ದೇಶವಲ್ಲ. ಅವ್ವನನ್ನು ಒಂದು ಪ್ರತಿಮೆಯನ್ನಾಗಿಸಿಕೊಂಡು, ಶತಮಾನಗಳಿಂದ  ಸ್ತ್ರೀ ಈ ದೇಶವ್ಯವಸ್ಥೆಯಲ್ಲಿ ಎದುರಿಸುತ್ತಿರುವ ಸವಾಲುಗಳನ್ನು ಕುರಿತು ಚರ್ಚಿಸಲಾಗಿದೆ. ಹೆಣ್ಣೊಬ್ಬಳು ಅಧ್ಯಾತ್ಮದೆತ್ತರಕ್ಕೇರಿದ ಸ್ಥಿತಿಯನ್ನು ಗುರುತಿಸಲಾಗಿದೆ.

    Original price was: $0.84.Current price is: $0.76.
    Add to basket
  • -10%

    ಇಣುಕಿದಲ್ಲಿ ಛಂದ

    0

    ಇಣುಕಿದಲ್ಲಿ ಛಂದ
    (ಲಲಿತ ಪ್ರಬಂಧಗಳು)

    ಕಾವ್ಯ ನನಗೆ ಮೌನಗಳ ಮೀಟುವ ಏಕತಾರಿ. ನಾಟಕ ಹಲವು ಸಮಸ್ಯೆಗಳ ಚಿಂತನೆಯ ಅನಾವರಣ. ಸುತ್ತಲಿನ ನನಗಿಷ್ಟವಾದದ್ದನ್ನೆಲ್ಲ ಎತ್ತಿಕೊಂಡು ತನ್ಮಯಳಾಗುವ ಖುಷಿ, ಲಲಿತ ಪ್ರಬಂಧ.
    ಎದುರಾಗುವ ಸನ್ನಿವೇಶ, ವ್ಯಕ್ತಿಗಳನ್ನು ರಾಗಭಾವಗಳಿಂದ ಪ್ರತ್ಯೇಕಿಸಿ ನವಿರು ಹಾಸ್ಯಕ್ಕೆ ಪ್ರತಿಮೆಯಾಗಿಸಿಯೂ, ಓರೆ ಕೋರೆಗಳ ಸಾಪೇಕ್ಷತೆಯನ್ನು ಈ ಪ್ರಪಂಚದ ಸಾರ್ವತ್ರಿಕ ಸಹಜ ನಡವಳಿಕೆಯಾಗಿ ಸ್ವೀಕರಿಸುವ ಆರೋಗ್ಯಕರ ಔದಾರ್ಯವೇ ಲಲಿತಪ್ರಬಂಧದ ಜೀವನಾಡಿ. ಯಾವುದೇ ಸಾಹಿತ್ಯಿಕ ಕಾಲಘಟ್ಟದ ಹಣೆಪಟ್ಟಿಯ ಹಂಗಿಲ್ಲದೆ ಹರಿವ ಹೊಳೆ ಲಲಿತ ಪ್ರಬಂಧ. ನನ್ನ ಬೊಗಸೆಯಲಿ ಹಿಡಿವಷ್ಟು ಸಲಿಲವನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿರುವೆ. ಕನ್ನಡದಲ್ಲಿ ಗೊರೂರು, ವಿ. ಸೀ., ಪು.ತಿ.ನ., ಎ. ಎನ್. ಮೂರ್ತಿರಾಯರು, ಅ. ರಾ. ಮಿತ್ರ ಮುಂತಾದ ಲೇಖಕರು ಲಲಿತ ಪ್ರಬಂಧ ಪ್ರಕಾರವನ್ನು ಬೆಳೆಸಿದ್ದಾರೆ. ಮನೆಯ ಪುಸ್ತಕದ ರಾಶಿಯಲ್ಲಿ ಮೊದಲು ನನ್ನ ಕಣ್ಣಿಗೆ ಬಿದ್ದ ರಾ. ಕು. ಅವರ `ಗಾಳಿಪಟ’ ಪ್ರತಿಯೊಂದು ಮರು ಓದಿನಲ್ಲೂ ಅದೇ ಸಂತೋಷ ಕೊಡುವ ಕೃತಿ.

    Original price was: $2.40.Current price is: $2.16.
    Add to basket
  • -10%

    ಮೊಲೆವಾಲು ನಂಜಾಗಿ

    0

    ಮೊಲೆವಾಲು ನಂಜಾಗಿ

    ಕತೆಗಳು

    ಶ್ರೀ ಮಲ್ಲಿಕಾರ್ಜುನ ಹಿರೇಮಠ

    ‘‘ಮೊಲೆವಾಲು ನಂಜಾಗಿ….’’ ಎಂಬ ಈ ಕಥಾ ಸಂಕಲನದ ತಲೆ ಬರಹವನ್ನು ಅವರು ಬಸವಣ್ಣನವರ ಒಂದು ವಚನದಿಂದ ಆಯ್ದುಕೊಂಡಿದ್ದಾರೆ. ಅಲ್ಲದೆ ಆ ಹೆಸರಿನ ಕಥೆಯೊಂದು ಈ ಸಂಕಲನದ ಕೇಂದ್ರದಲ್ಲಿಯೇ ಇದೆ. ‘‘ಅವನತಿ’’ ಕಥೆಯು ಮೇಲ್ನೋಟಕ್ಕೆ ಒಂದು ಗ್ರಾಮೀಣ ಪ್ರದೇಶದಲ್ಲಿಯ ಕಾಲೇಜಿನಲ್ಲಿ ನಡೆಯುವ ವಿದ್ಯಮಾನದಂತೆ ತೋರುತ್ತದೆ. ‘‘ತಯಾರಿ’’ ಕಥೆಯು  ಹೆಚ್ಚು ಜಟಿಲವಾಗಿದ್ದು ಕಥೆಯು ಸ್ತ್ರೀ ಕೇಂದ್ರಿತವಾಗಿದೆ. ವಿಧವೆಯೊಬ್ಬಳು ಮರುಮದುವೆಯಾಗಿದ್ದಾಳೆ. ಅವಳ ಮನೆಯವರ ವಿರೋಧದಿಂದಾಗಿ ಮತ್ತು ಗಂಡನ ತಂದೆ-ತಾಯಿಗಳಿಗೆ ಈ ಮದುವೆ ಸ್ವೀಕೃತವಾಗಿಲ್ಲವಾದುದರಿಂದ, ಪ್ರೀತಿಯ ಆಧಾರವೊಂದರಲ್ಲಿಯೇ ಅವರು ಬಾಳಬೇಕಾಗಿದೆ. ಆದರೆ ಪ್ರೀತಿಯೊಂದೇ ಆಧಾರವಾಗಿ ಬಾಳಬೇಕಿದ್ದ ಮಹಿಳೆಯು ತನ್ನ ಗಂಡನನ್ನೇ ಅರ್ಥಾತ್ ತನ್ನ ಪ್ರೀತಿಯನ್ನೇ ಕಳೆದುಕೊಂಡಾಗ ಬದುಕಲು ಅವಳು ಮಾಡಿಕೊಳ್ಳಬೇಕಾದ ಸಿದ್ಧತೆಯೇ ಈ ಕಥೆಯ ವಸ್ತು. ಸಂಕಲನದ ಕೊನೆಯ ಕಥೆ ‘‘ಮಾಗಿ’’ ಸ್ವಲ್ಪ ದೀರ್ಘವಾದ ಕತೆಯೆ. ಮೂವರು ಮಿತ್ರರು ಒಂದು ಪ್ರವಾಸದಲ್ಲಿ ತಮ್ಮನ್ನೇ ತಾವು ಗುರುತಿಸಿಕೊಳ್ಳುವ ವಿಧಾನವನ್ನು ಕುರಿತು  ಕಥೆಯು ಚಿಂತಿಸುತ್ತದೆ. 

    Original price was: $1.80.Current price is: $1.62.
    Add to basket
  • -10%

    ತುಕ್ಕಪ್ಪಾ ಮಾಸ್ತರ

    0

    ತುಕ್ಕಪ್ಪಾ ಮಾಸ್ತರ
    (ಕತೆಗಳು)

    ಶ್ರೀ ಚಂದ್ರಕಾಂತ ಕುಸನೂರ

    ಈ ಕೃತಿಯು ಶ್ರೀ ಚಂದ್ರಕಾಂತ ಕುಸನೂರರ ೮ ವಿಭಿನ್ನ ಕತೆಗಳನ್ನು ಒಳಗೊಂಡಿದೆ.

    Original price was: $1.20.Current price is: $1.08.
    Add to basket
  • -10%

    ಮಕರಂದ

    0

    ಮಕರಂದ:

    ಇದು ವಿ .ಎಸ್. ಕುಲಕರ್ಣಿ ಯವರ ಕವನ ಸಂಕಲನವಾಗಿದೆ.

    Original price was: $0.72.Current price is: $0.65.
    Add to basket
  • -10%

    ಪಂಚಾಮೃತ

    0

    ಪಂಚಾಮೃತ:

    ‘ಪಂಚಾಮೃತ’ವು ವಿ. ಎಸ್. ಅರವಿಂದ  ಅವರು ರಚಿಸಿದ ಲಘು ಕತೆಗಳನ್ನು  ಒಳಗೊಂಡಿದೆ.

    Original price was: $0.84.Current price is: $0.76.
    Add to basket
  • -10%

    ಮೀಸೆ ಮಾವ

    0

    ಮೀಸೆ ಮಾವ

    ಮೀಸೆ ಮಾವ- ಶ್ರೀ ಭಾಸ್ಕರ ಹೆಗಡೆಯವರ ಕಥಾಸಂಕಲನ .

    Original price was: $1.56.Current price is: $1.40.
    Add to basket
  • -10%

    ಮೃತ್ಯು ಗೆದ್ದ ನಚಿಕೇತ

    0

    ಮೃತ್ಯು ಗೆದ್ದ ನಚಿಕೇತ

    ಕಠೋಪನಿಷತ್ತಿನ ಕಥಾನಕ ಆಧರಿತ ನಾಟಕ

    Original price was: $0.84.Current price is: $0.76.
    Add to basket
  • -10%

    ದಶಾವತಾರ

    0

    ದಶಾವತಾರ

    ಈ ಪುಸ್ತಕವು ಮಾಗೋಡು ರಾಮ ಹೆಗಡೆ ಅವರ ಆತ್ಮಕಥನವನ್ನು ಒಳಗೊಂಡಿದೆ.

    Original price was: $0.96.Current price is: $0.86.
    Add to basket
  • -10%

    ತ್ರಸ್ತ

    0

    ತ್ರಸ್ತ

    ಈ ಪುಸ್ತಕವು ರೇಖಾ ಕಾಖಂಡಕಿ ಅವರು ಬರೆದ ಕಾದಂಬರಿಯಾಗಿದೆ.

    Original price was: $1.56.Current price is: $1.40.
    Add to basket
  • -10%

    ಪ್ರೇಯಸಿಗೆ ಪತ್ರಗಳು

    0

    ಪ್ರೇಯಸಿಗೆ ಪತ್ರಗಳು

    ಈ ಪುಸ್ತಕವು ಕೃಷ್ಣಾ ನಂದ ಕಾಮತರ ಪತ್ರ ಸಂಕಲನವನ್ನು ಒಳಗೊಂಡಿದೆ.

    Original price was: $0.96.Current price is: $0.86.
    Add to basket
  • -10%

    ಯುದ್ದ ಯೋಧ

    0

    ಯುದ್ದ ಯೋಧ
    ಈ ಪುಸ್ತಕವು ಭಾರತೀಯ ಸೇನೆಯನ್ನು ಪರಿಚಯಿಸುತ್ತದೆ.

    Original price was: $1.80.Current price is: $1.62.
    Add to basket
  • -10%

    ಉಮೇದುವಾರರು

    0

    ಡಾ. ಲೋಹಿತ್ ನಾಯ್ಕರ ರಾಜಕೀಯ ಕಾದಂಬರಿ “ಉಮೇದುವಾರರು”.
    ಡಾ. ಲೋಹಿತ್ ನಾಯ್ಕರ ರಾಜಕೀಯದಲ್ಲೂ ತೊಡಗಿಸಿಕೊಂಡಿದ್ದರಿಂದ ರಾಜಕೀಯದ ಒಳಹೊರಗನ್ನು ಬಲ್ಲವರಾಗಿದ್ದಾರೆ. ಹಾಗಾಗಿ ಅವರ ಅನುಭವದ ಮೂಸೆಯಿಂದ ಹೊರಬಂದಿರುವ ಈ ಕಾದಂಬರಿಯ ಕಥಾವಸ್ತುವಿಗೆ ಮತ್ತು ಇಲ್ಲಿನ ಪಾತ್ರಗಳಿಗೆ ಅಧಿಕೃತತೆ ದಕ್ಕಿರುವುದರಿಂದ ಕೃತಿಯ ಘನತೆಯನ್ನು ಹೆಚ್ಚಿಸಿದೆ. ಹೈದರಾಬಾದ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕದಲ್ಲಿ ಎರಡು ರಾಜಕೀಯ ಕುಟುಂಬಗಳಲ್ಲಿ ನಡೆಯುವ ಹಗ್ಗಜಗ್ಗಾಟದ ಜೊತೆಗೆ ಮಧ್ಯ ಕರ್ನಾಟಕದಲ್ಲಿ ಹಣ, ಹೆಂಡ ಮತ್ತು ಸಾರಾಯಿ ಇವುಗಳ ಜೊತೆಗೆ ಜಾತಿವ್ಯವಸ್ಥೆ ಹೇಗೆ ರಾಜಕೀಯ ದಾಳಗಳಾಗಬಲ್ಲವು ಎಂಬುದನ್ನು ಅತ್ಯಂತ ನವಿರಾದ ಹಾಗೂ ಲವಲವಿಕೆಯ ಭಾಷೆಯಲ್ಲಿ ಲೋಹಿತ್ ಹಿಡಿದಿಟ್ಟಿದ್ದಾರೆ.

    Original price was: $3.00.Current price is: $2.70.
    Add to basket
  • -10%

    ಮಾಯಿಯ ಮುಖಗಳು

    0

    ಮಾಯಿಯ ಮುಖಗಳು:

    ರಾಘವೇಂದ್ರ ಪಾಟೀಲರು ಬರೆದಂತಹ ಈ ಕಥೆಗಳು ಮನುಷ್ಯನ ನಿತ್ಯದ ಎಚ್ಚರದ ಲೋಕಕ್ಕೆ ಸಂಭಧಿಸಿದ್ದರೇ ಇನ್ನೊಂದು ಅಗಮ್ಯ ಅಘೋಚರವಾದದ್ದು. ಹಾಗೆ ಉತ್ತರ ಕರ್ನಾಟಕದ ಆಡು ಭಾಷೆಯ ಶಕ್ತಿಯನ್ನು ಸಮರ್ಥವಾಗಿ ಬಳಸಿಕೊಂಡಿದ್ದಾರೆ.

    Original price was: $1.56.Current price is: $1.40.
    Add to basket
  • -10%

    ಸೊನಾಟಾ, ಧರ್ಮ ಪುತ್ರ ವಾಸಾಂಸಿ ಜೀರ್ಣಾನಿ

    0

    ಸೊನಾಟಾ ಧರ್ಮ ಪುತ್ರ ವಾಸಾಂಸಿ ಜೀರ್ಣಾನಿ:

    ಶ್ರೀ ಮಹೇಶ ಎಲಕುಂಚವಾರ ಅವರ ‘ಸೊನಾಟಾ ಧರ್ಮ ಪುತ್ರ ವಾಸಾಂಸಿ ಜೀರ್ಣಾನಿ ‘ ಮರಾಠಿ ನಾಟಕವನ್ನು ಗಿರೀಶ ಕಾರ್ನಾಡರು ಕನ್ನಡಕ್ಕೆ ಅನುವಾದಿಸಿದ್ದಾರೆ .

    Original price was: $1.44.Current price is: $1.30.
    Add to basket
  • -10%

    ಬಿಳಿ ಸಾಹೇಬನ ಭಾರತ

    0

    ಬಿಳಿ ಸಾಹೇಬನ ಭಾರತ

    ಈ ಪುಸ್ತಕವು ಎನ್ ಜಗದೀಶ್ ಕೊಪ್ಪ  ಅವರು ಅನುವಾದಿಸಿದ ಜಿಮ್ ಕಾರ್ಬೆಟ್  ಅವರ

    ಜೀವನಗಾಥೆ.

    Original price was: $1.08.Current price is: $0.97.
    Add to basket