ಈ ಪುಸ್ತಕವು ಪಂಡಿತ ಸೇಡಿಯಾಪು ಕೃಷ್ಣ ಭಟ್ಟ ಅವರ ಜೀವನದ ಅತೀ ಸಂಕ್ಷಪ್ತ ದೃಶ್ಯ ಸಾಗರದ ಬದಲು ಹನಿ ಮಾತ್ರ ಆದರೆ ಈ ಹನಿ ಪೃವೃತ್ತ ಧರ್ಮವನ್ನು ಭೋಧಿಸುವ ಜೀವನ ಸಾರ ಬಡತನ ಕಾಯಿಲೆ ಶಿಕ್ಷಣಾವಕಾಶರಾಹಿತ್ಯ ಪ್ರತಿಕೂಲ ಪರಿಸರ ಎಳೆಹರೆಯದ ಹುಡುಗನನ್ನು ಚಿರ ಅಂಧಕಾರಕ್ಕೆ ತಳ್ಳಲು ಈ ಒಂದೊಂದೇ ಸಾಕು. ಆದರೆ ಅವನ್ನು ಎದುರಿಸಿ ಅನೇಕ ಸಂಧರ್ಭಗಳಲ್ಲಿ ಅನುಕೂಲ ಬಲಗಳಾಗಿ ಮಾರ್ಪಡಿಸಿ ಸೇಡಿಯಾಪು ಎಂಬ ಸಣ್ಣದೋಣಿ ಬಾಳು ಎಂಬ ಕಡಲಯಾನ ತೊಡಗಿಯೇ ಬಿಟ್ಟಿತು. ‘ಈಸಬೇಕು ಇದ್ದು ಜೈಸಬೇಕು !’ ವಿವರಗಳನ್ನು ಇಲ್ಲಿ ಒಂದು ಜೀವಂತ ಕಾದಂಬರಿಯ ಧಾಟಿಯಲ್ಲಿ ಓದಬಹುದು. ವೈದೇಹಿ ಅವರು ಈ ಪುಸ್ತಕವನ್ನು ರಚಿಸಿದ್ದಾರೆ.