ತಲೆ ಬುರುಡೆ
ಬಿಡಿಸಿದ ಕೊಲೆ ರಹಸ್ಯ
ಮೂಲ : ಶ್ರೀ ಕೆ. ರಾಮಯ್ಯ ರೈ
ಅನುವಾದ: ಕೆದಂಬಾಡಿ ಜತ್ತಪ್ಪ ರೈ
ಸಮಾಜದ ಈ ಸ್ವಾಸ್ಥ್ಯ ಕಾಪಾಡಲು ನಾವೇ ಪೊಲೀಸ್ ವ್ಯವಸ್ಥೆ ಮಾಡಿಕೊಂಡಿದ್ದೇವೆ. ಪೊಲೀಸರು ನಾಗರಿಕರ ಸ್ನೇಹಿತರಾಗಿದ್ದರೆ ಅದರಿಂದ ಎಲ್ಲರಿಗೂ ಹಿತ. ಒಳ್ಳೆಯ ಪೊಲೀಸ್ ಅಧಿಕಾರಿಗಳಿಗೆ ಯಾವತ್ತೂ ಜನರ ನೈತಿಕ ಬೆಂಬಲ ಸಿಕ್ಕಿಯೇ ಸಿಗುತ್ತದೆ. ಪೊಲೀಸರೇ ನಾಗರಿಕರ ಸಹಕಾರ ಪಡೆಯದೆ ದೂರ ಸರಿದರೆ ಈ ಮಾತು ವಿರೋಧಾಭಾಸದ್ದು ಅನಿಸುತ್ತದೆ.
ಆದರೆ ನಮ್ಮ ನಡುವೆ ಶ್ರೀ ಕೆ. ರಾಮಯ್ಯ ರೈ ಅವರಂಥ ದಕ್ಷ, ಪ್ರಾಮಾಣಿಕ ಪೊಲೀಸ್ ಅಧಿಕಾರಿಗಳೂ ಇದ್ದರು. ಅವರ ಅನುಭವ ನೆನಪುಗಳೇ ಇಂದಿನವರಿಗೆ ಆದರ್ಶವಾಗಲಿ. ಅವರ ಸ್ವಾನುಭವದ ಸತ್ಯಕಥೆ ‘ತಲೆಬುರುಡೆ’ ಕಾದಂಬರಿ ರೂಪದಲ್ಲಿ ಸ್ವಾರಸ್ಯಕರವಾಗಿ ಹರಿದು ಬಂತು.