ಶ್ರೀ ವಿಷ್ಣು ಸಹಸ್ರ ನಾಮ ಶ್ರೀ ಗುರುಭ್ಯೋ ನಮಃ ಹರಿಃ ಓಂ ಮಹಾಭಾರತ ಯುದ್ಧ ಮುಗಿದಿದೆ. ಭೀಷ್ಮಾಚಾರ್ಯರು ಶರಶಯ್ಯದಲ್ಲಿದ್ದಾರೆ ಧರ್ಮರಾಯನ ಪಟ್ಟಾಭಿಷೇಕ ಶ್ರೀಕೃಷ್ಣ ಮತ್ತು ವ್ಯಾಸರ ಸಮ್ಮುಖದಲ್ಲಿ ನಡೆದಿದೆ. ಒತ್ತಾಯದಲ್ಲಿ ಪಟ್ಟಾಭಿಷೇಕಕ್ಕೆ ಒಪ್ಪಿದ್ದ ಯುಧಿಷ್ಠಿರನ ಮನಸ್ಸಿಗೆ ಕಿಂಚಿತ್ತೂ ಸಮಾಧಾನವಿಲ್ಲ. ಎಲ್ಲಾ ವೀರರುˌ ಹಿರಿಯರುˌ ಲಕ್ಷ-ಲಕ್ಷ ಮಂದಿ ಸೈನಿಕರ ನಾಶದ ನಂತರ ಸಿಂಹಾಸನವೇರಿದ ಆತನಿಗೆ ಪಾಪ ಪ್ರಜ್ಞೆ ಕಾಡುತ್ತಿರುತ್ತದೆ. ಇಂತಹ ಸ್ಥಿತಿಯಲ್ಲಿದ್ದ ಧರ್ಮರಾಯನನ್ನು ಶ್ರೀಕೃಷ್ಣ ಭೀಷ್ಮಾಚಾರ್ಯರ ಬಳಿಗೆ ಕರೆತಂದು ಆತನಿಗೆ ಧರ್ಮ ಪಾಠವನ್ನು ಬೋಧಿಸುವಂತೆ ಕೇಳಿಕೊಳ್ಳುತ್ತಾನೆ. ಧರ್ಮದ ಪರ […]
